Advertisement
ಸುದ್ದಿಗಳು

8 ತಿಂಗಳಲ್ಲಿ 50ಕ್ಕೂ ಹೆಚ್ಚು ಅಧಿಕಾರಿಗಳು ಲೋಕಾಯುಕ್ತ ಬಲೆಗೆ

Share

ಬೆಂಗಳೂರು ನಗರದಲ್ಲಿ ಕೇವಲ 8 ತಿಂಗಳಿನಲ್ಲಿ 50ಕ್ಕೂ ಹೆಚ್ಚು ಸರ್ಕಾರಿ ಅಧಿಕಾರಿಗಳು ಬಲೆಗೆ ಬಿದ್ದಿರುವುದು, ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರ ಎಷ್ಟರ ಮಟ್ಟಿಗೆ ಬೇರೂರಿಗೆ ಎಂಬುದಕ್ಕೆ ಸಾಕ್ಷಿಯಾಗಿದೆ ಎಂದು ಲೋಕಾಯುಕ್ತ ವಿಶೇಷ ನ್ಯಾಯಾಲಯ ಕಿಡಿಕಾರಿದೆ. ಈ ಬಗ್ಗೆ ಕನ್ನಡಪ್ರಭ  ದಿನಪತ್ರಿಕೆ ವರದಿ ಮಾಡಿದೆ.

ವೈದ್ಯರ ಪತ್ನಿಯಿಂದ 25,000 ರೂ. ಲಂಚ ಪಡೆಯುವಾಗ ಸಿಕ್ಕಿಬಿದ್ದ ವಾಣಿಜ್ಯ ತೆರಿಗೆಗಳ ಜಂಟಿ ಆಯುಕ್ತ ಡಾ. ಎಸ್. ರಾಮಾನುಜ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ತಿರಸ್ಕರಿಸುವಾಗ ನ್ಯಾಯಾಲಯ ಈ ಅಭಿಪ್ರಾಯಗಳನ್ನು ನೀಡಿದೆ. ಲಂಚ ನೀಡದೆ ಯಾವುದೇ ಕೆಲಸವನ್ನು ಸರ್ಕಾರಿ ಕಚೇರಿಗಳಿಂದ ಮಾಡಿಸಿಕೊಳ್ಳಲು ಸಾಧ್ಯವಿಲ್ಲ ಎಂಬಂತಹ ಭಾವನೆ ಮೂಡತೊಡಗಿದೆ. ಕೆಲ ವ್ಯಕ್ತಿಗಳು ಇಂತಹ ಭ್ರಷ್ಟ್ರ ಅಧಿಕಾರಿಗಳ ಕುರಿತು ಸಹಾನುಭೂತಿ ವ್ಯಕ್ತಪಡಿಸುತ್ತಾರೆ. ಏಕೆಂದರೆ ಅಧಿಕಾರಿಕ್ಕೆ ಬಂದ ವ್ಯಕ್ತಿ ಕೂಡ ಲಂಚ ಕೊಟ್ಟೇ ಸ್ಥಾನ ಗಿಟ್ಟಿಸಿಕೊಂಡಿರುತ್ತಾನೆ. ಆದರೆ, ತಮ್ಮ ಜೀವನೋಪಾಯಕ್ಕಾಗಿ ಹೆಣಗಾಡುತ್ತಿರುವ ಮಧ್ಯಮ ವರ್ಗದ, ಬಡ ಮತ್ತು ಅಸಹಾಯಕ ಜನರು ಇಲ್ಲಿ ಬಲಿಪಶುಗಳಾಗುತ್ತಿದ್ದಾರೆ. ವ್ಯವಸ್ಥೆಯಲ್ಲಿ ಇವರು ಭರವಸೆ ಕಳೆದುಕೊಳ್ಳುತ್ತಿದ್ದಾರೆ. ಇದನ್ನು ನಾವು ಯೋಚಿಸುತ್ತಿಲ್ಲ. ಬೇರೆ ರೀತಿಯಲ್ಲಿ ಹೇಳುವುದಾದರೆ, ಭ್ರಷ್ಟಾಚಾರದ ಕ್ಯಾನ್ಸರ್ ಎಂಬ ಬೀಜವು ಸಾಂವಿಧಾನಿಕ ಉದ್ದೇಶವನ್ನೇ ಕೊಲ್ಲುತ್ತಿದೆ. ಆದ್ದರಿಂದ, ನಾವೆಲ್ಲರೂ ಆತ್ಮಾವಲೋಕನ ಮಾಡಿಕೊಳ್ಳುವ ಮತ್ತು ಈ ಪಿಡುಗನ್ನು ಕೊನೆಗಾಣಿಸುವ ಜವಾಬ್ದಾರಿಯನ್ನು ಅರಿತುಕೊಳ್ಳುವ ಸಮಯ ಇದಾಗಿದೆ ಎಂದು ನ್ಯಾಯಾಲಯ ತಿಳಿಸಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

3 hours ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

3 hours ago

18 ಕರಿಮೆಣಸು ತಳಿಗಳ ನರ್ಸರಿ ನಿರ್ಮಿಸಿ ಯಶಸ್ಸು ಕಂಡ ಯುವ ರೈತ

ಕಣ್ಣೂರಿನ ಜಿನೇಶ್ ಕಲಿಯಾಣಿ 18 ಕರಿಮೆಣಸು ತಳಿಗಳ ನರ್ಸರಿ, ಮಿಶ್ರ ಕೃಷಿ ಮತ್ತು…

13 hours ago

ಭಾರೀ ಮಳೆ ಹಿನ್ನೆಲೆ: ದಕ್ಷಿಣ ಕನ್ನಡದ ಶಾಲೆ-ಕಾಲೇಜುಗಳಿಗೆ ಇಂದು ರಜೆ -ಉತ್ತರ ಕನ್ನಡದ ಕೆಲವು ತಾಲೂಕಿನಲ್ಲೂ ರಜೆ ಘೋಷಣೆ

ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ,…

14 hours ago

ಭಾರೀ ಮಳೆ ಹಿನ್ನೆಲೆ – ದಕ್ಷಿಣ ಕನ್ನಡದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…

2 days ago

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

2 days ago