Advertisement
ಸುದ್ದಿಗಳು

ವಿಶ್ವದ ಟಾಪ್​ 20 ಕಲುಷಿತ ನಗರಗಳ ಪಟ್ಟಿ ಬಿಡುಗಡೆ | ಕಲುಷಿತಗೊಂಡ ಭಾರತದ 14 ನಗರಗಳು…! |

Share

ಈಗಂತೂ ನಗರ ಪ್ರದೇಶಗಳಲ್ಲಿ ಗಾಳಿ ಎಷ್ಟರ ಮಟ್ಟಿಗೆ ಮತ್ತು ಎಷ್ಟು ವೇಗವಾಗಿ ಕಲುಷಿತವಾಗುತ್ತಿದೆ ಎಂದರೆ, ಜನರು ಮನೆಯಿಂದ ಹೊರಗೆ ಕಾಲಿಟ್ಟರೆ ಸಾಕು ಮುಖಕ್ಕೆ ಮಾಸ್ಕ್  ಧರಿಸಿಕೊಂಡು ಹೋದರೆ ಒಳ್ಳೆಯದು ಅಂತ ಅವರಿಗೆ ಅನ್ನಿಸಲು ಶುರುವಾಗಿದೆ. ದಿನೇ ದಿನೇ ರಸ್ತೆಯ ಮೇಲೆ ವಾಹನ ದಟ್ಟಣೆ ಜಾಸ್ತಿ ಆಗುತ್ತಿದ್ದು, ಅವುಗಳು ಬಿಡುವ ಹೊಗೆಯು ಗಾಳಿಯಲ್ಲಿ ಹೋಗಿ ಸೇರಿಕೊಳ್ಳುತ್ತಿದೆ ಮತ್ತು ಖಾಲಿ ಇರುವ ಸೈಟ್ ಗಳಲ್ಲಿ ಜನರು ಈ ಕಸವನ್ನು ರಾಶಿ ರಾಶಿ ಹಾಕಿ ಅದಕ್ಕೆ ಬೆಂಕಿ ಹಚ್ಚುವುದರಿಂದ ಆ ಹೊಗೆಯು ಸಹ ನಮ್ಮ ಗಾಳಿಯಲ್ಲಿ ಸೇರಿಕೊಳ್ಳುತ್ತಿದೆ. ಇಷ್ಟೇ ಅಲ್ಲದೆ ಎಲೆಕ್ಟ್ರಾನಿಕ್ ತ್ಯಾಜ್ಯಗಳನ್ನು ಮತ್ತು ವಾಹನಗಳ ಟಯರ್ ಗಳನ್ನು ಸುಡುವುದು ಇವೆಲ್ಲವೂ ನಾವು ತೆಗೆದುಕೊಳ್ಳುವ ಗಾಳಿಯನ್ನು ಕಲುಷಿತಗೊಳಿಸುತ್ತಿದೆ ಅಂತ ಹೇಳಿದರೆ ತಪ್ಪಾಗುವುದಿಲ್ಲ.

ವಿಶ್ವದ 20 ಅತಿ ಹೆಚ್ಚು ಕಲುಷಿತ ನಗರಗಳ ಪಟ್ಟಿಯಲ್ಲಿ 14 ನಗರಗಳು ಭಾರತದ ದೇಶಕ್ಕೆ ಸೇರಿವೆ ಎನ್ನುವುದು ಆಘಾತಕಾರಿ ವಿಷಯವಾಗಿದೆ. ಮಾಲಿನ್ಯ ಎಲ್ಲಾ ಕಡೆ ವಿಪರೀತವಾಗುತ್ತಿದೆ. ವಿಶ್ವದ 20 ಅತಿ ಹೆಚ್ಚು ಕಲುಷಿತ ನಗರಗಳ ಪಟ್ಟಿಯಲ್ಲಿ 14 ನಗರಗಳು ಭಾರತದ ದೇಶಕ್ಕೆ ಸೇರಿವೆ ಎನ್ನುವುದು ಆಘಾತಕಾರಿ ವಿಷಯವಾಗಿದೆ. ಈ ವರದಿ ದೇಶದಲ್ಲಿ ಮಾಲಿನ್ಯದ ಸ್ಥಿತಿಯನ್ನು ತೋರಿಸುತ್ತಿದ್ದು, ಈ ವಿಚಾರದಲ್ಲಿ ಎಚ್ಚರಿಕೆ ವಹಿಸದಿದ್ದರೆ ಮುಂದೆ ತೊಂದರೆಯಾಗಲಿದೆ ಎಂಬ ಎಚ್ಚರಿಕೆ ರವಾನಿಸಿದಂತಿದೆ. ಚಾಡ್, ಇರಾಕ್, ಪಾಕಿಸ್ತಾನ, ಬಹ್ರೇನ್ ಮತ್ತು ಬಾಂಗ್ಲಾದೇಶವು ವಿಶ್ವದ ಅತ್ಯಂತ ಕಲುಷಿತ ದೇಶಗಳಾಗಿವೆ. ಭಾರತ ಎಂಟನೇ ಸ್ಥಾನದಲ್ಲಿದೆ. ವಾಯುಮಾಲಿನ್ಯ ಸೂಚ್ಯಂಕದಲ್ಲಿ ಹಿಂದಿನ ವರ್ಷಕ್ಕಿಂತ ಮೂರು ಸ್ಥಾನಗಳನ್ನು ಸುಧಾರಿಸಿದರೂ ಕೂಡ, 2022 ರಲ್ಲಿ ಭಾರತದ ಮಾಲಿನ್ಯ ಸ್ಥಿತಿ ಕೆಟ್ಟದಾಗಿದೆ ಎಂದು ವರದಿ ಹೇಳಿದೆ. ಸ್ವಿಸ್ ವಾಯು ಗುಣಮಟ್ಟದ ತಂತ್ರಜ್ಞಾನ ಕಂಪನಿ IQAir ವರದಿ ಪ್ರಕಾರ ವಿಶ್ವದ 20 ಕಲುಷಿತ ನಗರಗಳ ಪಟ್ಟಿಯನ್ನೂ ಪ್ರಕಟಿಸಿದ್ದು, ಇದರಲ್ಲಿ ಭಾರತದ 14 ನಗರಗಳು ಸ್ಥಾನ ಪಡೆದಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ದಕ್ಷಿಣ ಕನ್ನಡಕ್ಕೆ ಕೈಗಾರಿಕಾ ಬಲ : ಗಂಜಿಮಠ ಪ್ಲಾಸ್ಟಿಕ್ ಪಾರ್ಕ್ ಕಾಮಗಾರಿ ಪರಿಶೀಲಿಸಿದ ಸಂಸದ ಬ್ರಿಜೇಶ್ ಚೌಟ

ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…

13 hours ago

Gen Z ಮತದಾರರತ್ತ ಬಿಜೆಪಿ ಕಣ್ಣು- 18-25 ವಯೋಮಾನದ ಯುವಕರಿಗಾಗಿ ‘ತರುಣ ಮೋರ್ಚಾ’ ರಚನೆಗೆ ಚಿಂತನೆ

18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…

13 hours ago

ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ಕುಸಿತ – ಚೀನಾದ ಬೇಡಿಕೆ ಇಳಿಕೆಯಿಂದ ರೈತರಿಗೆ ಸಂಕಷ್ಟ! – ಭಾರತದ ಅಡಿಕೆ ಮಾರುಕಟ್ಟೆಗೆ ಏನು ಎಚ್ಚರಿಕೆ..?

ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…

13 hours ago

ಹವಾಮಾನ ವರದಿ | 17-06-2026 | ಜೂನ್ 21 ರವರೆಗೆ ಕರಾವಳಿಯಲ್ಲಿ ಅಲ್ಪ ಮಳೆ, ಎಲ್ ನಿನೋ ಹಿನ್ನೆಲೆ ರೈತರಿಗೆ ನೀರು ಸಂಗ್ರಹದ ಸಲಹೆ

ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…

21 hours ago

ಎಲ್ ನಿನೋ ಪರಿಣಾಮ – 10 ರಾಜ್ಯಗಳಲ್ಲಿ ಜಾಗೃತಿ ಅಭಿಯಾನ

2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…

22 hours ago

ಇಂಡೋನೇಷ್ಯಾದ ಸ್ಟಾರ್ಟ್‌ಅಪ್‌ನಿಂದ ಬಾಂಗ್ಲಾದೇಶ, ಮಾಲ್ಡೀವ್ಸ್‌ಗೆ ಅಡಿಕೆ ರಫ್ತು – ಜಾಗತಿಕ ಮಾರುಕಟ್ಟೆಯಲ್ಲಿ ಅಡಿಕೆಗೆ ಬೇಡಿಕೆ ಹೆಚ್ಚಳ

ಇಂಡೋನೇಷ್ಯಾದ ಸ್ಟಾರ್ಟ್‌ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್‌ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…

2 days ago