ಮಂತ್ರಾಲಯ ರಾಯರ ಮಠದ ಕಾಣಿಕೆ ಹುಂಡಿ ಎಣಿಕೆ ಮುಕ್ತಾಯವಾಗಿದ್ದು, ಕೋಟ್ಯಾಂತರ ರೂ. ಕಾಣಿಕೆ ಸಂಗ್ರಹವಾಗಿದೆ ಎಂದು ಗುರು ರಾಘವೇಂದ್ರ ಸ್ವಾಮಿ ಮಠದ ವ್ಯವಸ್ಥಾಪಕ ಶ್ರೀನಿವಾಸ ರಾವ್ ಮಾಹಿತಿ ನೀಡಿದ್ದಾರೆ.
ಗುರುರಾಯರ ಸನ್ನಿಧಿ ಮಂತ್ರಾಲಯ ರಾಘವೇಂದ್ರ ಸ್ವಾಮಿ ಮಠದಲ್ಲಿ ಕಳೆದ ಒಂದು ತಿಂಗಳಿಂದ ಭಕ್ತರಿಂದ ಭಾರೀ ಪ್ರಮಾಣದ ಕಾಣಿಕೆ ಸಂಗ್ರಹವಾಗಿದೆ. ಅಕ್ಟೋಬರ್ ತಿಂಗಳ ಕಾಣಿಕೆ ಹುಂಡಿ ಎಣಿಕೆ ಕಾರ್ಯ ಪೂರ್ಣವಾಗಿದ್ದು, ಒಟ್ಟು 1,98,17,614 ರೂ. ಸಂಗ್ರಹವಾಗಿದೆ. ಸಂಗ್ರಹವಾದ ಕಾಣಿಕೆಯಲ್ಲಿ 4,40,660 ರೂ. ನಾಣ್ಯಗಳು ಹಾಗೂ 1,93,77,054 ರೂ. ನೋಟುಗಳಿವೆ.
ಜೊತೆಗೆ 128 ಗ್ರಾಂ ಬಂಗಾರ, 810 ಗ್ರಾಂ ಬೆಳ್ಳಿಯಿದೆ ಇದು ಸೆ. 29 ರಿಂದ ಅ. 18ರವರೆಗಿನ 20 ದಿನಗಳ ಕಾಣಿಕೆ ಸಂಗ್ರವಾಗಿದೆ ಎಂದು ಗುರು ರಾಘವೇಂದ್ರ ಸ್ವಾಮಿ ಮಠದ ವ್ಯವಸ್ಥಾಪಕ ಶ್ರೀನಿವಾಸ ರಾವ್ ಮಾಹಿತಿ ನೀಡಿದ್ದಾರೆ. ಮುಜರಾಯಿ ಇಲಾಖೆ ಅಧಿಕಾರಿಗಳು ಹಾಗೂ ನೂರಾರು ಜನ ಸಿಬ್ಬಂದಿ, ಭಕ್ತರು ಎಣಿಕೆ ಕಾರ್ಯದಲ್ಲಿ ಪಾಲ್ಗೊಂಡಿದ್ದು, ಎಣಿಕೆ ಕಾರ್ಯ ಮುಕ್ತಾಯವಾಗಿದೆ.
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…
2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…
ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…