ಸುದ್ದಿಗಳು

ವಿಶ್ವದ ಟಾಪ್​ 20 ಕಲುಷಿತ ನಗರಗಳ ಪಟ್ಟಿ ಬಿಡುಗಡೆ | ಕಲುಷಿತಗೊಂಡ ಭಾರತದ 14 ನಗರಗಳು…! |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಈಗಂತೂ ನಗರ ಪ್ರದೇಶಗಳಲ್ಲಿ ಗಾಳಿ ಎಷ್ಟರ ಮಟ್ಟಿಗೆ ಮತ್ತು ಎಷ್ಟು ವೇಗವಾಗಿ ಕಲುಷಿತವಾಗುತ್ತಿದೆ ಎಂದರೆ, ಜನರು ಮನೆಯಿಂದ ಹೊರಗೆ ಕಾಲಿಟ್ಟರೆ ಸಾಕು ಮುಖಕ್ಕೆ ಮಾಸ್ಕ್  ಧರಿಸಿಕೊಂಡು ಹೋದರೆ ಒಳ್ಳೆಯದು ಅಂತ ಅವರಿಗೆ ಅನ್ನಿಸಲು ಶುರುವಾಗಿದೆ. ದಿನೇ ದಿನೇ ರಸ್ತೆಯ ಮೇಲೆ ವಾಹನ ದಟ್ಟಣೆ ಜಾಸ್ತಿ ಆಗುತ್ತಿದ್ದು, ಅವುಗಳು ಬಿಡುವ ಹೊಗೆಯು ಗಾಳಿಯಲ್ಲಿ ಹೋಗಿ ಸೇರಿಕೊಳ್ಳುತ್ತಿದೆ ಮತ್ತು ಖಾಲಿ ಇರುವ ಸೈಟ್ ಗಳಲ್ಲಿ ಜನರು ಈ ಕಸವನ್ನು ರಾಶಿ ರಾಶಿ ಹಾಕಿ ಅದಕ್ಕೆ ಬೆಂಕಿ ಹಚ್ಚುವುದರಿಂದ ಆ ಹೊಗೆಯು ಸಹ ನಮ್ಮ ಗಾಳಿಯಲ್ಲಿ ಸೇರಿಕೊಳ್ಳುತ್ತಿದೆ. ಇಷ್ಟೇ ಅಲ್ಲದೆ ಎಲೆಕ್ಟ್ರಾನಿಕ್ ತ್ಯಾಜ್ಯಗಳನ್ನು ಮತ್ತು ವಾಹನಗಳ ಟಯರ್ ಗಳನ್ನು ಸುಡುವುದು ಇವೆಲ್ಲವೂ ನಾವು ತೆಗೆದುಕೊಳ್ಳುವ ಗಾಳಿಯನ್ನು ಕಲುಷಿತಗೊಳಿಸುತ್ತಿದೆ ಅಂತ ಹೇಳಿದರೆ ತಪ್ಪಾಗುವುದಿಲ್ಲ.

Advertisement

ವಿಶ್ವದ 20 ಅತಿ ಹೆಚ್ಚು ಕಲುಷಿತ ನಗರಗಳ ಪಟ್ಟಿಯಲ್ಲಿ 14 ನಗರಗಳು ಭಾರತದ ದೇಶಕ್ಕೆ ಸೇರಿವೆ ಎನ್ನುವುದು ಆಘಾತಕಾರಿ ವಿಷಯವಾಗಿದೆ. ಮಾಲಿನ್ಯ ಎಲ್ಲಾ ಕಡೆ ವಿಪರೀತವಾಗುತ್ತಿದೆ. ವಿಶ್ವದ 20 ಅತಿ ಹೆಚ್ಚು ಕಲುಷಿತ ನಗರಗಳ ಪಟ್ಟಿಯಲ್ಲಿ 14 ನಗರಗಳು ಭಾರತದ ದೇಶಕ್ಕೆ ಸೇರಿವೆ ಎನ್ನುವುದು ಆಘಾತಕಾರಿ ವಿಷಯವಾಗಿದೆ. ಈ ವರದಿ ದೇಶದಲ್ಲಿ ಮಾಲಿನ್ಯದ ಸ್ಥಿತಿಯನ್ನು ತೋರಿಸುತ್ತಿದ್ದು, ಈ ವಿಚಾರದಲ್ಲಿ ಎಚ್ಚರಿಕೆ ವಹಿಸದಿದ್ದರೆ ಮುಂದೆ ತೊಂದರೆಯಾಗಲಿದೆ ಎಂಬ ಎಚ್ಚರಿಕೆ ರವಾನಿಸಿದಂತಿದೆ. ಚಾಡ್, ಇರಾಕ್, ಪಾಕಿಸ್ತಾನ, ಬಹ್ರೇನ್ ಮತ್ತು ಬಾಂಗ್ಲಾದೇಶವು ವಿಶ್ವದ ಅತ್ಯಂತ ಕಲುಷಿತ ದೇಶಗಳಾಗಿವೆ. ಭಾರತ ಎಂಟನೇ ಸ್ಥಾನದಲ್ಲಿದೆ. ವಾಯುಮಾಲಿನ್ಯ ಸೂಚ್ಯಂಕದಲ್ಲಿ ಹಿಂದಿನ ವರ್ಷಕ್ಕಿಂತ ಮೂರು ಸ್ಥಾನಗಳನ್ನು ಸುಧಾರಿಸಿದರೂ ಕೂಡ, 2022 ರಲ್ಲಿ ಭಾರತದ ಮಾಲಿನ್ಯ ಸ್ಥಿತಿ ಕೆಟ್ಟದಾಗಿದೆ ಎಂದು ವರದಿ ಹೇಳಿದೆ. ಸ್ವಿಸ್ ವಾಯು ಗುಣಮಟ್ಟದ ತಂತ್ರಜ್ಞಾನ ಕಂಪನಿ IQAir ವರದಿ ಪ್ರಕಾರ ವಿಶ್ವದ 20 ಕಲುಷಿತ ನಗರಗಳ ಪಟ್ಟಿಯನ್ನೂ ಪ್ರಕಟಿಸಿದ್ದು, ಇದರಲ್ಲಿ ಭಾರತದ 14 ನಗರಗಳು ಸ್ಥಾನ ಪಡೆದಿದೆ.

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ವೈಜ್ಞಾನಿಕ ಶಿಫಾರಸ್ಸಿನಂತೆ ರಸಗೊಬ್ಬರದ ಬಳಕೆ ಸೂಕ್ತ – ರೈತರಿಗೆ ಸಲಹೆ

ವೈಜ್ಞಾನಿಕ ಶಿಫಾರಸ್ಸಿನಂತೆ ರಾಸಾಯನಿಕ ಗೊಬ್ಬರ ಬಳಕೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ…

5 hours ago

ರಾಜ್ಯದ ಹಲವೆಡೆ ಮುಂದಿನ 7 ದಿನಗಳ ಕಾಲ ವ್ಯಾಪಕ ಮಳೆ | ಬೆಂಗಳೂರಿಗೆ ಎಲ್ಲೋ ಅಲರ್ಟ್

ಕರಾವಳಿ ಸೇರಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಧಾರಾಕಾರ ಮಳೆಯಾಗಿದೆ. ರಾಜ್ಯದ…

6 hours ago

ಬದುಕು ಪುರಾಣ | ಜ್ಞಾನದ ಪ್ರತಿನಿಧಿ ಗಂಗಾಪುತ್ರ

ತ್ಯಾಗಕ್ಕೊಂದು ಸ್ವ-ಸ್ವರೂಪ ಇದ್ದರೆ ಅದು ‘ಭೀಷ್ಮಾಚಾರ್ಯ’ರಿಗೆ ಹೊಂದುತ್ತದೆ. ತ್ಯಾಗವೆಂದರೆ ದೇಹವನ್ನು ಕಳೆದುಕೊಳ್ಳುವುದಲ್ಲ! ದೇಹವಿದ್ದೂ…

1 day ago

ಬೆಳೆ ಹಾನಿ ಕುರಿತು ಸಮಗ್ರವಾಗಿ ಸಮೀಕ್ಷೆಗೆ ಸೂಚನೆ

ವಿಜಯಪುರ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಗ್ರಾಮೀಣ ರಸ್ತೆ, ಕೃಷಿ, ತೋಟಗಾರಿಕೆ ಬೆಳೆಗಳು, ಜನ-ಜಾನುವಾರುಗಳ…

2 days ago

ಹವಾಮಾನ ವರದಿ | 09-08-2025 | ಬಂಗಾಳಕೊಲ್ಲಿಯ ವಾಯುಭಾರ ಕುಸಿತ- ಮುಂಗಾರು ಚುರುಕು |

ತಮಿಳುನಾಡು ಕರಾವಳಿ ಸಮೀಪ ಉಂಟಾಗಿರುವ ವಾಯುಭಾರ ಕುಸಿತವು ಆಂದ್ರಾ ಕರಾವಳಿ ದಾಟಿ ಉತ್ತರಕ್ಕೆ…

2 days ago

ಹೊಸರುಚಿ | ಹಲಸಿನ ಹಣ್ಣಿನ ಹಲ್ವ

ಹಲಸಿನ ಹಣ್ಣಿನ ಹಲ್ವಕ್ಕೆ ಬೇಕಾಗುವ ಸಾಮಗ್ರಿಗಳು :  ಹಲಸಿನ ಹಣ್ಣು 1 ಕಪ್. ಜಾರ್…

2 days ago