Advertisement
MIRROR FOCUS

ಅಮ್ಮನಲ್ಲವೇ ಆಕೆ ?! | ಮೊದಲ ಗುರು ಅವಳೇ ಅಲ್ಲವೇ…!

Share
ಮಗುವಿನ ತೊದಲು ನುಡಿಗೆ ಅಮ್ಮನೇ ಮುನ್ನುಡಿ, ಪ್ರಥಮ ಹೆಜ್ಜೆಗೆ , ಅಮ್ಮನದೇ ಆಲಿಂಗನ ಕಂದನೆಲ್ಲಾ ಬೆಳವಣಿಗಗೆ, ಅಮ್ಮನದೇ ರಾಯಭಾರ ಮೊದಲು ಕೊನೆಯಿಲ್ಲದೆಲ್ಲಾ ಆಗು ಹೋಗುಗಳ ಜವಾಬ್ದಾರಿಯನ್ನು ತನ್ನ ಹೆಗಲಿಗೇರಿಸಿಕೊಂಡು ಹೊಗಳಿಕೆಗೂ  ತೆಗಳಿಕೆಗಳೆರಡನ್ನೂ ತನ್ನದೆಂದೇ ಸ್ವೀಕರಿಸುವ ಅಮ್ಮನಿಗಮ್ಮನೇ  ಸಾಟಿ.

ತನ್ನದೆಲ್ಲವೂ ತನ್ನದಾಗಿದ್ದರೂ ತನ್ನದಲ್ಲದ  ಸ್ಥಿತಿ ಅಮ್ಮನದ್ದು.  ಅಪ್ಪ ಅಮ್ಮನ ಮುದ್ದಿನ ಮಗಳು ಪತ್ನಿಯಾಗಿ ಹೊಸ ಸ್ಥಾನವನ್ನು ಪಡೆದು  ಹೊಸಿಲು ದಾಟಿ ಸೇರಿದ ಮನೆಯೇ ತನ್ನದೆಂದು  ನವ ಜೀವನವನ್ನು ಆರಂಭಿಸುವಳು..‌ ತನ್ನದೆಂಬ  ಮನಸಿನ ಮಾತಿಗೆ ಕಿವಿಯಾಗುತ್ತಾ ಕನಸಿನ ಹಾದಿಯ ಮರೆವಳು, ವಾಸ್ತವಕ್ಕೆ ಮೈಯೊಡ್ಡುತಾ  ಬದುಕಿನ ದಾರಿಗೆ ಸಿದ್ಧಳಾಗುವಳು.  ಮನೆಯ ಆಗು ಹೋಗುಗಳಿಗೆ  ಸ್ಪಂದಿಸುವ ಮನಸಿರುವುದು ಅಮ್ಮನಿಗೆ. ಇಲ್ಲಗಳ ಸರಮಾಲೆಯನ್ನೆಂದೂ ಪಟ್ಟಿ ಮಾಡದೆ, ಇರುವುದರಲ್ಲೇ  ತೃಪ್ತಿ  ಕಾಣುವುದು ಅಮ್ಮನಿಗೆ ಮಾತ್ರ ಸಾಧ್ಯ.

Advertisement

ಕೊರೊನಾ  ಸಂಕಷ್ಟ  ಸಮಯದಲ್ಲಿ ತಾನು ಧೈರ್ಯಗುಂದದೆ   ದಿನಕ್ಕೊಂದು ಕಷಾಯ , ತಂಬುಳಿ ಮಾಡಿ ಮಾನಸಿಕ  ಸ್ಥೈರ್ಯ ತುಂಬುವುದು ಅಮ್ಮಂದಿರ ಮನಸಿಗೆ ಮಾತ್ರ ಸಾಧ್ಯ.

***********************************************************

ಕನ್ನಡಿಯೊಳಗಿನ ಗಂಟು

ಸುಮ್ಮನೇ ಹೇಳುವುದಿಲ್ಲ ಅಮ್ಮೆಂನೆಂದರೆ ಕನ್ನಡಿಯೊಳಗಿನ ಗಂಟು, ಅರ್ಥವಾಗದು ಆಕೆಯ ಮನಸು.
ಅಮ್ಮನಲ್ಲವೇ ಆಕೆ!
ತೊರೆಗೊಂದು ಗುರಿಯಿದೆ
ಅದು ನದಿಯ ಸೇರುವುದು,

ಅಮ್ಮನಿಗೂ ಒಂದು ಗುರಿಯಿದೆ
ಅದು ಮಕ್ಕಳು  ದಡ ಸೇರಲೆಂದು
ಹಗಲೆನ್ನದೆ  ಇರುಳೆನ್ನದೆ  ಬೆವರ
ಹರಿಸುವಳು ಗುರಿಯೆಡೆಗೆ .

ಸಾಗಲು ತೊರೆಯಂತೆ ನದಿಯೆಡೆಗೆ
ಹಸಿವು ನೀರಾಡಿಕೆಯ ಅರಿವಿರದೆ
ಪಯಣವೆಲ್ಲವೂ ಗುರಿಯೆಡೆಗೆ

ಪಯಣ ಗಮ್ಯದತ್ತಲಿರುವಾಗ ಯಾವುದೂ ಬಾಧಿಸದು
ಜ್ವರ, ಶೀತ, ಕಾಲು ನೋವು ಲೆಕ್ಕಕ್ಕಿಲ್ಲದೆ
ಗಮನವತ್ತಲೇ ಗುರಿಯೆಡೆಗೆ

ಮಾತೆಯ ಕಷ್ಟವ ನೋಡಿ ಬೆಳೆದ ಮಕ್ಕಳಿಗೆ ಆದರ್ಶವಾಗುವುದು ಅಮ್ಮನ ನಡೆಯೇ.
ಮಕ್ಕಳೂ ನಡೆಯುವರು ತಮ್ಮ ಗುರಿಯಡೆಗೆ.

ಮಕ್ಕಳು ನಿದ್ದೆಗೆಟ್ಟರೆ ಮರುಗುವಳು ಮಾತೆ
ಆಕೆಗರಿಯದೆ ಮಕ್ಕಳು
ಸಾಗುತಿರುವರು ಅವರ ಗುರಿಯೆಡೆಗೆ
ಅಮ್ಮನ ಮನಸು ಕನ್ನಡಿಯೊಳಗಿನ ಗಂಟು
ಅರ್ಥವಾಗದು ಎಂದಿಗೂ,
ಆಕೆ ಅಮ್ಮನಲ್ಲವೇ
ಸಾಗುವುದೊಂದೇ ಗೊತ್ತು ಗುರಿಯೆಡೆಗೆ

 

# ಅಶ್ವಿನಿ ಮೂರ್ತಿ ಅಯ್ಯನಕಟ್ಟೆ

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಕರಾವಳಿಯಲ್ಲಿ ಅಕಾಲಿಕ ಮಳೆ ಅಬ್ಬರ | ಸುಬ್ರಹ್ಮಣ್ಯದ ಬಳಿ 42 ಮಿಮೀ, ಅಡಿಕೆ ಬೆಳೆಗಾರರಿಗೆ ಸಂಕಷ್ಟ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…

2 hours ago

ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?

ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…

8 hours ago

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ

ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…

12 hours ago

ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ

ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…

13 hours ago

ರೈತರಿಗೆ ಗನ್ ಪರವಾನಗಿ : ಶೀಘ್ರದಲ್ಲೇ ಆನ್ಲೈನ್ ವ್ಯವಸ್ಥೆ ಜಾರಿ – ಜಿಲ್ಲಾಧಿಕಾರಿ ದರ್ಶನ್ ಎಚ್.ವಿ

ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…

13 hours ago

ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!

ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…

1 day ago