Advertisement
MIRROR FOCUS

ರೈತರಿಗೆ PMFBY ಯೋಜನೆಯಡಿ ಬೆಳೆ ವಿಮೆ ಪರಿಹಾರ | ಕೇಂದ್ರ ಕೃಷಿ ಸಚಿವರಿಗೆ ಸಂಸದ ಬಸವರಾಜ ಬೊಮ್ಮಾಯಿ ಪತ್ರ

Share

ಹಾವೇರಿ ಜಿಲ್ಲೆಯ ರೈತರ ಬೆಳೆ ವಿಮೆಯನ್ನು PMFBY ಅಡಿಯಲ್ಲಿ ಶೀಘ್ರವಾಗಿ ಇತ್ಯರ್ಥ ಪಡಿಸುವಂತೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವರಾದ ಶಿವರಾಜ್ ಸಿಂಗ್ ಚೌಹ್ವಾಣ್ ಅವರಿಗೆ ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಸಂಸದ ಬಸವರಾಜ ಬೊಮ್ಮಾಯಿಯವರು ಪತ್ರ ಬರೆದು ದೂರವಾಣಿ ಮೂಲಕ ಮಾತನಾಡಿದ್ದಾರೆ‌.

ನೀವು ಕೃಷಿ ಹಾಗೂ ರೈತರ ಕಲ್ಯಾಣ ಸಚಿವರಾಗಿ ನೇಮಕವಾಗಿರುವುದಕ್ಕೆ ತುಂಬು ಹೃದಯದ ಅಭಿನಂದನೆಗಳು ನಿಮಗೆ ಗ್ರಾಮೀಣಾಭಿವೃದ್ಧಿ ಮತ್ತು ಕೃಷಿ ಕ್ಷೇತ್ರದಲ್ಲಿ ಇರುವ ಅಪಾರ ಜ್ಞಾನದ ಹಿನ್ನೆಲೆಯಲ್ಲಿ ಕೃಷಿ ಕ್ಷೇತ್ರದಲ್ಲಿ ಸಾಕಷ್ಟು ಸುಧಾರಣೆ ಆಗುವುದರಲ್ಲಿ ಯಾವುದೇ ಸಂಶಯ ಇಲ್ಲ ಎಂದು ಉಲ್ಲೇಖಿಸಿದ್ದಾರೆ.

ಕರ್ನಾಟಕದ ನನ್ನ ಲೋಕಸಭಾ ಕ್ಷೇತ್ರ ಹಾವೇರಿ ಜಿಲ್ಲೆಯ ರೈತರು 2023-24ನೇ ಸಾಲಿನ ಖಾರಿಫ್ ಹಂಗಾಮಿನಲ್ಲಿ ಅಸಮರ್ಪಕ ಮಳೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಒಂದು ವರ್ಷ ಕಳೆದರೂ ಅವರಿಗೆ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿಯಲ್ಲಿ ವಿಮಾ ಪರಿಹಾರ ದೊರೆಕಿಲ್ಲ. ಹಾವೇರಿ ಜಿಲ್ಲೆಯಲ್ಲಿ ಬೆಳೆ ವಿಮೆ ಪರಿಹಾರವನ್ನು ವಿತರಿಸಲು ರಿಲಾಯನ್ಸ್ ಜನರಲ್ ಇನ್ಸೂರೆನ್ಸ್ ಕಂಪನಿ ಲಿಮಿಟೆಡ್, (RGICL) ಜವಾಬ್ದಾರಿಯನ್ನು ಹೊಂದಿದ್ದು, ಸದರಿ ಕಂಪನಿಯು ಕೆಲವೊಂದು ಆಕ್ಷೇಪಣೆಗಳನ್ನು ವ್ಯಕ್ತಪಡಿಸಿದ್ದು ಅವರ ಆಕ್ಷೇಪಣೆಗಳಿಗೆ ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಸಮಿತಿಯು ಸಮರ್ಪಕ ಉತ್ತರವನ್ನು ಸಲ್ಲಿಸಿದೆ. ರಿಲಾಯನ್ಸ್ ಜನರಲ್ ಇನ್ಸುರೆನ್ಸ್ ಕಂಪನಿ ಎತ್ತಿರುವ ಆಕ್ಷೇಪಗಳು ನ್ಯಾಯಸಮ್ಮತವಾಗಿಲ್ಲ, ಅಲ್ಲದೇ ವಿಮೆ ಪರಿಹಾರ ನೀಡಲು ಅನಗತ್ಯ ವಿಳಂಬ ತಂತ್ರ ಅನುಸರಿಸುತ್ತಿರುವಂತೆ ಕಾಣಿಸುತ್ತಿದೆ ಎಂದು ಪತ್ರದ ಮೂಲಕ ತಿಳಿಸಿದ್ದಾರೆ‌.

ರಿಲಾಯನ್ಸ್ ಜನರಲ್ ಇನ್ಸೂರೆನ್ಸ್ ಕಂಪನಿಗೆ ಒಟ್ಟು 2023-24ನೇ ಸಾಲಿನ ಬೆಳೆ ವಿಮೆ ಮೊತ್ತವನ್ನು ರೂ.260.94 ಕೋಟಿಗಳನ್ನು ಪಾವತಿಸಲಾಗಿದ್ದು ಅದರಲ್ಲಿ ವಿಮೆ ಕ್ರೈಮ್ ಮೊತ್ತವು ರೂ.132.65 ಕೋಟಿಗಳಾಗಿದ್ದು ಉಳಿದ ರೂ.66.05 ಕೋಟಿಗಳ ಮೊತ್ತವನ್ನು ರಾಜ್ಯ ಮಟ್ಟದ ತಾಂತ್ರಿಕ ಸಲಹಾ ಸಮಿತಿಯು ದಿನಾಂಕ: 24.04.2024ರ ನಡವಳಿಯಲ್ಲಿ ಶಿಫಾರಸ್ಸು ಮಾಡಿರುತ್ತದೆ. ಹಾವೇರಿ ಜಿಲ್ಲೆಯ ರೈತರು ಈಗಾಗಲೇ ಬರ ಹಾಗೂ ಪ್ರವಾಹದಿಂದ ತತ್ತರಿಸಿದ್ದು, ಇದರಿಂದ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಆದ್ದರಿಂದ ಈ ವಿಷಯದಲ್ಲಿ ತಾವು ಇದೇ ಆಗಸ್ಟ್ 22 ಎಂದು ನಡೆಯುವ ತಾಂತ್ರಿಕ ಸಲಹಾ ಸಮಿತಿ ಸಭೆಯಲ್ಲಿ ವಯಕ್ತಿಯ ಆಸಕ್ತಿ ವಹಿಸಿ ರೈತರಿಗೆ ಬೆಳೆ ವಿಮೆ ಪರಿಹಾರ ಕೊಡೆಸಿ ರೈತರ ಕೃಷಿ ಚಟುವಟಿಕೆಗಳು ಸುಗಮವಾಗಿ ನಡೆಯಲು ಕ್ರಮ ವಹಿಸಬೇಕು ಎಂದು ಮನವಿ ಮಾಡಿದ್ದಾರೆ.

ಇದಲ್ಲದೇ ರಾಜ್ಯ ಸರ್ಕಾರದ ಕೃಷಿ ಸಚಿವರಾದ ಚಲುವರಾಯಸ್ವಾಮಿ ಅವರಿಗೂ ಪತ್ರ ಬರೆದಿದ್ದು, ರೈತರಿಗೆ ಬೆಳೆ ಪರಿಹಾರ ಕೊಡಿಸುವುದು ರಾಜ್ಯ ಸರ್ಕಾರದ ಆದ್ಯ ಕರ್ತವ್ಯವಾಗಿದ್ದು, ರಾಜ್ಯ ಸರ್ಕಾರ ರೈತರಿಗೆ ಬೆಳೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ನಿಮ್ಮ ಅಭಿಪ್ರಾಯಗಳನ್ನು ಇಲ್ಲಿ ದಾಖಲಿಸಿ…

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಹಾರಾಷ್ಟ್ರದಲ್ಲಿ ತಡೆಹಿಡಿದ ಅಡಿಕೆ ಲಾರಿಗಳ ಬಿಡುಗಡೆಗೆ ಫಡ್ನವೀಸ್‌ಗೆ ಮನವಿ

ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್‌ಗೆ ಅಡಿಕೆ…

38 minutes ago

ರಾಜ್ಯದ ವಿವಿದೆಡೆ ಭಾರೀ ಮಳೆ – ಜುಲೈ 8 ರಂದು ಹಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 8ರಂದು ರಾಜ್ಯದ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ…

57 minutes ago

ಮುಂಗಾರು ಬೆಳೆ ಸಮೀಕ್ಷೆ ಆರಂಭ | ರೈತರೇ ಮೊಬೈಲ್‌ ಮೂಲಕ ಬೆಳೆ ವಿವರ ದಾಖಲಿಸಿ – ಕೃಷಿ ಇಲಾಖೆ ಮನವಿ

2026-27ರ ಮುಂಗಾರು ಬೆಳೆ ಸಮೀಕ್ಷೆಗೆ ಚಾಲನೆ; ರೈತರು ಮೊಬೈಲ್‌ ಆ್ಯಪ್‌ ಮೂಲಕವೇ ಬೆಳೆ…

2 hours ago

ಮಾಣಿ–ಸಂಪಾಜೆ ರಸ್ತೆ ದುರಸ್ತಿಗೆ ₹49.22 ಕೋಟಿ ಮಂಜೂರು | ಚತುಷ್ಪಥ ಯೋಜನೆಗೆ ವೇಗ

ಮಾಣಿ–ಸಂಪಾಜೆ ರಾಷ್ಟ್ರೀಯ ಹೆದ್ದಾರಿ ದುರಸ್ತಿಗೆ ಕೇಂದ್ರದಿಂದ ₹49.22 ಕೋಟಿ ವಿಶೇಷ ಅನುದಾನ ಮಂಜೂರು.…

2 hours ago

ಭೂಕುಸಿತದ ಬಗ್ಗೆ ಎಚ್ಚರಿಕೆ – ಜುಲೈ 7 ರಿಂದ 11 ರವರೆಗೆ ಪಶ್ಚಿಮಘಟ್ಟದಲ್ಲಿ ಭಾರೀ ಮಳೆ ಸಾಧ್ಯತೆ

ಜುಲೈ 7ರಿಂದ 11ರವರೆಗೆ ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇದೆ. ಭೂಕುಸಿತದ…

2 hours ago

ವಯನಾಡಿನಲ್ಲಿ ಭೂಕುಸಿತದ ದುರಂತ | ಒಂದು ಬಲಿ , 7 ಮಂದಿ ನಾಪತ್ತೆ | ಇದು ಮಾನವ ನಿರ್ಮಿತ ದುರಂತ ಎಂದ ಸಚಿವ

ವಯನಾಡಿನ ಕಲ್ಲಾಡಿ ಸುರಂಗ ಕಾಮಗಾರಿ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿ ಓರ್ವ ಮೃತಪಟ್ಟಿದ್ದು, ಏಳು…

6 hours ago