Advertisement
MIRROR FOCUS

ಅಮ್ಮನಲ್ಲವೇ ಆಕೆ ?! | ಮೊದಲ ಗುರು ಅವಳೇ ಅಲ್ಲವೇ…!

Share
ಮಗುವಿನ ತೊದಲು ನುಡಿಗೆ ಅಮ್ಮನೇ ಮುನ್ನುಡಿ, ಪ್ರಥಮ ಹೆಜ್ಜೆಗೆ , ಅಮ್ಮನದೇ ಆಲಿಂಗನ ಕಂದನೆಲ್ಲಾ ಬೆಳವಣಿಗಗೆ, ಅಮ್ಮನದೇ ರಾಯಭಾರ ಮೊದಲು ಕೊನೆಯಿಲ್ಲದೆಲ್ಲಾ ಆಗು ಹೋಗುಗಳ ಜವಾಬ್ದಾರಿಯನ್ನು ತನ್ನ ಹೆಗಲಿಗೇರಿಸಿಕೊಂಡು ಹೊಗಳಿಕೆಗೂ  ತೆಗಳಿಕೆಗಳೆರಡನ್ನೂ ತನ್ನದೆಂದೇ ಸ್ವೀಕರಿಸುವ ಅಮ್ಮನಿಗಮ್ಮನೇ  ಸಾಟಿ.

ತನ್ನದೆಲ್ಲವೂ ತನ್ನದಾಗಿದ್ದರೂ ತನ್ನದಲ್ಲದ  ಸ್ಥಿತಿ ಅಮ್ಮನದ್ದು.  ಅಪ್ಪ ಅಮ್ಮನ ಮುದ್ದಿನ ಮಗಳು ಪತ್ನಿಯಾಗಿ ಹೊಸ ಸ್ಥಾನವನ್ನು ಪಡೆದು  ಹೊಸಿಲು ದಾಟಿ ಸೇರಿದ ಮನೆಯೇ ತನ್ನದೆಂದು  ನವ ಜೀವನವನ್ನು ಆರಂಭಿಸುವಳು..‌ ತನ್ನದೆಂಬ  ಮನಸಿನ ಮಾತಿಗೆ ಕಿವಿಯಾಗುತ್ತಾ ಕನಸಿನ ಹಾದಿಯ ಮರೆವಳು, ವಾಸ್ತವಕ್ಕೆ ಮೈಯೊಡ್ಡುತಾ  ಬದುಕಿನ ದಾರಿಗೆ ಸಿದ್ಧಳಾಗುವಳು.  ಮನೆಯ ಆಗು ಹೋಗುಗಳಿಗೆ  ಸ್ಪಂದಿಸುವ ಮನಸಿರುವುದು ಅಮ್ಮನಿಗೆ. ಇಲ್ಲಗಳ ಸರಮಾಲೆಯನ್ನೆಂದೂ ಪಟ್ಟಿ ಮಾಡದೆ, ಇರುವುದರಲ್ಲೇ  ತೃಪ್ತಿ  ಕಾಣುವುದು ಅಮ್ಮನಿಗೆ ಮಾತ್ರ ಸಾಧ್ಯ.

ಕೊರೊನಾ  ಸಂಕಷ್ಟ  ಸಮಯದಲ್ಲಿ ತಾನು ಧೈರ್ಯಗುಂದದೆ   ದಿನಕ್ಕೊಂದು ಕಷಾಯ , ತಂಬುಳಿ ಮಾಡಿ ಮಾನಸಿಕ  ಸ್ಥೈರ್ಯ ತುಂಬುವುದು ಅಮ್ಮಂದಿರ ಮನಸಿಗೆ ಮಾತ್ರ ಸಾಧ್ಯ.

***********************************************************

ಕನ್ನಡಿಯೊಳಗಿನ ಗಂಟು

ಸುಮ್ಮನೇ ಹೇಳುವುದಿಲ್ಲ ಅಮ್ಮೆಂನೆಂದರೆ ಕನ್ನಡಿಯೊಳಗಿನ ಗಂಟು, ಅರ್ಥವಾಗದು ಆಕೆಯ ಮನಸು.
ಅಮ್ಮನಲ್ಲವೇ ಆಕೆ!
ತೊರೆಗೊಂದು ಗುರಿಯಿದೆ
ಅದು ನದಿಯ ಸೇರುವುದು,

ಅಮ್ಮನಿಗೂ ಒಂದು ಗುರಿಯಿದೆ
ಅದು ಮಕ್ಕಳು  ದಡ ಸೇರಲೆಂದು
ಹಗಲೆನ್ನದೆ  ಇರುಳೆನ್ನದೆ  ಬೆವರ
ಹರಿಸುವಳು ಗುರಿಯೆಡೆಗೆ .

ಸಾಗಲು ತೊರೆಯಂತೆ ನದಿಯೆಡೆಗೆ
ಹಸಿವು ನೀರಾಡಿಕೆಯ ಅರಿವಿರದೆ
ಪಯಣವೆಲ್ಲವೂ ಗುರಿಯೆಡೆಗೆ

ಪಯಣ ಗಮ್ಯದತ್ತಲಿರುವಾಗ ಯಾವುದೂ ಬಾಧಿಸದು
ಜ್ವರ, ಶೀತ, ಕಾಲು ನೋವು ಲೆಕ್ಕಕ್ಕಿಲ್ಲದೆ
ಗಮನವತ್ತಲೇ ಗುರಿಯೆಡೆಗೆ

ಮಾತೆಯ ಕಷ್ಟವ ನೋಡಿ ಬೆಳೆದ ಮಕ್ಕಳಿಗೆ ಆದರ್ಶವಾಗುವುದು ಅಮ್ಮನ ನಡೆಯೇ.
ಮಕ್ಕಳೂ ನಡೆಯುವರು ತಮ್ಮ ಗುರಿಯಡೆಗೆ.

ಮಕ್ಕಳು ನಿದ್ದೆಗೆಟ್ಟರೆ ಮರುಗುವಳು ಮಾತೆ
ಆಕೆಗರಿಯದೆ ಮಕ್ಕಳು
ಸಾಗುತಿರುವರು ಅವರ ಗುರಿಯೆಡೆಗೆ
ಅಮ್ಮನ ಮನಸು ಕನ್ನಡಿಯೊಳಗಿನ ಗಂಟು
ಅರ್ಥವಾಗದು ಎಂದಿಗೂ,
ಆಕೆ ಅಮ್ಮನಲ್ಲವೇ
ಸಾಗುವುದೊಂದೇ ಗೊತ್ತು ಗುರಿಯೆಡೆಗೆ

 

# ಅಶ್ವಿನಿ ಮೂರ್ತಿ ಅಯ್ಯನಕಟ್ಟೆ

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಅನ್ನವೇ ಜೀವನ, ಅನ್ನವೇ ಮೃತ್ಯು

ಮಿತಾಹಾರ, ಯಜ್ಞಸ್ವರೂಪ ಭೋಜನ ಹಾಗೂ ಆಹಾರದ ಶಾಸ್ತ್ರೋಕ್ತ ಮಹತ್ವವನ್ನು ಶ್ರೀ ರಾಘವೇಶ್ವರ ಭಾರತೀ…

5 hours ago

ಕೃಷಿ ಕ್ಷೇತ್ರಕ್ಕೆ ಎಥೆನಾಲ್‌ ದೊಡ್ಡ ಅವಕಾಶ

ಎಥೆನಾಲ್‌ ನೀತಿಯಿಂದ ರೈತರಿಗೆ ಉತ್ತಮ ಬೆಲೆ ದೊರೆಯಲಿದ್ದು, ದೇಶದ ಇಂಧನ ಭದ್ರತೆಯೂ ಬಲಗೊಳ್ಳಲಿದೆ…

5 hours ago

ಮಾನವ–ವನ್ಯಜೀವಿ ಸಂಘರ್ಷ ತಡೆಗೆ ರಾಷ್ಟ್ರೀಯ ಕಾರ್ಯತಂತ್ರ – ಕರ್ನಾಟಕದ AI ಮಾದರಿಗೆ ಕೇಂದ್ರದ ಮೆಚ್ಚುಗೆ

ಮಾನವ–ವನ್ಯಜೀವಿ ಸಂಘರ್ಷ ತಡೆ ಕುರಿತು ನಡೆದ ಸಂಸದೀಯ ಸಭೆಯಲ್ಲಿ ಕರ್ನಾಟಕದ AI ಆಧಾರಿತ…

5 hours ago

ಅಕ್ರಮ ಅಡಿಕೆ ಆಮದು ತಡೆಗೆ ಕೇಂದ್ರದ ಭರವಸೆ – ಅಮಿತ್ ಶಾ, ನಿರ್ಮಲಾ ಸೀತಾರಾಮನ್ ಭೇಟಿಯಾದ ಕ್ಯಾಂಪ್ಕೊ ನಿಯೋಗ

ಅಕ್ರಮ ಅಡಿಕೆ ಆಮದು, ಜಿಎಸ್‌ಟಿ ತಾರತಮ್ಯ ಹಾಗೂ ಸಹಕಾರ ಸಂಘಗಳ ಸಮಸ್ಯೆಗಳ ಕುರಿತು…

5 hours ago

ಹವಾಮಾನ ವರದಿ | 08-07-2026 | ರಾಜ್ಯದಲ್ಲಿ ಮುಂಗಾರು ಪರಿಸ್ಥಿತಿ ಹೇಗಿದೆ…? ಕರಾವಳಿಯಲ್ಲಿ ಮಳೆ ಕಡಿಮೆಯಾಗುತ್ತಿದೆಯೇ?

ಆಗಸ್ಟ್‌ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್‌…

15 hours ago

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮ ಅಡಿಕೆ ಜಾಲ | ಮೂರು ಹಂತದ ಕಳ್ಳಸಾಗಣೆ ಜಾಲವನ್ನು ಬಯಲಿಗೆಳೆದ ಇಡಿ

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…

18 hours ago