ವಿಶ್ವದ ಭೂಪಟದಲ್ಲಿ ಭಾರತೀಯ ರೈಲ್ವೆ ಇಲಾಖೆಯನ್ನು ಐದನೇ ಸ್ಥಾನದಿಂದ ಮೂರನೇ ಸ್ಥಾನಕ್ಕೆ ಕೊಂಡೊಯ್ಯುವ ಗುರಿ ಹೊಂದಲಾಗಿದೆ. ಕಳೆದ ನಾಲ್ಕು ವರ್ಷಗಳಲ್ಲಿ 7 ಲಕ್ಷಕ್ಕೂ ಅಧಿಕ ಉದ್ಯೋಗ ಸೃಷ್ಟಿ ಮಾಡುವ ಮೂಲಕ ಹೊಸ ಮೈಲಿಗಲ್ಲು ಸ್ಥಾಪಿಸಲಾಗಿದೆ ಎಂದು ಕೇಂದ್ರ ರೈಲ್ವೆ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ವಿ.ಸೋಮಣ್ಣ, 44 ಸಾವಿರ ರೈಲ್ವೆ ಡಬ್ಬಲ್ ಲೈನ್ಗಳಿಗೆ ವಿದ್ಯುತ್ ಸಂಪರ್ಕ ನೀಡಿ, ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು. ದೇಶದ 24 ರಾಜ್ಯಗಳ 294 ಜಿಲ್ಲಾ ಕೇಂದ್ರಗಳಲ್ಲಿ 104 ವಂದೇ ಭಾರತ್ ರೈಲುಗಳು ಈಗಾಗಲೇ ಸಂಚರಿಸುತ್ತಿವೆ. ಕರ್ನಾಟಕದಲ್ಲಿ ಈಗಾಗಲೇ 10 ವಂದೇ ಭಾರತ್ ರೈಲುಗಳು ಸಂಚರಿಸುತ್ತಿವೆ. ಜೊತೆಗೆ ಪ್ರತಿ ರೈಲಿಗೆ ನಾಲ್ಕರಂತೆ ಹೊಸದಾಗಿ 30 ಸಾವಿರ ಹೊಸ ಬೋಗಿಗಳನ್ನು ಅಳವಡಿಸಲಾಗಿದೆ ಎಂದು ಮಾಹಿತಿ ನೀಡಿದರು. ತುಮಕೂರಿನಿಂದ ಬೆಂಗಳೂರಿಗೆ ಹೊಸದಾಗಿ ಮೆಮೊ ರೈಲು ಸಂಚಾರ ಆರಂಭಿಸಲಾಗಿದೆ. ಹಾಸನದಿಂದ ಬೆಂಗಳೂರಿಗೆ ಇರುವ ಪ್ರಯಾಣ ದರ ತಗ್ಗಿಸಲು ಚಿಂತಿಸಲಾಗಿದೆ ಎಂದು ಸಚಿವ ವಿ.ಸೋಮಣ್ಣ ತಿಳಿಸಿದರು.
ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ಉಪಮುಖ್ಯಮಂತ್ರಿ…
ರಾಜ್ಯದ 101 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, 89 ತೀವ್ರ ಹಾಗೂ 12…
ರಾಜ್ಯದ 101 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಗ್ರಾಮೀಣ ಜನರ ಬೇಡಿಕೆಗೆ ಅನುಗುಣವಾಗಿ…
ಕರ್ನಾಟಕದಲ್ಲಿ ಮುಂಗಾರು ಸದ್ಯ ದುರ್ಬಲಗೊಂಡಿದ್ದು, ಬಹುತೇಕ ಕಡೆ ಬಿಸಿಲು–ಮೋಡದ ವಾತಾವರಣ ಹಾಗೂ ಅಲ್ಲಲ್ಲಿ…
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…