ರೈತರಿಗೆ PMFBY ಯೋಜನೆಯಡಿ ಬೆಳೆ ವಿಮೆ ಪರಿಹಾರ | ಕೇಂದ್ರ ಕೃಷಿ ಸಚಿವರಿಗೆ ಸಂಸದ ಬಸವರಾಜ ಬೊಮ್ಮಾಯಿ ಪತ್ರ

August 20, 2024
3:16 PM

ಹಾವೇರಿ ಜಿಲ್ಲೆಯ ರೈತರ ಬೆಳೆ ವಿಮೆಯನ್ನು PMFBY ಅಡಿಯಲ್ಲಿ ಶೀಘ್ರವಾಗಿ ಇತ್ಯರ್ಥ ಪಡಿಸುವಂತೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವರಾದ ಶಿವರಾಜ್ ಸಿಂಗ್ ಚೌಹ್ವಾಣ್ ಅವರಿಗೆ ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಸಂಸದ ಬಸವರಾಜ ಬೊಮ್ಮಾಯಿಯವರು ಪತ್ರ ಬರೆದು ದೂರವಾಣಿ ಮೂಲಕ ಮಾತನಾಡಿದ್ದಾರೆ‌.

Advertisement
Advertisement

ನೀವು ಕೃಷಿ ಹಾಗೂ ರೈತರ ಕಲ್ಯಾಣ ಸಚಿವರಾಗಿ ನೇಮಕವಾಗಿರುವುದಕ್ಕೆ ತುಂಬು ಹೃದಯದ ಅಭಿನಂದನೆಗಳು ನಿಮಗೆ ಗ್ರಾಮೀಣಾಭಿವೃದ್ಧಿ ಮತ್ತು ಕೃಷಿ ಕ್ಷೇತ್ರದಲ್ಲಿ ಇರುವ ಅಪಾರ ಜ್ಞಾನದ ಹಿನ್ನೆಲೆಯಲ್ಲಿ ಕೃಷಿ ಕ್ಷೇತ್ರದಲ್ಲಿ ಸಾಕಷ್ಟು ಸುಧಾರಣೆ ಆಗುವುದರಲ್ಲಿ ಯಾವುದೇ ಸಂಶಯ ಇಲ್ಲ ಎಂದು ಉಲ್ಲೇಖಿಸಿದ್ದಾರೆ.

ಕರ್ನಾಟಕದ ನನ್ನ ಲೋಕಸಭಾ ಕ್ಷೇತ್ರ ಹಾವೇರಿ ಜಿಲ್ಲೆಯ ರೈತರು 2023-24ನೇ ಸಾಲಿನ ಖಾರಿಫ್ ಹಂಗಾಮಿನಲ್ಲಿ ಅಸಮರ್ಪಕ ಮಳೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಒಂದು ವರ್ಷ ಕಳೆದರೂ ಅವರಿಗೆ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿಯಲ್ಲಿ ವಿಮಾ ಪರಿಹಾರ ದೊರೆಕಿಲ್ಲ. ಹಾವೇರಿ ಜಿಲ್ಲೆಯಲ್ಲಿ ಬೆಳೆ ವಿಮೆ ಪರಿಹಾರವನ್ನು ವಿತರಿಸಲು ರಿಲಾಯನ್ಸ್ ಜನರಲ್ ಇನ್ಸೂರೆನ್ಸ್ ಕಂಪನಿ ಲಿಮಿಟೆಡ್, (RGICL) ಜವಾಬ್ದಾರಿಯನ್ನು ಹೊಂದಿದ್ದು, ಸದರಿ ಕಂಪನಿಯು ಕೆಲವೊಂದು ಆಕ್ಷೇಪಣೆಗಳನ್ನು ವ್ಯಕ್ತಪಡಿಸಿದ್ದು ಅವರ ಆಕ್ಷೇಪಣೆಗಳಿಗೆ ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಸಮಿತಿಯು ಸಮರ್ಪಕ ಉತ್ತರವನ್ನು ಸಲ್ಲಿಸಿದೆ. ರಿಲಾಯನ್ಸ್ ಜನರಲ್ ಇನ್ಸುರೆನ್ಸ್ ಕಂಪನಿ ಎತ್ತಿರುವ ಆಕ್ಷೇಪಗಳು ನ್ಯಾಯಸಮ್ಮತವಾಗಿಲ್ಲ, ಅಲ್ಲದೇ ವಿಮೆ ಪರಿಹಾರ ನೀಡಲು ಅನಗತ್ಯ ವಿಳಂಬ ತಂತ್ರ ಅನುಸರಿಸುತ್ತಿರುವಂತೆ ಕಾಣಿಸುತ್ತಿದೆ ಎಂದು ಪತ್ರದ ಮೂಲಕ ತಿಳಿಸಿದ್ದಾರೆ‌.

ರಿಲಾಯನ್ಸ್ ಜನರಲ್ ಇನ್ಸೂರೆನ್ಸ್ ಕಂಪನಿಗೆ ಒಟ್ಟು 2023-24ನೇ ಸಾಲಿನ ಬೆಳೆ ವಿಮೆ ಮೊತ್ತವನ್ನು ರೂ.260.94 ಕೋಟಿಗಳನ್ನು ಪಾವತಿಸಲಾಗಿದ್ದು ಅದರಲ್ಲಿ ವಿಮೆ ಕ್ರೈಮ್ ಮೊತ್ತವು ರೂ.132.65 ಕೋಟಿಗಳಾಗಿದ್ದು ಉಳಿದ ರೂ.66.05 ಕೋಟಿಗಳ ಮೊತ್ತವನ್ನು ರಾಜ್ಯ ಮಟ್ಟದ ತಾಂತ್ರಿಕ ಸಲಹಾ ಸಮಿತಿಯು ದಿನಾಂಕ: 24.04.2024ರ ನಡವಳಿಯಲ್ಲಿ ಶಿಫಾರಸ್ಸು ಮಾಡಿರುತ್ತದೆ. ಹಾವೇರಿ ಜಿಲ್ಲೆಯ ರೈತರು ಈಗಾಗಲೇ ಬರ ಹಾಗೂ ಪ್ರವಾಹದಿಂದ ತತ್ತರಿಸಿದ್ದು, ಇದರಿಂದ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಆದ್ದರಿಂದ ಈ ವಿಷಯದಲ್ಲಿ ತಾವು ಇದೇ ಆಗಸ್ಟ್ 22 ಎಂದು ನಡೆಯುವ ತಾಂತ್ರಿಕ ಸಲಹಾ ಸಮಿತಿ ಸಭೆಯಲ್ಲಿ ವಯಕ್ತಿಯ ಆಸಕ್ತಿ ವಹಿಸಿ ರೈತರಿಗೆ ಬೆಳೆ ವಿಮೆ ಪರಿಹಾರ ಕೊಡೆಸಿ ರೈತರ ಕೃಷಿ ಚಟುವಟಿಕೆಗಳು ಸುಗಮವಾಗಿ ನಡೆಯಲು ಕ್ರಮ ವಹಿಸಬೇಕು ಎಂದು ಮನವಿ ಮಾಡಿದ್ದಾರೆ.

ಇದಲ್ಲದೇ ರಾಜ್ಯ ಸರ್ಕಾರದ ಕೃಷಿ ಸಚಿವರಾದ ಚಲುವರಾಯಸ್ವಾಮಿ ಅವರಿಗೂ ಪತ್ರ ಬರೆದಿದ್ದು, ರೈತರಿಗೆ ಬೆಳೆ ಪರಿಹಾರ ಕೊಡಿಸುವುದು ರಾಜ್ಯ ಸರ್ಕಾರದ ಆದ್ಯ ಕರ್ತವ್ಯವಾಗಿದ್ದು, ರಾಜ್ಯ ಸರ್ಕಾರ ರೈತರಿಗೆ ಬೆಳೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ.

Advertisement
ನಿಮ್ಮ ಅಭಿಪ್ರಾಯಗಳನ್ನು ಇಲ್ಲಿ ದಾಖಲಿಸಿ…

Advertisement

Advertisement
Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕೋಲಾರದ 54 ಸಾವಿರ ಹೆಕ್ಟೇರ್‌ನಲ್ಲಿ ಮಾವು ಬೆಳೆ | ಈ ಬಾರಿ ಮಾವು ಬೆಳೆ ಧಾರಣೆ ತೀವ್ರ ಕುಸಿತ
June 29, 2025
12:14 PM
by: The Rural Mirror ಸುದ್ದಿಜಾಲ
ಅಡಿಕೆ ಹಾನಿಕಾರವಲ್ಲ- ಅಡಿಕೆ ಬೆಳೆಗಾರರ ಸವಾಲುಗಳನ್ನು ಎದುರಿಸಲು ಸಂಘಟಿತರಾಗಬೇಕಿದೆ
June 29, 2025
11:40 AM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 29-06-2025 | ರೈತರಿಗೆ ಈ ವಾರ ಬೆಳೆ ರಕ್ಷಣೆಯ ಸಮಯ – ಮಳೆ ಕಡಿಮೆ ಇರಬಹುದು |
June 29, 2025
10:56 AM
by: ಸಾಯಿಶೇಖರ್ ಕರಿಕಳ
ಕೇರಳ ಮತ್ತು ಅಸ್ಸಾಂನಲ್ಲಿ ಭಾರಿ ಮಳೆ, ದೆಹಲಿ ಮಾನ್ಸೂನ್ ವಿಳಂಬ
June 29, 2025
7:05 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group