ಅಮ್ಮನಲ್ಲವೇ ಆಕೆ ?! | ಮೊದಲ ಗುರು ಅವಳೇ ಅಲ್ಲವೇ…!

May 9, 2021
8:46 AM
ಮಗುವಿನ ತೊದಲು ನುಡಿಗೆ ಅಮ್ಮನೇ ಮುನ್ನುಡಿ, ಪ್ರಥಮ ಹೆಜ್ಜೆಗೆ , ಅಮ್ಮನದೇ ಆಲಿಂಗನ ಕಂದನೆಲ್ಲಾ ಬೆಳವಣಿಗಗೆ, ಅಮ್ಮನದೇ ರಾಯಭಾರ ಮೊದಲು ಕೊನೆಯಿಲ್ಲದೆಲ್ಲಾ ಆಗು ಹೋಗುಗಳ ಜವಾಬ್ದಾರಿಯನ್ನು ತನ್ನ ಹೆಗಲಿಗೇರಿಸಿಕೊಂಡು ಹೊಗಳಿಕೆಗೂ  ತೆಗಳಿಕೆಗಳೆರಡನ್ನೂ ತನ್ನದೆಂದೇ ಸ್ವೀಕರಿಸುವ ಅಮ್ಮನಿಗಮ್ಮನೇ  ಸಾಟಿ

ತನ್ನದೆಲ್ಲವೂ ತನ್ನದಾಗಿದ್ದರೂ ತನ್ನದಲ್ಲದ  ಸ್ಥಿತಿ ಅಮ್ಮನದ್ದು.  ಅಪ್ಪ ಅಮ್ಮನ ಮುದ್ದಿನ ಮಗಳು ಪತ್ನಿಯಾಗಿ ಹೊಸ ಸ್ಥಾನವನ್ನು ಪಡೆದು  ಹೊಸಿಲು ದಾಟಿ ಸೇರಿದ ಮನೆಯೇ ತನ್ನದೆಂದು  ನವ ಜೀವನವನ್ನು ಆರಂಭಿಸುವಳು..‌ ತನ್ನದೆಂಬ  ಮನಸಿನ ಮಾತಿಗೆ ಕಿವಿಯಾಗುತ್ತಾ ಕನಸಿನ ಹಾದಿಯ ಮರೆವಳು, ವಾಸ್ತವಕ್ಕೆ ಮೈಯೊಡ್ಡುತಾ  ಬದುಕಿನ ದಾರಿಗೆ ಸಿದ್ಧಳಾಗುವಳು.  ಮನೆಯ ಆಗು ಹೋಗುಗಳಿಗೆ  ಸ್ಪಂದಿಸುವ ಮನಸಿರುವುದು ಅಮ್ಮನಿಗೆ. ಇಲ್ಲಗಳ ಸರಮಾಲೆಯನ್ನೆಂದೂ ಪಟ್ಟಿ ಮಾಡದೆ, ಇರುವುದರಲ್ಲೇ  ತೃಪ್ತಿ  ಕಾಣುವುದು ಅಮ್ಮನಿಗೆ ಮಾತ್ರ ಸಾಧ್ಯ.

ಕೊರೊನಾ  ಸಂಕಷ್ಟ  ಸಮಯದಲ್ಲಿ ತಾನು ಧೈರ್ಯಗುಂದದೆ   ದಿನಕ್ಕೊಂದು ಕಷಾಯ , ತಂಬುಳಿ ಮಾಡಿ ಮಾನಸಿಕ  ಸ್ಥೈರ್ಯ ತುಂಬುವುದು ಅಮ್ಮಂದಿರ ಮನಸಿಗೆ ಮಾತ್ರ ಸಾಧ್ಯ.

***********************************************************

ಕನ್ನಡಿಯೊಳಗಿನ ಗಂಟು

ಸುಮ್ಮನೇ ಹೇಳುವುದಿಲ್ಲ ಅಮ್ಮೆಂನೆಂದರೆ ಕನ್ನಡಿಯೊಳಗಿನ ಗಂಟು, ಅರ್ಥವಾಗದು ಆಕೆಯ ಮನಸು.
ಅಮ್ಮನಲ್ಲವೇ ಆಕೆ!
ತೊರೆಗೊಂದು ಗುರಿಯಿದೆ
ಅದು ನದಿಯ ಸೇರುವುದು,

ಅಮ್ಮನಿಗೂ ಒಂದು ಗುರಿಯಿದೆ
ಅದು ಮಕ್ಕಳು  ದಡ ಸೇರಲೆಂದು
ಹಗಲೆನ್ನದೆ  ಇರುಳೆನ್ನದೆ  ಬೆವರ
ಹರಿಸುವಳು ಗುರಿಯೆಡೆಗೆ .

ಸಾಗಲು ತೊರೆಯಂತೆ ನದಿಯೆಡೆಗೆ
ಹಸಿವು ನೀರಾಡಿಕೆಯ ಅರಿವಿರದೆ
ಪಯಣವೆಲ್ಲವೂ ಗುರಿಯೆಡೆಗೆ

ಪಯಣ ಗಮ್ಯದತ್ತಲಿರುವಾಗ ಯಾವುದೂ ಬಾಧಿಸದು
ಜ್ವರ, ಶೀತ, ಕಾಲು ನೋವು ಲೆಕ್ಕಕ್ಕಿಲ್ಲದೆ
ಗಮನವತ್ತಲೇ ಗುರಿಯೆಡೆಗೆ

ಮಾತೆಯ ಕಷ್ಟವ ನೋಡಿ ಬೆಳೆದ ಮಕ್ಕಳಿಗೆ ಆದರ್ಶವಾಗುವುದು ಅಮ್ಮನ ನಡೆಯೇ.
ಮಕ್ಕಳೂ ನಡೆಯುವರು ತಮ್ಮ ಗುರಿಯಡೆಗೆ.

ಮಕ್ಕಳು ನಿದ್ದೆಗೆಟ್ಟರೆ ಮರುಗುವಳು ಮಾತೆ
ಆಕೆಗರಿಯದೆ ಮಕ್ಕಳು
ಸಾಗುತಿರುವರು ಅವರ ಗುರಿಯೆಡೆಗೆ
ಅಮ್ಮನ ಮನಸು ಕನ್ನಡಿಯೊಳಗಿನ ಗಂಟು
ಅರ್ಥವಾಗದು ಎಂದಿಗೂ,
ಆಕೆ ಅಮ್ಮನಲ್ಲವೇ
ಸಾಗುವುದೊಂದೇ ಗೊತ್ತು ಗುರಿಯೆಡೆಗೆ

 

# ಅಶ್ವಿನಿ ಮೂರ್ತಿ ಅಯ್ಯನಕಟ್ಟೆ

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

ಇದನ್ನೂ ಓದಿ

ಗ್ರಾಮೀಣ ಮೌಲ್ಯಗಳು ಮತ್ತು ನಗರ ಜೀವನ – ಸಮತೋಲನವೇ ನಿಜವಾದ ಮಾರ್ಗ!
April 18, 2026
7:28 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ದೇಶಾದ್ಯಂತ ಹವಾಮಾನದಲ್ಲಿ ಬದಲಾವಣೆ..! 13 ರಾಜ್ಯಗಳಲ್ಲಿ ಮಳೆ-ಚಂಡಮಾರುತ ಎಚ್ಚರಿಕೆ, ಉತ್ತರ ಭಾರತದಲ್ಲಿ 40°C ದಾಟಿದ ಉಷ್ಣತೆ
April 18, 2026
7:22 AM
by: ಮಿರರ್‌ ಡೆಸ್ಕ್
ಅಂಜನಾದ್ರಿ ಬೆಟ್ಟ ಏರುವವರಿಗೆ ಸಮಯ ನಿಗದಿ .! ಮಧ್ಯಾಹ್ನ 11ರಿಂದ 4ರವರೆಗೆ ಪ್ರವೇಶ ಬ್ಯಾನ್
April 18, 2026
7:07 AM
by: ಮಿರರ್‌ ಡೆಸ್ಕ್
ಕಲಬುರಗಿಯಲ್ಲಿ 43.2°C ತಾಪಮಾನ ದಾಖಲು..! ರಾಜ್ಯದಲ್ಲಿ ಬಿಸಿ ಏರಿಕೆ – ಮುಂದಿನ 5 ದಿನ ಎಚ್ಚರಿಕೆ
April 18, 2026
7:03 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror