Advertisement
ಸುದ್ದಿಗಳು

ವಿಶ್ವದ ಟಾಪ್​ 20 ಕಲುಷಿತ ನಗರಗಳ ಪಟ್ಟಿ ಬಿಡುಗಡೆ | ಕಲುಷಿತಗೊಂಡ ಭಾರತದ 14 ನಗರಗಳು…! |

Share

ಈಗಂತೂ ನಗರ ಪ್ರದೇಶಗಳಲ್ಲಿ ಗಾಳಿ ಎಷ್ಟರ ಮಟ್ಟಿಗೆ ಮತ್ತು ಎಷ್ಟು ವೇಗವಾಗಿ ಕಲುಷಿತವಾಗುತ್ತಿದೆ ಎಂದರೆ, ಜನರು ಮನೆಯಿಂದ ಹೊರಗೆ ಕಾಲಿಟ್ಟರೆ ಸಾಕು ಮುಖಕ್ಕೆ ಮಾಸ್ಕ್  ಧರಿಸಿಕೊಂಡು ಹೋದರೆ ಒಳ್ಳೆಯದು ಅಂತ ಅವರಿಗೆ ಅನ್ನಿಸಲು ಶುರುವಾಗಿದೆ. ದಿನೇ ದಿನೇ ರಸ್ತೆಯ ಮೇಲೆ ವಾಹನ ದಟ್ಟಣೆ ಜಾಸ್ತಿ ಆಗುತ್ತಿದ್ದು, ಅವುಗಳು ಬಿಡುವ ಹೊಗೆಯು ಗಾಳಿಯಲ್ಲಿ ಹೋಗಿ ಸೇರಿಕೊಳ್ಳುತ್ತಿದೆ ಮತ್ತು ಖಾಲಿ ಇರುವ ಸೈಟ್ ಗಳಲ್ಲಿ ಜನರು ಈ ಕಸವನ್ನು ರಾಶಿ ರಾಶಿ ಹಾಕಿ ಅದಕ್ಕೆ ಬೆಂಕಿ ಹಚ್ಚುವುದರಿಂದ ಆ ಹೊಗೆಯು ಸಹ ನಮ್ಮ ಗಾಳಿಯಲ್ಲಿ ಸೇರಿಕೊಳ್ಳುತ್ತಿದೆ. ಇಷ್ಟೇ ಅಲ್ಲದೆ ಎಲೆಕ್ಟ್ರಾನಿಕ್ ತ್ಯಾಜ್ಯಗಳನ್ನು ಮತ್ತು ವಾಹನಗಳ ಟಯರ್ ಗಳನ್ನು ಸುಡುವುದು ಇವೆಲ್ಲವೂ ನಾವು ತೆಗೆದುಕೊಳ್ಳುವ ಗಾಳಿಯನ್ನು ಕಲುಷಿತಗೊಳಿಸುತ್ತಿದೆ ಅಂತ ಹೇಳಿದರೆ ತಪ್ಪಾಗುವುದಿಲ್ಲ.

ವಿಶ್ವದ 20 ಅತಿ ಹೆಚ್ಚು ಕಲುಷಿತ ನಗರಗಳ ಪಟ್ಟಿಯಲ್ಲಿ 14 ನಗರಗಳು ಭಾರತದ ದೇಶಕ್ಕೆ ಸೇರಿವೆ ಎನ್ನುವುದು ಆಘಾತಕಾರಿ ವಿಷಯವಾಗಿದೆ. ಮಾಲಿನ್ಯ ಎಲ್ಲಾ ಕಡೆ ವಿಪರೀತವಾಗುತ್ತಿದೆ. ವಿಶ್ವದ 20 ಅತಿ ಹೆಚ್ಚು ಕಲುಷಿತ ನಗರಗಳ ಪಟ್ಟಿಯಲ್ಲಿ 14 ನಗರಗಳು ಭಾರತದ ದೇಶಕ್ಕೆ ಸೇರಿವೆ ಎನ್ನುವುದು ಆಘಾತಕಾರಿ ವಿಷಯವಾಗಿದೆ. ಈ ವರದಿ ದೇಶದಲ್ಲಿ ಮಾಲಿನ್ಯದ ಸ್ಥಿತಿಯನ್ನು ತೋರಿಸುತ್ತಿದ್ದು, ಈ ವಿಚಾರದಲ್ಲಿ ಎಚ್ಚರಿಕೆ ವಹಿಸದಿದ್ದರೆ ಮುಂದೆ ತೊಂದರೆಯಾಗಲಿದೆ ಎಂಬ ಎಚ್ಚರಿಕೆ ರವಾನಿಸಿದಂತಿದೆ. ಚಾಡ್, ಇರಾಕ್, ಪಾಕಿಸ್ತಾನ, ಬಹ್ರೇನ್ ಮತ್ತು ಬಾಂಗ್ಲಾದೇಶವು ವಿಶ್ವದ ಅತ್ಯಂತ ಕಲುಷಿತ ದೇಶಗಳಾಗಿವೆ. ಭಾರತ ಎಂಟನೇ ಸ್ಥಾನದಲ್ಲಿದೆ. ವಾಯುಮಾಲಿನ್ಯ ಸೂಚ್ಯಂಕದಲ್ಲಿ ಹಿಂದಿನ ವರ್ಷಕ್ಕಿಂತ ಮೂರು ಸ್ಥಾನಗಳನ್ನು ಸುಧಾರಿಸಿದರೂ ಕೂಡ, 2022 ರಲ್ಲಿ ಭಾರತದ ಮಾಲಿನ್ಯ ಸ್ಥಿತಿ ಕೆಟ್ಟದಾಗಿದೆ ಎಂದು ವರದಿ ಹೇಳಿದೆ. ಸ್ವಿಸ್ ವಾಯು ಗುಣಮಟ್ಟದ ತಂತ್ರಜ್ಞಾನ ಕಂಪನಿ IQAir ವರದಿ ಪ್ರಕಾರ ವಿಶ್ವದ 20 ಕಲುಷಿತ ನಗರಗಳ ಪಟ್ಟಿಯನ್ನೂ ಪ್ರಕಟಿಸಿದ್ದು, ಇದರಲ್ಲಿ ಭಾರತದ 14 ನಗರಗಳು ಸ್ಥಾನ ಪಡೆದಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ

ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…

2 days ago

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…

2 days ago

ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!

ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…

2 days ago

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

3 days ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

3 days ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

4 days ago