Advertisement
ಸುದ್ದಿಗಳು

ವಿಶ್ವದ ಟಾಪ್​ 20 ಕಲುಷಿತ ನಗರಗಳ ಪಟ್ಟಿ ಬಿಡುಗಡೆ | ಕಲುಷಿತಗೊಂಡ ಭಾರತದ 14 ನಗರಗಳು…! |

Share

ಈಗಂತೂ ನಗರ ಪ್ರದೇಶಗಳಲ್ಲಿ ಗಾಳಿ ಎಷ್ಟರ ಮಟ್ಟಿಗೆ ಮತ್ತು ಎಷ್ಟು ವೇಗವಾಗಿ ಕಲುಷಿತವಾಗುತ್ತಿದೆ ಎಂದರೆ, ಜನರು ಮನೆಯಿಂದ ಹೊರಗೆ ಕಾಲಿಟ್ಟರೆ ಸಾಕು ಮುಖಕ್ಕೆ ಮಾಸ್ಕ್  ಧರಿಸಿಕೊಂಡು ಹೋದರೆ ಒಳ್ಳೆಯದು ಅಂತ ಅವರಿಗೆ ಅನ್ನಿಸಲು ಶುರುವಾಗಿದೆ. ದಿನೇ ದಿನೇ ರಸ್ತೆಯ ಮೇಲೆ ವಾಹನ ದಟ್ಟಣೆ ಜಾಸ್ತಿ ಆಗುತ್ತಿದ್ದು, ಅವುಗಳು ಬಿಡುವ ಹೊಗೆಯು ಗಾಳಿಯಲ್ಲಿ ಹೋಗಿ ಸೇರಿಕೊಳ್ಳುತ್ತಿದೆ ಮತ್ತು ಖಾಲಿ ಇರುವ ಸೈಟ್ ಗಳಲ್ಲಿ ಜನರು ಈ ಕಸವನ್ನು ರಾಶಿ ರಾಶಿ ಹಾಕಿ ಅದಕ್ಕೆ ಬೆಂಕಿ ಹಚ್ಚುವುದರಿಂದ ಆ ಹೊಗೆಯು ಸಹ ನಮ್ಮ ಗಾಳಿಯಲ್ಲಿ ಸೇರಿಕೊಳ್ಳುತ್ತಿದೆ. ಇಷ್ಟೇ ಅಲ್ಲದೆ ಎಲೆಕ್ಟ್ರಾನಿಕ್ ತ್ಯಾಜ್ಯಗಳನ್ನು ಮತ್ತು ವಾಹನಗಳ ಟಯರ್ ಗಳನ್ನು ಸುಡುವುದು ಇವೆಲ್ಲವೂ ನಾವು ತೆಗೆದುಕೊಳ್ಳುವ ಗಾಳಿಯನ್ನು ಕಲುಷಿತಗೊಳಿಸುತ್ತಿದೆ ಅಂತ ಹೇಳಿದರೆ ತಪ್ಪಾಗುವುದಿಲ್ಲ.

ವಿಶ್ವದ 20 ಅತಿ ಹೆಚ್ಚು ಕಲುಷಿತ ನಗರಗಳ ಪಟ್ಟಿಯಲ್ಲಿ 14 ನಗರಗಳು ಭಾರತದ ದೇಶಕ್ಕೆ ಸೇರಿವೆ ಎನ್ನುವುದು ಆಘಾತಕಾರಿ ವಿಷಯವಾಗಿದೆ. ಮಾಲಿನ್ಯ ಎಲ್ಲಾ ಕಡೆ ವಿಪರೀತವಾಗುತ್ತಿದೆ. ವಿಶ್ವದ 20 ಅತಿ ಹೆಚ್ಚು ಕಲುಷಿತ ನಗರಗಳ ಪಟ್ಟಿಯಲ್ಲಿ 14 ನಗರಗಳು ಭಾರತದ ದೇಶಕ್ಕೆ ಸೇರಿವೆ ಎನ್ನುವುದು ಆಘಾತಕಾರಿ ವಿಷಯವಾಗಿದೆ. ಈ ವರದಿ ದೇಶದಲ್ಲಿ ಮಾಲಿನ್ಯದ ಸ್ಥಿತಿಯನ್ನು ತೋರಿಸುತ್ತಿದ್ದು, ಈ ವಿಚಾರದಲ್ಲಿ ಎಚ್ಚರಿಕೆ ವಹಿಸದಿದ್ದರೆ ಮುಂದೆ ತೊಂದರೆಯಾಗಲಿದೆ ಎಂಬ ಎಚ್ಚರಿಕೆ ರವಾನಿಸಿದಂತಿದೆ. ಚಾಡ್, ಇರಾಕ್, ಪಾಕಿಸ್ತಾನ, ಬಹ್ರೇನ್ ಮತ್ತು ಬಾಂಗ್ಲಾದೇಶವು ವಿಶ್ವದ ಅತ್ಯಂತ ಕಲುಷಿತ ದೇಶಗಳಾಗಿವೆ. ಭಾರತ ಎಂಟನೇ ಸ್ಥಾನದಲ್ಲಿದೆ. ವಾಯುಮಾಲಿನ್ಯ ಸೂಚ್ಯಂಕದಲ್ಲಿ ಹಿಂದಿನ ವರ್ಷಕ್ಕಿಂತ ಮೂರು ಸ್ಥಾನಗಳನ್ನು ಸುಧಾರಿಸಿದರೂ ಕೂಡ, 2022 ರಲ್ಲಿ ಭಾರತದ ಮಾಲಿನ್ಯ ಸ್ಥಿತಿ ಕೆಟ್ಟದಾಗಿದೆ ಎಂದು ವರದಿ ಹೇಳಿದೆ. ಸ್ವಿಸ್ ವಾಯು ಗುಣಮಟ್ಟದ ತಂತ್ರಜ್ಞಾನ ಕಂಪನಿ IQAir ವರದಿ ಪ್ರಕಾರ ವಿಶ್ವದ 20 ಕಲುಷಿತ ನಗರಗಳ ಪಟ್ಟಿಯನ್ನೂ ಪ್ರಕಟಿಸಿದ್ದು, ಇದರಲ್ಲಿ ಭಾರತದ 14 ನಗರಗಳು ಸ್ಥಾನ ಪಡೆದಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ

ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…

1 hour ago

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

10 hours ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

11 hours ago

ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ

ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…

12 hours ago

ಕೇರಳದಲ್ಲಿ ಭಾರಿ ಮಳೆ ಆರ್ಭಟ : ಮಲಪ್ಪುರಂನಲ್ಲಿ ಸರಣಿ ಭೂಕುಸಿತ , ಸಂಚಾರ ಸಂಪೂರ್ಣ ಸ್ಥಗಿತ

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…

15 hours ago