Advertisement
ಸುದ್ದಿಗಳು

ಸುಡಾನ್‌ನಲ್ಲಿ ಭಾರೀ ಮಳೆಗೆ ಅನಾಹುತ | ಕೊಚ್ಚಿ ಹೋಯ್ತು ಅರ್ಬತ್ ಅಣೆಕಟ್ಟು | 60ಕ್ಕೂ ಹೆಚ್ಚು ಮಂದಿ ಸಾವು, ಹಲವರು ನಾಪತ್ತೆ

Share

ಇತ್ತೀಚೆಗೆ ಮಧ್ಯ ಕರ್ನಾಟಕದ(Karnataka) ಜೀವನಾಡಿಯಾಗಿದ್ದ ತುಂಗಭದ್ರಾ ಅಣೆಕಟ್ಟು(Tunga BHadra Dam) ಕ್ರಸ್ಟ್‌ ಗೇಟ್‌ ಮುರಿದು ಧಾರಾಕಾರ ನೀರು ಹರಿದು ಹೋಗಿತ್ತು. ಜಲಾಶಯ ಭರ್ತಿ ಇದ್ದ ಹಿನ್ನೆಲೆ ಒಂದು ವೇಳೆ ಅಣೆಕಟ್ಟೆ ಒಡೆದು ಹೋದರೆ ಎನ್ನುವ ಭಯ ಕಾಡಿದ್ದು ಮಾತ್ರ ಸುಳ್ಳಲ್ಲ. ಇದೀಗ ಯುದ್ಧ ಪೀಡಿತ ಸುಡಾನ್‌ನಲ್ಲಿ (Sudan) ಭಾರೀ ಮಳೆಯಿಂದಾಗಿ ಅಣೆಕಟ್ಟು (Dam Burst) ಒಡೆದು ಕನಿಷ್ಠ 60 ಜನರು ಸಾವನ್ನಪ್ಪಿದ್ದು, ಹಲವು ಮಂದಿ ನಾಪತ್ತೆಯಾದ ಘಟನೆ ನಡೆದಿದೆ. ಧಾರಾಕಾರ ಮಳೆಯಿಂದಾಗಿ ಕೆಂಪು ಸಮುದ್ರದ ಸಮೀಪದಲ್ಲಿದ್ದ ಅರ್ಬತ್ ಅಣೆಕಟ್ಟು (Arbaat Dam) ಕೊಚ್ಚಿಹೋಗಿದೆ. ನೀರು ಸುಮಾರು 20 ಹಳ್ಳಿಗಳಿಗೆ ನುಗ್ಗಿದ್ದು 50 ಸಾವಿರ ಮನೆಗಳು ಕೊಚ್ಚಿ ಹೋಗಿದೆ ಎಂದು ವರದಿಯಾಗಿದೆ.

Advertisement
Advertisement
ಅರ್ಬತ್ ಅಣೆಕಟ್ಟು 25 ಮಿಲಿಯನ್ ಕ್ಯೂಬಿಕ್ ಮೀಟರ್ ಸಾಮರ್ಥ್ಯವನ್ನು ಹೊಂದಿತ್ತು. ಕರಾವಳಿ ನಗರವಾದ ಪೋರ್ಟ್ ಸುಡಾನ್‌ನ ಕುಡಿಯುವ ನೀರಿನ ಮುಖ್ಯ ಮೂಲವಾಗಿತ್ತು. ಕೊಚ್ಚಿಕೊಂಡು ಹೋದ ಪ್ರದೇಶವನ್ನು ಗುರುತಿಸಲು ಸಾಧ್ಯವಾಗುತ್ತಿಲ್ಲ. ನೆರೆಗೆ ವಿದ್ಯುತ್ ಕಂಬ ಮತ್ತು ನೀರಿನ ಪೈಪ್‌ಗಳು ನಾಶವಾಗಿವೆ. ಚಿನ್ನದ ಗಣಿಯಲ್ಲಿ ಕೆಲಸ ಮಾಡುತ್ತಿದ್ದ 150 ರಿಂದ 200 ಮಂದಿ ಕಾಣೆಯಾಗಿದ್ದಾರೆ.  ದುರಂತ ಸಂಭವಿಸುವ ಮೊದಲೇ ಅಣೆಕಟ್ಟು ಕಳಪೆ ಸ್ಥಿತಿಯಲ್ಲಿತ್ತು. ಅಣೆಕಟ್ಟುಗಳು, ರಸ್ತೆಗಳು ಮತ್ತು ಸೇತುವೆಗಳು ಸೇರಿದಂತೆ ಸುಡಾನ್‌ನಲ್ಲಿ ಮೂಲಸೌಕರ್ಯವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ.

ಏಪ್ರಿಲ್ 2023 ರಿಂದ ಸೇನೆ ಮತ್ತು ಅರೆಸೇನಾ ಪಡೆಗಳ ನಡುವಣ ಸಂಘರ್ಷದಿಂದ ಸುಡಾನ್ ಈಗಾಗಲೇ ತತ್ತರಿಸಿ ಹೋಗಿದೆ. ಈಗ ಭಾರೀ ಮಳೆಯಿಂದಾಗಿ ಮತ್ತೊಂದು ಸಂಕಷ್ಟಕ್ಕೆ ಸಿಲುಕಿದೆ. ಈ ವರ್ಷ ದೇಶಾದ್ಯಂತ  ಪ್ರವಾಹದಲ್ಲಿ 132 ಜನರು ಸಾವನ್ನಪ್ಪಿದ್ದಾರೆ, 118,000 ಜನರು ಸ್ಥಳಾಂತರಗೊಂಡಿದ್ದಾರೆ ಎಂದು ಸರ್ಕಾರ ಈ ಮೊದಲು ತಿಳಿಸಿತ್ತು.

Advertisement
  • ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗ್ರಾಮಗಳಲ್ಲಿ ನೀರಿನ ಹೊಂಡ | ಚಿತ್ರದುರ್ಗ ಜಿಲ್ಲೆಯ 7 ಹಳ್ಳಿಗಳಲ್ಲಿ ವಿಶ್ವಬ್ಯಾಂಕ್ ನೆರವಿನ ಯೋಜನೆ ಅನುಷ್ಟಾನ |

ಚಿತ್ರದುರ್ಗ ಜಿಲ್ಲೆಯ 7 ಹಳ್ಳಿಗಳಲ್ಲಿ 5 ಸಾವಿರದ 171 ಹೆಕ್ಟೇರ್ ಪ್ರದೇಶದಲ್ಲಿ ಯೋಜನೆ…

6 hours ago

ಕಿಸಾನ್‌ ಸಮ್ಮಾನ್‌ ನಿಧಿಯ ಮೂಲಕ ರೈತರಿಗೆ 21,000 ಕೋಟಿ ರೂಪಾಯಿ |

ಕಿಸಾನ್‌ ಸಮ್ಮಾನ್‌ ನಿಧಿಯಿಂದ 9 ಕೋಟಿ 50 ಲಕ್ಷ  ರೈತರಿಗೆ  21 ಸಾವಿರ…

8 hours ago

ತುಮಕೂರು ಜಿಲ್ಲೆಯಲ್ಲಿ ದಾಖಲೆಯ ಹಾಲು ಉತ್ಪಾದನೆ

ತುಮಕೂರು ಜಿಲ್ಲೆಯಲ್ಲಿ 1351 ಹಾಲು ಉತ್ಪಾದಕರ ಸಹಕಾರ ಸಂಘಗಳು ಕಾರ್ಯನಿರ್ವಹಿಸುತ್ತಿದ್ದು, ಪ್ರತಿನಿತ್ಯ 9.40…

8 hours ago

ಕೋಲಾರದಲ್ಲಿ ಸಾವಿರಕ್ಕೂ ಅಧಿಕ ನಕಲಿ ವೈದ್ಯರ ವಿರುದ್ಧ ಪ್ರಕರಣ |

ಖಾಸಗಿ ಮೆಡಿಕಲ್ ಕಾಲೇಜುಗಳಲ್ಲಿನ  ಜೈವಿಕ ತ್ಯಾಜ್ಯಗಳನ್ನು ನಗರಸಭೆ ಕಸ ಹಾಗೂ ಜನನಿಬಿಡ ಪ್ರದೇಶಗಳಲ್ಲಿ…

8 hours ago

ಹೊರನಾಡು ದೇವಾಲಯದಲ್ಲಿ ವಸ್ತ್ರ ಸಂಹಿತೆ ಜಾರಿ

ಚಿಕ್ಕಮಗಳೂರು ಜಿಲ್ಲೆಯ ಹೊರನಾಡಿನ ಪ್ರಸಿದ್ದ ಅನ್ನಪೂರ್ಣೇಶ್ವರಿ ದೇವಾಲಯದಲ್ಲಿ ವಸ್ತ್ರ ಸಂಹಿತೆ ಜಾರಿಗೆ ತರಲಾಗಿದೆ…

9 hours ago