Advertisement
MIRROR FOCUS

ಆಭರಣ ಪ್ರಿಯರಿಗೆ ಶುಭಸುದ್ದಿ | ಹಟ್ಟಿ ಚಿನ್ನದ ಗಣಿಯಲ್ಲಿ ಆಗಸ್ಟ್​​ನಲ್ಲಿ ಬರೋಬ್ಬರಿ 100 ಕೆಜಿಗೂ ಅಧಿಕ ಚಿನ್ನ ಉತ್ಪಾದನೆ

Share

ಹೆಂಗಳೆಯರ ಮೈ-ಮನವೆಲ್ಲಾ ಚಿನ್ನದ್ದೇ ಯೋಚನೆ. ಚಿನ್ನGold ಅಂದ್ರೆ ಯಾರಿಗೆ ಇಷ್ಟ ಇಲ್ಲ ಹೇಳಿ. ಬೆಲೆ ಗಗನಕ್ಕೇರುತ್ತಿದ್ದರೂ ಚಿನ್ನದ Gold Price  ಮೇಲಿನ ವ್ಯಾಮೋಹ ಮಾತ್ರ ಕಡಿಮೆಯಾಗದೇ ಅದು ದಿನದಿಂದ ದಿನಕ್ಕೆ ಹೆಚ್ಚಾಗುತ್ತದೆ. ಆದರಲ್ಲೂ ಹೂಡಿಕೆದಾರರು Gold Investment ಮತ್ತು ಆಭರಣ ಪ್ರಿಯರು ಚಿನ್ನದ ಬೆಲೆ ಇಳಿಕೆಯಾಗೋದನ್ನು ಕಾಯುತ್ತಿರುತ್ತಾರೆ.

ನಮ್ಮ ರಾಜ್ಯದಲ್ಲಿಯೇ ಅತ್ಯಧಿಕ ಚಿನ್ನ ಉತ್ಪಾದನೆ Gold Production ಆಗುತ್ತೆ ಅನ್ನೋ ವಿಷಯ ಎಲ್ಲರಿಗೂ ತಿಳಿದಿರುವ ವಿಚಾರ. ರಾಯಚೂರು Raichur ಜಿಲ್ಲೆಯ ಲಿಂಗಸ್ಗೂರು ತಾಲೂಕಿನ ಹಟ್ಟಿ ಎಂಬಲ್ಲಿ ಚಿನ್ನ ಉತ್ಪಾದನೆ ಮಾಡಲಾಗುತ್ತದೆ. ಈ ಬಾರಿ ಅಂದ್ರೆ ಆಗಸ್ಟ್ ತಿಂಗಳಲ್ಲಿ ಹಟ್ಟಿ ಚಿನ್ನದ ಗಣಿಯಿಂದ ಅತ್ಯಧಿಕ ಬಂಗಾರವನ್ನು ಉತ್ಪಾದಿಸಲಾಗಿದೆ. 2023-24ರ ಆರ್ಥಿಕ ವರ್ಷದಲ್ಲಿ ಇದು ಅತ್ಯಧಿಕ ಚಿನ್ನದ ಉತ್ಪಾದನೆ ಎಂದು ವರದಿಯಾಗಿದೆ. ಸರ್ಕಾರಿ ಸ್ವಾಮ್ಯದ ಹಟ್ಟಿ ಚಿನ್ನದ ಕಂಪನಿ ಈ ವರ್ಷ ಅಂದ್ರೆ 2023-24ರಲ್ಲಿ 1,800 ಕೆಜಿ ಬಂಗಾರ ಉತ್ಪಾದನೆಯ ಗುರಿಯನ್ನು ಹೊಂದಿದೆ. ಆಗಸ್ಟ್​ನಲ್ಲಿಯೇ ಬರೋಬ್ಬರಿ 100 ಕೆಜಿಗೂ ಅಧಿಕ ಚಿನ್ನವನ್ನು ಉತ್ಪಾದಿಸಲಾಗಿದೆ. ಈ ವರ್ಷ ಏಪ್ರಿಲ್​ನಿಂದ ಜುಲೈವರೆಗೆ ಅಂದರೆ 5 ತಿಂಗಳ ಅವಧಿಯಲ್ಲಿ 501.865 ಕೆಜಿ ಚಿನ್ನವನ್ನು ಉತ್ಪಾದಿಸಲಾಗಿದೆ. ಈ ಐದು ತಿಂಗಳಲ್ಲಿ ಚಿನ್ನದ ಉತ್ಪಾದನೆ 100 ಕೆಜಿ ದಾಟಿರಲಿಲ್ಲ. ಆಗಸ್ಟ್​​​ನಲ್ಲಿ 110.600 ಕೆಜಿ ಚಿನ್ನ ಉತ್ಪಾದಿಸುವ ಮೂಲಕ ಹಟ್ಟಿ ಚಿನ್ನದ ಗಣಿ ವಿಶೇಷ ದಾಖಲೆಯನ್ನು ಬರೆದಿದೆ.  48,914 ಮೆಟ್ರಿಕ್ ಟನ್ ಅದಿರು ಸಂಸ್ಕರಿಸಿದಾಗ 110.600  ಕೆಜಿ ಚಿನ್ನ ಹೊರ ಬಂದಿದೆ.

ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

2 hours ago

ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?

ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…

3 hours ago

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?

ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…

10 hours ago

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

16 hours ago

ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!

ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…

16 hours ago

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

1 day ago