ವಿಶ್ವದ ಭೂಪಟದಲ್ಲಿ ಭಾರತೀಯ ರೈಲ್ವೆ ಇಲಾಖೆಯನ್ನು ಐದನೇ ಸ್ಥಾನದಿಂದ ಮೂರನೇ ಸ್ಥಾನಕ್ಕೆ ಕೊಂಡೊಯ್ಯುವ ಗುರಿ ಹೊಂದಲಾಗಿದೆ. ಕಳೆದ ನಾಲ್ಕು ವರ್ಷಗಳಲ್ಲಿ 7 ಲಕ್ಷಕ್ಕೂ ಅಧಿಕ ಉದ್ಯೋಗ ಸೃಷ್ಟಿ ಮಾಡುವ ಮೂಲಕ ಹೊಸ ಮೈಲಿಗಲ್ಲು ಸ್ಥಾಪಿಸಲಾಗಿದೆ ಎಂದು ಕೇಂದ್ರ ರೈಲ್ವೆ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ವಿ.ಸೋಮಣ್ಣ, 44 ಸಾವಿರ ರೈಲ್ವೆ ಡಬ್ಬಲ್ ಲೈನ್ಗಳಿಗೆ ವಿದ್ಯುತ್ ಸಂಪರ್ಕ ನೀಡಿ, ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು. ದೇಶದ 24 ರಾಜ್ಯಗಳ 294 ಜಿಲ್ಲಾ ಕೇಂದ್ರಗಳಲ್ಲಿ 104 ವಂದೇ ಭಾರತ್ ರೈಲುಗಳು ಈಗಾಗಲೇ ಸಂಚರಿಸುತ್ತಿವೆ. ಕರ್ನಾಟಕದಲ್ಲಿ ಈಗಾಗಲೇ 10 ವಂದೇ ಭಾರತ್ ರೈಲುಗಳು ಸಂಚರಿಸುತ್ತಿವೆ. ಜೊತೆಗೆ ಪ್ರತಿ ರೈಲಿಗೆ ನಾಲ್ಕರಂತೆ ಹೊಸದಾಗಿ 30 ಸಾವಿರ ಹೊಸ ಬೋಗಿಗಳನ್ನು ಅಳವಡಿಸಲಾಗಿದೆ ಎಂದು ಮಾಹಿತಿ ನೀಡಿದರು. ತುಮಕೂರಿನಿಂದ ಬೆಂಗಳೂರಿಗೆ ಹೊಸದಾಗಿ ಮೆಮೊ ರೈಲು ಸಂಚಾರ ಆರಂಭಿಸಲಾಗಿದೆ. ಹಾಸನದಿಂದ ಬೆಂಗಳೂರಿಗೆ ಇರುವ ಪ್ರಯಾಣ ದರ ತಗ್ಗಿಸಲು ಚಿಂತಿಸಲಾಗಿದೆ ಎಂದು ಸಚಿವ ವಿ.ಸೋಮಣ್ಣ ತಿಳಿಸಿದರು.
ಸಿರಿಧಾನ್ಯಗಳ ಬೇಡಿಕೆ ಹೆಚ್ಚಿದರೂ, ರೈತರಿಗೆ ಅದರ ಸಂಪೂರ್ಣ ಆರ್ಥಿಕ ಲಾಭ ಇನ್ನೂ ತಲುಪಿಲ್ಲ…
ಚಂಡಮಾರುತದ ಗಾಳಿಗೆ ಮುರಿಯದೆ ಬಾಗಿಕೊಂಡು ಉಳಿಯುವ ಮೊಹಿತ್ನಗರ ಅಡಿಕೆ ತಳಿಗೆ ಒಡಿಶಾ ಸೇರಿದಂತೆ…
ಭಾರೀ ಮಳೆಯ ಹಿನ್ನೆಲೆಯಲ್ಲಿ ಪುತ್ತೂರು, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕುಗಳ ಶಾಲಾ-ಕಾಲೇಜುಗಳಿಗೆ…
ಸ್ವಾತಂತ್ರ್ಯ ದಿನಾಚರಣೆ ಸೇರಿದಂತೆ ಪ್ರಮುಖ ರಾಷ್ಟ್ರೀಯ ಕಾರ್ಯಕ್ರಮಗಳಲ್ಲಿ ಪ್ಲಾಸ್ಟಿಕ್ನಿಂದ ತಯಾರಿಸಿದ ರಾಷ್ಟ್ರಧ್ವಜಗಳನ್ನು ಬಳಸದಂತೆ…
ಮಂಗಳೂರು, ಉಡುಪಿ ಹಾಗೂ ಪುತ್ತೂರಿನಲ್ಲಿ ವಿವಿಧ ಹುದ್ದೆಗಳಿಗೆ ಒಟ್ಟು 22 ಉದ್ಯೋಗಾವಕಾಶಗಳಿದ್ದು, ಆಗಸ್ಟ್…
ಮಿತಾಹಾರ, ಯಜ್ಞಸ್ವರೂಪ ಭೋಜನ ಹಾಗೂ ಆಹಾರದ ಶಾಸ್ತ್ರೋಕ್ತ ಮಹತ್ವವನ್ನು ಶ್ರೀ ರಾಘವೇಶ್ವರ ಭಾರತೀ…