Advertisement
MIRROR FOCUS

ಅಮ್ಮನಲ್ಲವೇ ಆಕೆ ?! | ಮೊದಲ ಗುರು ಅವಳೇ ಅಲ್ಲವೇ…!

Share
ಮಗುವಿನ ತೊದಲು ನುಡಿಗೆ ಅಮ್ಮನೇ ಮುನ್ನುಡಿ, ಪ್ರಥಮ ಹೆಜ್ಜೆಗೆ , ಅಮ್ಮನದೇ ಆಲಿಂಗನ ಕಂದನೆಲ್ಲಾ ಬೆಳವಣಿಗಗೆ, ಅಮ್ಮನದೇ ರಾಯಭಾರ ಮೊದಲು ಕೊನೆಯಿಲ್ಲದೆಲ್ಲಾ ಆಗು ಹೋಗುಗಳ ಜವಾಬ್ದಾರಿಯನ್ನು ತನ್ನ ಹೆಗಲಿಗೇರಿಸಿಕೊಂಡು ಹೊಗಳಿಕೆಗೂ  ತೆಗಳಿಕೆಗಳೆರಡನ್ನೂ ತನ್ನದೆಂದೇ ಸ್ವೀಕರಿಸುವ ಅಮ್ಮನಿಗಮ್ಮನೇ  ಸಾಟಿ.

ತನ್ನದೆಲ್ಲವೂ ತನ್ನದಾಗಿದ್ದರೂ ತನ್ನದಲ್ಲದ  ಸ್ಥಿತಿ ಅಮ್ಮನದ್ದು.  ಅಪ್ಪ ಅಮ್ಮನ ಮುದ್ದಿನ ಮಗಳು ಪತ್ನಿಯಾಗಿ ಹೊಸ ಸ್ಥಾನವನ್ನು ಪಡೆದು  ಹೊಸಿಲು ದಾಟಿ ಸೇರಿದ ಮನೆಯೇ ತನ್ನದೆಂದು  ನವ ಜೀವನವನ್ನು ಆರಂಭಿಸುವಳು..‌ ತನ್ನದೆಂಬ  ಮನಸಿನ ಮಾತಿಗೆ ಕಿವಿಯಾಗುತ್ತಾ ಕನಸಿನ ಹಾದಿಯ ಮರೆವಳು, ವಾಸ್ತವಕ್ಕೆ ಮೈಯೊಡ್ಡುತಾ  ಬದುಕಿನ ದಾರಿಗೆ ಸಿದ್ಧಳಾಗುವಳು.  ಮನೆಯ ಆಗು ಹೋಗುಗಳಿಗೆ  ಸ್ಪಂದಿಸುವ ಮನಸಿರುವುದು ಅಮ್ಮನಿಗೆ. ಇಲ್ಲಗಳ ಸರಮಾಲೆಯನ್ನೆಂದೂ ಪಟ್ಟಿ ಮಾಡದೆ, ಇರುವುದರಲ್ಲೇ  ತೃಪ್ತಿ  ಕಾಣುವುದು ಅಮ್ಮನಿಗೆ ಮಾತ್ರ ಸಾಧ್ಯ.

Advertisement
Advertisement

ಕೊರೊನಾ  ಸಂಕಷ್ಟ  ಸಮಯದಲ್ಲಿ ತಾನು ಧೈರ್ಯಗುಂದದೆ   ದಿನಕ್ಕೊಂದು ಕಷಾಯ , ತಂಬುಳಿ ಮಾಡಿ ಮಾನಸಿಕ  ಸ್ಥೈರ್ಯ ತುಂಬುವುದು ಅಮ್ಮಂದಿರ ಮನಸಿಗೆ ಮಾತ್ರ ಸಾಧ್ಯ.

Advertisement

***********************************************************

ಕನ್ನಡಿಯೊಳಗಿನ ಗಂಟು

ಸುಮ್ಮನೇ ಹೇಳುವುದಿಲ್ಲ ಅಮ್ಮೆಂನೆಂದರೆ ಕನ್ನಡಿಯೊಳಗಿನ ಗಂಟು, ಅರ್ಥವಾಗದು ಆಕೆಯ ಮನಸು.
ಅಮ್ಮನಲ್ಲವೇ ಆಕೆ!
ತೊರೆಗೊಂದು ಗುರಿಯಿದೆ
ಅದು ನದಿಯ ಸೇರುವುದು,

Advertisement

ಅಮ್ಮನಿಗೂ ಒಂದು ಗುರಿಯಿದೆ
ಅದು ಮಕ್ಕಳು  ದಡ ಸೇರಲೆಂದು
ಹಗಲೆನ್ನದೆ  ಇರುಳೆನ್ನದೆ  ಬೆವರ
ಹರಿಸುವಳು ಗುರಿಯೆಡೆಗೆ .

ಸಾಗಲು ತೊರೆಯಂತೆ ನದಿಯೆಡೆಗೆ
ಹಸಿವು ನೀರಾಡಿಕೆಯ ಅರಿವಿರದೆ
ಪಯಣವೆಲ್ಲವೂ ಗುರಿಯೆಡೆಗೆ

Advertisement

ಪಯಣ ಗಮ್ಯದತ್ತಲಿರುವಾಗ ಯಾವುದೂ ಬಾಧಿಸದು
ಜ್ವರ, ಶೀತ, ಕಾಲು ನೋವು ಲೆಕ್ಕಕ್ಕಿಲ್ಲದೆ
ಗಮನವತ್ತಲೇ ಗುರಿಯೆಡೆಗೆ

ಮಾತೆಯ ಕಷ್ಟವ ನೋಡಿ ಬೆಳೆದ ಮಕ್ಕಳಿಗೆ ಆದರ್ಶವಾಗುವುದು ಅಮ್ಮನ ನಡೆಯೇ.
ಮಕ್ಕಳೂ ನಡೆಯುವರು ತಮ್ಮ ಗುರಿಯಡೆಗೆ.

Advertisement

ಮಕ್ಕಳು ನಿದ್ದೆಗೆಟ್ಟರೆ ಮರುಗುವಳು ಮಾತೆ
ಆಕೆಗರಿಯದೆ ಮಕ್ಕಳು
ಸಾಗುತಿರುವರು ಅವರ ಗುರಿಯೆಡೆಗೆ
ಅಮ್ಮನ ಮನಸು ಕನ್ನಡಿಯೊಳಗಿನ ಗಂಟು
ಅರ್ಥವಾಗದು ಎಂದಿಗೂ,
ಆಕೆ ಅಮ್ಮನಲ್ಲವೇ
ಸಾಗುವುದೊಂದೇ ಗೊತ್ತು ಗುರಿಯೆಡೆಗೆ

 

Advertisement

# ಅಶ್ವಿನಿ ಮೂರ್ತಿ ಅಯ್ಯನಕಟ್ಟೆ

 

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಯೋಚಿಸಿ… ಚಿಂತನೆ ನಡೆಸಿ… ಮತದಾನ ಮಾಡಬೇಕು… | ಏಕೆ ಗೊತ್ತಾ….?

ಮತದಾನ ಏಕೆ ಮಾಡಬೇಕು, ಯೋಚಿಸಿ ಏಕೆ ಮತದಾನ ಮಾಡಲೇಬೇಕು..? ಈ ಬಗ್ಗೆ ಅಭಿಪ್ರಾಯ…

1 hour ago

ಕೇಂದ್ರದಿಂದ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ವಿಚಾರ : ತಜ್ಞರ ವರದಿ ಸಲ್ಲಿಸಲು ಕೇಂದ್ರಕ್ಕೆ ಸುಪ್ರೀಂ ಸೂಚನೆ

ರಾಜ್ಯಕ್ಕೆ ಕೇಂದ್ರದಿಂದ(Central Govt) ಬರಬೇಕಾದ ಬರ ಪರಿಹಾರ ಕುರಿತಂತೆ ರಾಜ್ಯ ಹಾಗೂ ಕೇಂದ್ರ…

1 hour ago

ನಿಮಗಿದು ಗೊತ್ತೇ? : ಆರೋಗ್ಯಕ್ಕಾಗಿ ಭೂ ವಿದ್ಯುತ್ ಆಯಸ್ಕಾಂತದ ಮಹತ್ವ… : ಅರ್ಥಿಂಗ್/ಗ್ರೌಂಡಿಂಗ್ ಹಾಗೂ ಆರೋಗ್ಯ!

ಪರಿಸರ ಔಷಧ ಶಾಸ್ತ್ರವು(Environmental Medicine) ಸಾಮಾನ್ಯವಾಗಿ ಮಾನವನ ಆರೋಗ್ಯದ(Human health) ಮೇಲೆ ನಕಾರಾತ್ಮಕ…

4 hours ago

ಎರಡನೇ ಹಂತದ ಮತದಾನಕ್ಕೆ ರಾಜ್ಯದಲ್ಲಿ ಭರ್ಜರಿ ತಯಾರಿ : ಭಾರತ ವಿಶ್ವದ ಟಾಪ್ 3 ಸ್ಥಾನಕ್ಕೇರಿಸುವ ಶಕ್ತಿ ನಿಮ್ಮ ಮತಕ್ಕಿದೆ : ಮೋದಿ

ಕರ್ನಾಟಕದಲ್ಲಿ(Karnakta) ಮೊದಲ ಹಂತದ ಚುನಾವಣೆ(Election) ಮುಗಿದಿದ್ದು, ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ(Campaign)…

4 hours ago

ರೈತರ ಪಾಲಿಗೆ ನೆರವಾದ ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆ : 17ನೇ ಕಂತಿನ ಹಣ ರೈತರ ಖಾತೆಗೆ ಯಾವಗ ಬರುತ್ತೆ..?

ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌(PM Kisan) ಯೋಜನೆ ಆರಂಭವಾದಗಿಂದಲೂ ರೈತರ(Farmer) ಖಾತೆಗೆ ನೇರವಾಗಿ…

5 hours ago