Advertisement
ಸುದ್ದಿಗಳು

ವಿಶ್ವದ ಟಾಪ್​ 20 ಕಲುಷಿತ ನಗರಗಳ ಪಟ್ಟಿ ಬಿಡುಗಡೆ | ಕಲುಷಿತಗೊಂಡ ಭಾರತದ 14 ನಗರಗಳು…! |

Share

ಈಗಂತೂ ನಗರ ಪ್ರದೇಶಗಳಲ್ಲಿ ಗಾಳಿ ಎಷ್ಟರ ಮಟ್ಟಿಗೆ ಮತ್ತು ಎಷ್ಟು ವೇಗವಾಗಿ ಕಲುಷಿತವಾಗುತ್ತಿದೆ ಎಂದರೆ, ಜನರು ಮನೆಯಿಂದ ಹೊರಗೆ ಕಾಲಿಟ್ಟರೆ ಸಾಕು ಮುಖಕ್ಕೆ ಮಾಸ್ಕ್  ಧರಿಸಿಕೊಂಡು ಹೋದರೆ ಒಳ್ಳೆಯದು ಅಂತ ಅವರಿಗೆ ಅನ್ನಿಸಲು ಶುರುವಾಗಿದೆ. ದಿನೇ ದಿನೇ ರಸ್ತೆಯ ಮೇಲೆ ವಾಹನ ದಟ್ಟಣೆ ಜಾಸ್ತಿ ಆಗುತ್ತಿದ್ದು, ಅವುಗಳು ಬಿಡುವ ಹೊಗೆಯು ಗಾಳಿಯಲ್ಲಿ ಹೋಗಿ ಸೇರಿಕೊಳ್ಳುತ್ತಿದೆ ಮತ್ತು ಖಾಲಿ ಇರುವ ಸೈಟ್ ಗಳಲ್ಲಿ ಜನರು ಈ ಕಸವನ್ನು ರಾಶಿ ರಾಶಿ ಹಾಕಿ ಅದಕ್ಕೆ ಬೆಂಕಿ ಹಚ್ಚುವುದರಿಂದ ಆ ಹೊಗೆಯು ಸಹ ನಮ್ಮ ಗಾಳಿಯಲ್ಲಿ ಸೇರಿಕೊಳ್ಳುತ್ತಿದೆ. ಇಷ್ಟೇ ಅಲ್ಲದೆ ಎಲೆಕ್ಟ್ರಾನಿಕ್ ತ್ಯಾಜ್ಯಗಳನ್ನು ಮತ್ತು ವಾಹನಗಳ ಟಯರ್ ಗಳನ್ನು ಸುಡುವುದು ಇವೆಲ್ಲವೂ ನಾವು ತೆಗೆದುಕೊಳ್ಳುವ ಗಾಳಿಯನ್ನು ಕಲುಷಿತಗೊಳಿಸುತ್ತಿದೆ ಅಂತ ಹೇಳಿದರೆ ತಪ್ಪಾಗುವುದಿಲ್ಲ.

ವಿಶ್ವದ 20 ಅತಿ ಹೆಚ್ಚು ಕಲುಷಿತ ನಗರಗಳ ಪಟ್ಟಿಯಲ್ಲಿ 14 ನಗರಗಳು ಭಾರತದ ದೇಶಕ್ಕೆ ಸೇರಿವೆ ಎನ್ನುವುದು ಆಘಾತಕಾರಿ ವಿಷಯವಾಗಿದೆ. ಮಾಲಿನ್ಯ ಎಲ್ಲಾ ಕಡೆ ವಿಪರೀತವಾಗುತ್ತಿದೆ. ವಿಶ್ವದ 20 ಅತಿ ಹೆಚ್ಚು ಕಲುಷಿತ ನಗರಗಳ ಪಟ್ಟಿಯಲ್ಲಿ 14 ನಗರಗಳು ಭಾರತದ ದೇಶಕ್ಕೆ ಸೇರಿವೆ ಎನ್ನುವುದು ಆಘಾತಕಾರಿ ವಿಷಯವಾಗಿದೆ. ಈ ವರದಿ ದೇಶದಲ್ಲಿ ಮಾಲಿನ್ಯದ ಸ್ಥಿತಿಯನ್ನು ತೋರಿಸುತ್ತಿದ್ದು, ಈ ವಿಚಾರದಲ್ಲಿ ಎಚ್ಚರಿಕೆ ವಹಿಸದಿದ್ದರೆ ಮುಂದೆ ತೊಂದರೆಯಾಗಲಿದೆ ಎಂಬ ಎಚ್ಚರಿಕೆ ರವಾನಿಸಿದಂತಿದೆ. ಚಾಡ್, ಇರಾಕ್, ಪಾಕಿಸ್ತಾನ, ಬಹ್ರೇನ್ ಮತ್ತು ಬಾಂಗ್ಲಾದೇಶವು ವಿಶ್ವದ ಅತ್ಯಂತ ಕಲುಷಿತ ದೇಶಗಳಾಗಿವೆ. ಭಾರತ ಎಂಟನೇ ಸ್ಥಾನದಲ್ಲಿದೆ. ವಾಯುಮಾಲಿನ್ಯ ಸೂಚ್ಯಂಕದಲ್ಲಿ ಹಿಂದಿನ ವರ್ಷಕ್ಕಿಂತ ಮೂರು ಸ್ಥಾನಗಳನ್ನು ಸುಧಾರಿಸಿದರೂ ಕೂಡ, 2022 ರಲ್ಲಿ ಭಾರತದ ಮಾಲಿನ್ಯ ಸ್ಥಿತಿ ಕೆಟ್ಟದಾಗಿದೆ ಎಂದು ವರದಿ ಹೇಳಿದೆ. ಸ್ವಿಸ್ ವಾಯು ಗುಣಮಟ್ಟದ ತಂತ್ರಜ್ಞಾನ ಕಂಪನಿ IQAir ವರದಿ ಪ್ರಕಾರ ವಿಶ್ವದ 20 ಕಲುಷಿತ ನಗರಗಳ ಪಟ್ಟಿಯನ್ನೂ ಪ್ರಕಟಿಸಿದ್ದು, ಇದರಲ್ಲಿ ಭಾರತದ 14 ನಗರಗಳು ಸ್ಥಾನ ಪಡೆದಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಎಲೆಯ ಫೋಟೋ ತೆಗೆದರೆ AI ಕೀಟ ಯಾವುದೆಂದು ಹೇಳುತ್ತದೆ…! – 73 ಬೆಳೆಗಳ ಮೇಲೆ ಭಾರತದ ಹೊಸ ಕೃಷಿ ಕಣ್ಗಾವಲು

ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…

6 hours ago

ಹವಾಮಾನ ವರದಿ | 24-08-2026 | ಕರಾವಳಿಯಲ್ಲಿ ಮಳೆ ಮುಂದುವರಿಕೆ – ಕರ್ನಾಟಕದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…

16 hours ago

ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?

ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…

22 hours ago

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

1 day ago

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

2 days ago