Advertisement
ಸುದ್ದಿಗಳು

ಸುಡಾನ್‌ನಲ್ಲಿ ಭಾರೀ ಮಳೆಗೆ ಅನಾಹುತ | ಕೊಚ್ಚಿ ಹೋಯ್ತು ಅರ್ಬತ್ ಅಣೆಕಟ್ಟು | 60ಕ್ಕೂ ಹೆಚ್ಚು ಮಂದಿ ಸಾವು, ಹಲವರು ನಾಪತ್ತೆ

Share

ಇತ್ತೀಚೆಗೆ ಮಧ್ಯ ಕರ್ನಾಟಕದ(Karnataka) ಜೀವನಾಡಿಯಾಗಿದ್ದ ತುಂಗಭದ್ರಾ ಅಣೆಕಟ್ಟು(Tunga BHadra Dam) ಕ್ರಸ್ಟ್‌ ಗೇಟ್‌ ಮುರಿದು ಧಾರಾಕಾರ ನೀರು ಹರಿದು ಹೋಗಿತ್ತು. ಜಲಾಶಯ ಭರ್ತಿ ಇದ್ದ ಹಿನ್ನೆಲೆ ಒಂದು ವೇಳೆ ಅಣೆಕಟ್ಟೆ ಒಡೆದು ಹೋದರೆ ಎನ್ನುವ ಭಯ ಕಾಡಿದ್ದು ಮಾತ್ರ ಸುಳ್ಳಲ್ಲ. ಇದೀಗ ಯುದ್ಧ ಪೀಡಿತ ಸುಡಾನ್‌ನಲ್ಲಿ (Sudan) ಭಾರೀ ಮಳೆಯಿಂದಾಗಿ ಅಣೆಕಟ್ಟು (Dam Burst) ಒಡೆದು ಕನಿಷ್ಠ 60 ಜನರು ಸಾವನ್ನಪ್ಪಿದ್ದು, ಹಲವು ಮಂದಿ ನಾಪತ್ತೆಯಾದ ಘಟನೆ ನಡೆದಿದೆ. ಧಾರಾಕಾರ ಮಳೆಯಿಂದಾಗಿ ಕೆಂಪು ಸಮುದ್ರದ ಸಮೀಪದಲ್ಲಿದ್ದ ಅರ್ಬತ್ ಅಣೆಕಟ್ಟು (Arbaat Dam) ಕೊಚ್ಚಿಹೋಗಿದೆ. ನೀರು ಸುಮಾರು 20 ಹಳ್ಳಿಗಳಿಗೆ ನುಗ್ಗಿದ್ದು 50 ಸಾವಿರ ಮನೆಗಳು ಕೊಚ್ಚಿ ಹೋಗಿದೆ ಎಂದು ವರದಿಯಾಗಿದೆ.

ಅರ್ಬತ್ ಅಣೆಕಟ್ಟು 25 ಮಿಲಿಯನ್ ಕ್ಯೂಬಿಕ್ ಮೀಟರ್ ಸಾಮರ್ಥ್ಯವನ್ನು ಹೊಂದಿತ್ತು. ಕರಾವಳಿ ನಗರವಾದ ಪೋರ್ಟ್ ಸುಡಾನ್‌ನ ಕುಡಿಯುವ ನೀರಿನ ಮುಖ್ಯ ಮೂಲವಾಗಿತ್ತು. ಕೊಚ್ಚಿಕೊಂಡು ಹೋದ ಪ್ರದೇಶವನ್ನು ಗುರುತಿಸಲು ಸಾಧ್ಯವಾಗುತ್ತಿಲ್ಲ. ನೆರೆಗೆ ವಿದ್ಯುತ್ ಕಂಬ ಮತ್ತು ನೀರಿನ ಪೈಪ್‌ಗಳು ನಾಶವಾಗಿವೆ. ಚಿನ್ನದ ಗಣಿಯಲ್ಲಿ ಕೆಲಸ ಮಾಡುತ್ತಿದ್ದ 150 ರಿಂದ 200 ಮಂದಿ ಕಾಣೆಯಾಗಿದ್ದಾರೆ.  ದುರಂತ ಸಂಭವಿಸುವ ಮೊದಲೇ ಅಣೆಕಟ್ಟು ಕಳಪೆ ಸ್ಥಿತಿಯಲ್ಲಿತ್ತು. ಅಣೆಕಟ್ಟುಗಳು, ರಸ್ತೆಗಳು ಮತ್ತು ಸೇತುವೆಗಳು ಸೇರಿದಂತೆ ಸುಡಾನ್‌ನಲ್ಲಿ ಮೂಲಸೌಕರ್ಯವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ.

ಏಪ್ರಿಲ್ 2023 ರಿಂದ ಸೇನೆ ಮತ್ತು ಅರೆಸೇನಾ ಪಡೆಗಳ ನಡುವಣ ಸಂಘರ್ಷದಿಂದ ಸುಡಾನ್ ಈಗಾಗಲೇ ತತ್ತರಿಸಿ ಹೋಗಿದೆ. ಈಗ ಭಾರೀ ಮಳೆಯಿಂದಾಗಿ ಮತ್ತೊಂದು ಸಂಕಷ್ಟಕ್ಕೆ ಸಿಲುಕಿದೆ. ಈ ವರ್ಷ ದೇಶಾದ್ಯಂತ  ಪ್ರವಾಹದಲ್ಲಿ 132 ಜನರು ಸಾವನ್ನಪ್ಪಿದ್ದಾರೆ, 118,000 ಜನರು ಸ್ಥಳಾಂತರಗೊಂಡಿದ್ದಾರೆ ಎಂದು ಸರ್ಕಾರ ಈ ಮೊದಲು ತಿಳಿಸಿತ್ತು.

  • ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

1 hour ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

10 hours ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

11 hours ago

ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?

ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…

12 hours ago

ಮಂಗಳೂರು ಅಡಿಕೆ ಮಾರುಕಟ್ಟೆ | ಐದು ವರ್ಷದ ಧಾರಣೆ ಹೇಳುವ ಏರುಪೇರುಗಳ ಕಥೆ..!

ಐದು ವರ್ಷದ ದತ್ತಾಂಶವು ಮಂಗಳೂರು ಅಡಿಕೆ ಮಾರುಕಟ್ಟೆ ಚಕ್ರಾಕಾರ ಸ್ವಭಾವ ಹೊಂದಿರುವುದನ್ನು ತೋರಿಸಿದೆ.…

1 day ago

ಮಾರ್ಚ್‌ನಲ್ಲಿ‌ ಮಳೆ ಶಾಕ್….! ರೈತರಿಗೆ ನಷ್ಟದ ಭೀತಿ

ದೇಶದ ವಿವಿದೆಡೆ ಮಾರ್ಚ್‌ ತಿಂಗಳಲ್ಲಿ ಉತ್ತಮ ಮಳೆಯಾಗಿದೆ. ವಿಶೇಷವಾಗಿ ರಾಜ್ಕೋಟ್‌ನಲ್ಲಿ ಅಸಾಮಾನ್ಯ ಹವಾಮಾನದಿಂದ…

1 day ago