ಅಮ್ಮನಲ್ಲವೇ ಆಕೆ ?! | ಮೊದಲ ಗುರು ಅವಳೇ ಅಲ್ಲವೇ…!

May 9, 2021
8:46 AM
ಮಗುವಿನ ತೊದಲು ನುಡಿಗೆ ಅಮ್ಮನೇ ಮುನ್ನುಡಿ, ಪ್ರಥಮ ಹೆಜ್ಜೆಗೆ , ಅಮ್ಮನದೇ ಆಲಿಂಗನ ಕಂದನೆಲ್ಲಾ ಬೆಳವಣಿಗಗೆ, ಅಮ್ಮನದೇ ರಾಯಭಾರ ಮೊದಲು ಕೊನೆಯಿಲ್ಲದೆಲ್ಲಾ ಆಗು ಹೋಗುಗಳ ಜವಾಬ್ದಾರಿಯನ್ನು ತನ್ನ ಹೆಗಲಿಗೇರಿಸಿಕೊಂಡು ಹೊಗಳಿಕೆಗೂ  ತೆಗಳಿಕೆಗಳೆರಡನ್ನೂ ತನ್ನದೆಂದೇ ಸ್ವೀಕರಿಸುವ ಅಮ್ಮನಿಗಮ್ಮನೇ  ಸಾಟಿ

ತನ್ನದೆಲ್ಲವೂ ತನ್ನದಾಗಿದ್ದರೂ ತನ್ನದಲ್ಲದ  ಸ್ಥಿತಿ ಅಮ್ಮನದ್ದು.  ಅಪ್ಪ ಅಮ್ಮನ ಮುದ್ದಿನ ಮಗಳು ಪತ್ನಿಯಾಗಿ ಹೊಸ ಸ್ಥಾನವನ್ನು ಪಡೆದು  ಹೊಸಿಲು ದಾಟಿ ಸೇರಿದ ಮನೆಯೇ ತನ್ನದೆಂದು  ನವ ಜೀವನವನ್ನು ಆರಂಭಿಸುವಳು..‌ ತನ್ನದೆಂಬ  ಮನಸಿನ ಮಾತಿಗೆ ಕಿವಿಯಾಗುತ್ತಾ ಕನಸಿನ ಹಾದಿಯ ಮರೆವಳು, ವಾಸ್ತವಕ್ಕೆ ಮೈಯೊಡ್ಡುತಾ  ಬದುಕಿನ ದಾರಿಗೆ ಸಿದ್ಧಳಾಗುವಳು.  ಮನೆಯ ಆಗು ಹೋಗುಗಳಿಗೆ  ಸ್ಪಂದಿಸುವ ಮನಸಿರುವುದು ಅಮ್ಮನಿಗೆ. ಇಲ್ಲಗಳ ಸರಮಾಲೆಯನ್ನೆಂದೂ ಪಟ್ಟಿ ಮಾಡದೆ, ಇರುವುದರಲ್ಲೇ  ತೃಪ್ತಿ  ಕಾಣುವುದು ಅಮ್ಮನಿಗೆ ಮಾತ್ರ ಸಾಧ್ಯ.

ಕೊರೊನಾ  ಸಂಕಷ್ಟ  ಸಮಯದಲ್ಲಿ ತಾನು ಧೈರ್ಯಗುಂದದೆ   ದಿನಕ್ಕೊಂದು ಕಷಾಯ , ತಂಬುಳಿ ಮಾಡಿ ಮಾನಸಿಕ  ಸ್ಥೈರ್ಯ ತುಂಬುವುದು ಅಮ್ಮಂದಿರ ಮನಸಿಗೆ ಮಾತ್ರ ಸಾಧ್ಯ.

***********************************************************

ಕನ್ನಡಿಯೊಳಗಿನ ಗಂಟು

ಸುಮ್ಮನೇ ಹೇಳುವುದಿಲ್ಲ ಅಮ್ಮೆಂನೆಂದರೆ ಕನ್ನಡಿಯೊಳಗಿನ ಗಂಟು, ಅರ್ಥವಾಗದು ಆಕೆಯ ಮನಸು.
ಅಮ್ಮನಲ್ಲವೇ ಆಕೆ!
ತೊರೆಗೊಂದು ಗುರಿಯಿದೆ
ಅದು ನದಿಯ ಸೇರುವುದು,

ಅಮ್ಮನಿಗೂ ಒಂದು ಗುರಿಯಿದೆ
ಅದು ಮಕ್ಕಳು  ದಡ ಸೇರಲೆಂದು
ಹಗಲೆನ್ನದೆ  ಇರುಳೆನ್ನದೆ  ಬೆವರ
ಹರಿಸುವಳು ಗುರಿಯೆಡೆಗೆ .

ಸಾಗಲು ತೊರೆಯಂತೆ ನದಿಯೆಡೆಗೆ
ಹಸಿವು ನೀರಾಡಿಕೆಯ ಅರಿವಿರದೆ
ಪಯಣವೆಲ್ಲವೂ ಗುರಿಯೆಡೆಗೆ

ಪಯಣ ಗಮ್ಯದತ್ತಲಿರುವಾಗ ಯಾವುದೂ ಬಾಧಿಸದು
ಜ್ವರ, ಶೀತ, ಕಾಲು ನೋವು ಲೆಕ್ಕಕ್ಕಿಲ್ಲದೆ
ಗಮನವತ್ತಲೇ ಗುರಿಯೆಡೆಗೆ

ಮಾತೆಯ ಕಷ್ಟವ ನೋಡಿ ಬೆಳೆದ ಮಕ್ಕಳಿಗೆ ಆದರ್ಶವಾಗುವುದು ಅಮ್ಮನ ನಡೆಯೇ.
ಮಕ್ಕಳೂ ನಡೆಯುವರು ತಮ್ಮ ಗುರಿಯಡೆಗೆ.

ಮಕ್ಕಳು ನಿದ್ದೆಗೆಟ್ಟರೆ ಮರುಗುವಳು ಮಾತೆ
ಆಕೆಗರಿಯದೆ ಮಕ್ಕಳು
ಸಾಗುತಿರುವರು ಅವರ ಗುರಿಯೆಡೆಗೆ
ಅಮ್ಮನ ಮನಸು ಕನ್ನಡಿಯೊಳಗಿನ ಗಂಟು
ಅರ್ಥವಾಗದು ಎಂದಿಗೂ,
ಆಕೆ ಅಮ್ಮನಲ್ಲವೇ
ಸಾಗುವುದೊಂದೇ ಗೊತ್ತು ಗುರಿಯೆಡೆಗೆ

 

# ಅಶ್ವಿನಿ ಮೂರ್ತಿ ಅಯ್ಯನಕಟ್ಟೆ

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

ಇದನ್ನೂ ಓದಿ

ಉದ್ಯೋಗಾಕಾಂಕ್ಷಿಗಳಿಗೆ ಅವಕಾಶ | ಜುಲೈ 21ರಂದು ಕ್ರೆಡಿಟ್ ಕಾರ್ಡ್ ಸೇಲ್ಸ್ ಟೀಮ್ ಲೀಡರ್ ಹುದ್ದೆಗೆ ನೇರ ಸಂದರ್ಶನ
July 18, 2026
8:59 PM
by: ಮಿರರ್‌ ಡೆಸ್ಕ್
ಜುಲೈ 31 ರೊಳಗೆ ಬೆಳೆವಿಮೆ ನೋಂದಣಿ ಮಾಡಿಸಿಕೊಳ್ಳಿ – ಅಡಿಕೆ, ಕಾಳುಮೆಣಸು ಬೆಳೆಗಾರರಿಗೆ ಅವಕಾಶ
July 18, 2026
8:10 PM
by: ದ ರೂರಲ್ ಮಿರರ್.ಕಾಂ
ಕರಾವಳಿ–ಹವಾಮಾನ ವರದಿ | 18-07-2026 | ಮಲೆನಾಡಿನಲ್ಲಿ ಇನ್ನೂ 10 ದಿನ ಮಳೆ ಮುಂದುವರಿಕೆ…! ಉತ್ತರ ಒಳನಾಡಿನಲ್ಲಿ ಜುಲೈ 19 ರಿಂದ ಮಳೆ ಇಳಿಮುಖ
July 18, 2026
1:04 PM
by: ಸಾಯಿಶೇಖರ್ ಕರಿಕಳ
ಮಳೆ ಎಚ್ಚರಿಕೆ – ಉಡುಪಿ, ದಕ್ಷಿಣ ಕನ್ನಡ ಸೇರಿ ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆ, ಗಂಟೆಗೆ 50 ಕಿ.ಮೀ. ವೇಗದ ಗಾಳಿ ಸಾಧ್ಯತೆ
July 18, 2026
8:36 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror