ವಿಶ್ವದ ಟಾಪ್​ 20 ಕಲುಷಿತ ನಗರಗಳ ಪಟ್ಟಿ ಬಿಡುಗಡೆ | ಕಲುಷಿತಗೊಂಡ ಭಾರತದ 14 ನಗರಗಳು…! |

June 7, 2023
1:25 PM

ಈಗಂತೂ ನಗರ ಪ್ರದೇಶಗಳಲ್ಲಿ ಗಾಳಿ ಎಷ್ಟರ ಮಟ್ಟಿಗೆ ಮತ್ತು ಎಷ್ಟು ವೇಗವಾಗಿ ಕಲುಷಿತವಾಗುತ್ತಿದೆ ಎಂದರೆ, ಜನರು ಮನೆಯಿಂದ ಹೊರಗೆ ಕಾಲಿಟ್ಟರೆ ಸಾಕು ಮುಖಕ್ಕೆ ಮಾಸ್ಕ್  ಧರಿಸಿಕೊಂಡು ಹೋದರೆ ಒಳ್ಳೆಯದು ಅಂತ ಅವರಿಗೆ ಅನ್ನಿಸಲು ಶುರುವಾಗಿದೆ. ದಿನೇ ದಿನೇ ರಸ್ತೆಯ ಮೇಲೆ ವಾಹನ ದಟ್ಟಣೆ ಜಾಸ್ತಿ ಆಗುತ್ತಿದ್ದು, ಅವುಗಳು ಬಿಡುವ ಹೊಗೆಯು ಗಾಳಿಯಲ್ಲಿ ಹೋಗಿ ಸೇರಿಕೊಳ್ಳುತ್ತಿದೆ ಮತ್ತು ಖಾಲಿ ಇರುವ ಸೈಟ್ ಗಳಲ್ಲಿ ಜನರು ಈ ಕಸವನ್ನು ರಾಶಿ ರಾಶಿ ಹಾಕಿ ಅದಕ್ಕೆ ಬೆಂಕಿ ಹಚ್ಚುವುದರಿಂದ ಆ ಹೊಗೆಯು ಸಹ ನಮ್ಮ ಗಾಳಿಯಲ್ಲಿ ಸೇರಿಕೊಳ್ಳುತ್ತಿದೆ. ಇಷ್ಟೇ ಅಲ್ಲದೆ ಎಲೆಕ್ಟ್ರಾನಿಕ್ ತ್ಯಾಜ್ಯಗಳನ್ನು ಮತ್ತು ವಾಹನಗಳ ಟಯರ್ ಗಳನ್ನು ಸುಡುವುದು ಇವೆಲ್ಲವೂ ನಾವು ತೆಗೆದುಕೊಳ್ಳುವ ಗಾಳಿಯನ್ನು ಕಲುಷಿತಗೊಳಿಸುತ್ತಿದೆ ಅಂತ ಹೇಳಿದರೆ ತಪ್ಪಾಗುವುದಿಲ್ಲ.

ವಿಶ್ವದ 20 ಅತಿ ಹೆಚ್ಚು ಕಲುಷಿತ ನಗರಗಳ ಪಟ್ಟಿಯಲ್ಲಿ 14 ನಗರಗಳು ಭಾರತದ ದೇಶಕ್ಕೆ ಸೇರಿವೆ ಎನ್ನುವುದು ಆಘಾತಕಾರಿ ವಿಷಯವಾಗಿದೆ. ಮಾಲಿನ್ಯ ಎಲ್ಲಾ ಕಡೆ ವಿಪರೀತವಾಗುತ್ತಿದೆ. ವಿಶ್ವದ 20 ಅತಿ ಹೆಚ್ಚು ಕಲುಷಿತ ನಗರಗಳ ಪಟ್ಟಿಯಲ್ಲಿ 14 ನಗರಗಳು ಭಾರತದ ದೇಶಕ್ಕೆ ಸೇರಿವೆ ಎನ್ನುವುದು ಆಘಾತಕಾರಿ ವಿಷಯವಾಗಿದೆ. ಈ ವರದಿ ದೇಶದಲ್ಲಿ ಮಾಲಿನ್ಯದ ಸ್ಥಿತಿಯನ್ನು ತೋರಿಸುತ್ತಿದ್ದು, ಈ ವಿಚಾರದಲ್ಲಿ ಎಚ್ಚರಿಕೆ ವಹಿಸದಿದ್ದರೆ ಮುಂದೆ ತೊಂದರೆಯಾಗಲಿದೆ ಎಂಬ ಎಚ್ಚರಿಕೆ ರವಾನಿಸಿದಂತಿದೆ. ಚಾಡ್, ಇರಾಕ್, ಪಾಕಿಸ್ತಾನ, ಬಹ್ರೇನ್ ಮತ್ತು ಬಾಂಗ್ಲಾದೇಶವು ವಿಶ್ವದ ಅತ್ಯಂತ ಕಲುಷಿತ ದೇಶಗಳಾಗಿವೆ. ಭಾರತ ಎಂಟನೇ ಸ್ಥಾನದಲ್ಲಿದೆ. ವಾಯುಮಾಲಿನ್ಯ ಸೂಚ್ಯಂಕದಲ್ಲಿ ಹಿಂದಿನ ವರ್ಷಕ್ಕಿಂತ ಮೂರು ಸ್ಥಾನಗಳನ್ನು ಸುಧಾರಿಸಿದರೂ ಕೂಡ, 2022 ರಲ್ಲಿ ಭಾರತದ ಮಾಲಿನ್ಯ ಸ್ಥಿತಿ ಕೆಟ್ಟದಾಗಿದೆ ಎಂದು ವರದಿ ಹೇಳಿದೆ. ಸ್ವಿಸ್ ವಾಯು ಗುಣಮಟ್ಟದ ತಂತ್ರಜ್ಞಾನ ಕಂಪನಿ IQAir ವರದಿ ಪ್ರಕಾರ ವಿಶ್ವದ 20 ಕಲುಷಿತ ನಗರಗಳ ಪಟ್ಟಿಯನ್ನೂ ಪ್ರಕಟಿಸಿದ್ದು, ಇದರಲ್ಲಿ ಭಾರತದ 14 ನಗರಗಳು ಸ್ಥಾನ ಪಡೆದಿದೆ.

Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಗುಡ್ಡಗಾಡು ಪ್ರದೇಶಗಳ ಕೃಷಿ ಮತ್ತು ಗ್ರಾಮೀಣ ಆರ್ಥಿಕತೆಗೆ ದೊಡ್ಡ ಸವಾಲು | ಮಧ್ಯವರ್ತಿಗಳ ಅವಲಂಬನೆ ಕಡಿಮೆ ಮಾಡಲು ರೈತರ ಹೊಸ ಮಾರ್ಗ
January 11, 2026
8:58 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 11-01-2026| ಇಂದು ಕೆಲವೆಡೆ ಮಳೆ ನಿರೀಕ್ಷೆ | ಎಲ್ಲೆಲ್ಲಿ ಮಳೆ ಇರಬಹುದು..?
January 11, 2026
2:11 PM
by: ಸಾಯಿಶೇಖರ್ ಕರಿಕಳ
ಬರ ಪ್ರದೇಶ ಕೃಷಿಗೆ ಕಡಿಮೆ ವೆಚ್ಚದ ಪರಿಹಾರ | ಬೀಜ ಸಂಸ್ಕರಣೆಯಲ್ಲಿ ಒಂಟೆ ಮೂತ್ರ ಬಳಕೆ ಪರಿಣಾಮಕಾರಿ – ICAR ಅಧ್ಯಯನ
January 11, 2026
9:58 AM
by: ದ ರೂರಲ್ ಮಿರರ್.ಕಾಂ
ಗ್ರಾಮೀಣ ಉದ್ಯಮಿಗಳಿಂದ ಆರ್ಗ್ಯಾನಿಕ್ ಮಾದರಿ | ‘ಗ್ರೀನ್ ವಿಷನ್’ ವರ್ಮಿ ಕಾಂಪೋಸ್ಟ್ ಯಶೋಗಾಥೆ
January 11, 2026
8:30 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror