Advertisement
ಸುದ್ದಿಗಳು

ಸುಡಾನ್‌ನಲ್ಲಿ ಭಾರೀ ಮಳೆಗೆ ಅನಾಹುತ | ಕೊಚ್ಚಿ ಹೋಯ್ತು ಅರ್ಬತ್ ಅಣೆಕಟ್ಟು | 60ಕ್ಕೂ ಹೆಚ್ಚು ಮಂದಿ ಸಾವು, ಹಲವರು ನಾಪತ್ತೆ

Share

ಇತ್ತೀಚೆಗೆ ಮಧ್ಯ ಕರ್ನಾಟಕದ(Karnataka) ಜೀವನಾಡಿಯಾಗಿದ್ದ ತುಂಗಭದ್ರಾ ಅಣೆಕಟ್ಟು(Tunga BHadra Dam) ಕ್ರಸ್ಟ್‌ ಗೇಟ್‌ ಮುರಿದು ಧಾರಾಕಾರ ನೀರು ಹರಿದು ಹೋಗಿತ್ತು. ಜಲಾಶಯ ಭರ್ತಿ ಇದ್ದ ಹಿನ್ನೆಲೆ ಒಂದು ವೇಳೆ ಅಣೆಕಟ್ಟೆ ಒಡೆದು ಹೋದರೆ ಎನ್ನುವ ಭಯ ಕಾಡಿದ್ದು ಮಾತ್ರ ಸುಳ್ಳಲ್ಲ. ಇದೀಗ ಯುದ್ಧ ಪೀಡಿತ ಸುಡಾನ್‌ನಲ್ಲಿ (Sudan) ಭಾರೀ ಮಳೆಯಿಂದಾಗಿ ಅಣೆಕಟ್ಟು (Dam Burst) ಒಡೆದು ಕನಿಷ್ಠ 60 ಜನರು ಸಾವನ್ನಪ್ಪಿದ್ದು, ಹಲವು ಮಂದಿ ನಾಪತ್ತೆಯಾದ ಘಟನೆ ನಡೆದಿದೆ. ಧಾರಾಕಾರ ಮಳೆಯಿಂದಾಗಿ ಕೆಂಪು ಸಮುದ್ರದ ಸಮೀಪದಲ್ಲಿದ್ದ ಅರ್ಬತ್ ಅಣೆಕಟ್ಟು (Arbaat Dam) ಕೊಚ್ಚಿಹೋಗಿದೆ. ನೀರು ಸುಮಾರು 20 ಹಳ್ಳಿಗಳಿಗೆ ನುಗ್ಗಿದ್ದು 50 ಸಾವಿರ ಮನೆಗಳು ಕೊಚ್ಚಿ ಹೋಗಿದೆ ಎಂದು ವರದಿಯಾಗಿದೆ.

ಅರ್ಬತ್ ಅಣೆಕಟ್ಟು 25 ಮಿಲಿಯನ್ ಕ್ಯೂಬಿಕ್ ಮೀಟರ್ ಸಾಮರ್ಥ್ಯವನ್ನು ಹೊಂದಿತ್ತು. ಕರಾವಳಿ ನಗರವಾದ ಪೋರ್ಟ್ ಸುಡಾನ್‌ನ ಕುಡಿಯುವ ನೀರಿನ ಮುಖ್ಯ ಮೂಲವಾಗಿತ್ತು. ಕೊಚ್ಚಿಕೊಂಡು ಹೋದ ಪ್ರದೇಶವನ್ನು ಗುರುತಿಸಲು ಸಾಧ್ಯವಾಗುತ್ತಿಲ್ಲ. ನೆರೆಗೆ ವಿದ್ಯುತ್ ಕಂಬ ಮತ್ತು ನೀರಿನ ಪೈಪ್‌ಗಳು ನಾಶವಾಗಿವೆ. ಚಿನ್ನದ ಗಣಿಯಲ್ಲಿ ಕೆಲಸ ಮಾಡುತ್ತಿದ್ದ 150 ರಿಂದ 200 ಮಂದಿ ಕಾಣೆಯಾಗಿದ್ದಾರೆ.  ದುರಂತ ಸಂಭವಿಸುವ ಮೊದಲೇ ಅಣೆಕಟ್ಟು ಕಳಪೆ ಸ್ಥಿತಿಯಲ್ಲಿತ್ತು. ಅಣೆಕಟ್ಟುಗಳು, ರಸ್ತೆಗಳು ಮತ್ತು ಸೇತುವೆಗಳು ಸೇರಿದಂತೆ ಸುಡಾನ್‌ನಲ್ಲಿ ಮೂಲಸೌಕರ್ಯವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ.

ಏಪ್ರಿಲ್ 2023 ರಿಂದ ಸೇನೆ ಮತ್ತು ಅರೆಸೇನಾ ಪಡೆಗಳ ನಡುವಣ ಸಂಘರ್ಷದಿಂದ ಸುಡಾನ್ ಈಗಾಗಲೇ ತತ್ತರಿಸಿ ಹೋಗಿದೆ. ಈಗ ಭಾರೀ ಮಳೆಯಿಂದಾಗಿ ಮತ್ತೊಂದು ಸಂಕಷ್ಟಕ್ಕೆ ಸಿಲುಕಿದೆ. ಈ ವರ್ಷ ದೇಶಾದ್ಯಂತ  ಪ್ರವಾಹದಲ್ಲಿ 132 ಜನರು ಸಾವನ್ನಪ್ಪಿದ್ದಾರೆ, 118,000 ಜನರು ಸ್ಥಳಾಂತರಗೊಂಡಿದ್ದಾರೆ ಎಂದು ಸರ್ಕಾರ ಈ ಮೊದಲು ತಿಳಿಸಿತ್ತು.

  • ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

1 hour ago

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

10 hours ago

ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…

18 hours ago

ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?

ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…

18 hours ago

ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ

ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…

1 day ago

‘ಅರ್ಥ’ ಮತ್ತು ‘ಅಪಾರ್ಥ’ದ ನಡುವೆ ಇರುವ ‘ಪಾ’ ಯಾವುದು?

ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…

1 day ago