Advertisement
ಸುದ್ದಿಗಳು

ಅಡಿಕೆ ಆಮದು ಮೇಲೆ ನಿಗಾ ವಹಿಸಲು ಸಚಿವರಿಗೆ ಮನವಿ ಮಾಡಿದ ಸಂಸದ ಕ್ಯಾ. ಬ್ರಿಜೇಶ್ ಚೌಟ

Share

ದಕ್ಷಿಣ ಕನ್ನಡದ ಅಡಿಕೆ ಕೃಷಿಕರು ಎದುರಿಸುತ್ತಿರುವ ಗಂಭೀರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆಗಳ ಸಚಿವ ಪೀಯೂಷ್ ಗೋಯಲ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ……… ಮುಂದೆ ಓದಿ…….

ಬಜೆಟ್ ಅಧಿವೇಶದ ಹಿನ್ನಲೆ ನವದೆಹಲಿಯಲ್ಲಿರುವ ಕ್ಯಾ. ಚೌಟ ಅವರು ಸಚಿವ ಪೀಯೂಷ್ ಅವರನ್ನು ಭೇಟಿಯಾಗಿದ್ದು, ಹೊರ ದೇಶಗಳಿಂದ ತಪಾಸಣೆಗೆ ಒಳಗಾಗದೆ ಅಡಿಕೆ ಆಮದು ಆಗುತ್ತಿರುವ ಹಿನ್ನಲೆ ನಮ್ಮ ಸ್ಥಳೀಯ ಅಡಿಕೆ ಬೆಳೆಗಾರರು ನ್ಯಾಯಸಮ್ಮತವಲ್ಲದ ದರ ಸಮರ ಎದುರಿಸುತ್ತಿದ್ದಾರೆ. ಇದರಿಂದ ಜಿಲ್ಲೆಯ ಅಡಿಕೆ ಕೃಷಿಕರು ಸೂಕ್ತ ಬೆಲೆ ದೊರೆಯದೆ ತೊಂದರೆ ಅನುಭವಿಸುತ್ತಿದ್ದಾರೆ. ಹೀಗಾಗಿ, ನಿಯಂತ್ರಣವಿಲ್ಲದೆ ಆಮದಾಗುತ್ತಿರುವ ಅಡಿಕೆ ಉತ್ಪನ್ನಗಳ ಮೇಲೆ ನಿಗಾ ವಹಿಸುವ ಮೂಲಕ ಇಲ್ಲಿನ ಅಡಿಕೆಗೆ ಸೂಕ್ತ ಮಾರುಕಟ್ಟೆ ದರ ದೊರೆಯುವುದಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಸಚಿವರಲ್ಲಿ ಮನವಿ ಮಾಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆ ಬೆಳೆಗೆ ಇತ್ತೀಚಿನ ವರ್ಷಗಳಲ್ಲಿ ಕೊಳೆರೋಗ ಹಾಗೂ ಎಲೆಚುಕ್ಕಿ ಸಮಸ್ಯೆ ಹೆಚ್ಚಾಗಿರುವುದರಿಂದ ಬೆಳೆಗಾರರು ಸಂಕಷ್ಟದಲ್ಲಿದ್ದಾರೆ. ಈ ಕಾರಣಕ್ಕೆ ಜಿಲ್ಲೆಯಲ್ಲಿ ಅಡಿಕೆಗೆ ಕಾಫಿಯನ್ನು ಪರ್ಯಾಯ ಬೆಳೆಯಾಗಿ ಬೆಳೆಸುವಲ್ಲಿ ರೈತರನ್ನು ಉತ್ತೇಜಿಸುವುದಕ್ಕೆ ಸೂಕ್ತ ಕ್ರಮ ಕೈಗೊಳ್ಳುವಂತೆ ಕ್ಯಾ. ಚೌಟ ಅವರು ಸಚಿವರನ್ನು ಕೋರಿದ್ದಾರೆ.

 ಕಾಫಿ ಬೆಳೆಯನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉತ್ತೇಜಿಸುವುದಕ್ಕೆ ಕಾಫಿ ಮಂಡಳಿ ನಡೆಸಿದ್ದ ಸಮೀಕ್ಷೆ ವಿವರಗಳ ಬಗ್ಗೆ ಸಂಸತ್ತಿನಲ್ಲಿ ಪ್ರಶ್ನೆ ಕೇಳಿದ್ದನ್ನು ಇದೇವೇಳೆ ಸಚಿವರ ಗಮನಕ್ಕೆ ತಂದರು. ಹೀಗಿರುವಾಗ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಫಿ ಬೆಳೆ- ಬೆಳೆಗಾರರನ್ನು ಪ್ರೋತ್ಸಾಹಿಸುವುದಕ್ಕೆ ಹಾಗೂ ಈ ಲಾಭದಾಯಕ ಬೆಳೆ ಬಗ್ಗೆ ಹೆಚ್ಚಿನ ಅರಿವು ಮೂಡಿಸುವುದಕ್ಕೆ ಮಂಗಳೂರಿನಲ್ಲಿ ತನ್ನ ಕಚೇರಿಯನ್ನು ಪ್ರಾರಂಭಿಸಲು ಕಾಫಿ ಮಂಡಳಿಗೆ ನಿರ್ದೇಶನ ನೀಡುವಂತೆಯೂ ಸಚಿವ ಪೀಯೂಷ್ ಗೋಯಲ್ ಅವರಿಗೆ ಕ್ಯಾ. ಚೌಟ ಮನವಿ ಮಾಡಿದ್ದಾರೆ.

ಎಲ್ಲಾ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ದ.ಕ. ಅಡಿಕೆ ಬೆಳೆಗಾರರ ಸಂಕಷ್ಟಕ್ಕೆ  ಸಚಿವರಿಂದ ಸೂಕ್ತ ಪರಿಹಾರ ದೊರೆಯಬಹುದು ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನವೆಂಬರ್ ಮೊದಲ ವಾರ ಸಚಿವರಿಗೆ ಸುದೀರ್ಘ ಪತ್ರ ಬರೆದು ದ.ಕ. ಜಿಲ್ಲೆಯ ಅಡಿಕೆ ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸುವಂತೆ ಮನವಿ ನೀಡಿದ್ದರು. ಜಿಲ್ಲೆಯಲ್ಲಿ ಕೊಳೆರೋಗ ಹಾಗೂ ಎಲೆಚುಕ್ಕಿ ರೋಗ ಇರುವ ಕಾರಣ ಅಡಿಕೆಗೆ ಕಾಫಿಯನ್ನು ಪರ್ಯಾಯ ಬೆಳೆಯಾಗಿ ಪ್ರೋತ್ಸಾಹಿಸುವುದಕ್ಕೆ ಕ್ರಮ ಕೈಗೊಳ್ಳಬೇಕೆಂದು ಮನವಿಯಲ್ಲಿ ಪ್ರಸ್ತಾಪಿಸಿದ್ದರು.

MP Brijesh Chauta urged the minister to oversee the importation of Arecanut.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಾಜ್ಯದಲ್ಲಿ ಭಾರೀ ಮಳೆ ಆರ್ಭಟ – ಕೆಲವು ಜಿಲ್ಲೆಗಳಲ್ಲಿ ಇಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ರಾಜ್ಯದ ಹಲವೆಡೆ ಭಾರೀ ಮಳೆಯ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.…

4 hours ago

ಆಹಾರ-ನಿದ್ರೆ ಪರಸ್ಪರ ಪೂರಕ; ಉತ್ತಮ ನಿದ್ರೆಗೆ ಹಸಿವು ಅಗತ್ಯ: ರಾಘವೇಶ್ವರ ಶ್ರೀ

ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…

13 hours ago

ಕೃಷಿಕರ ಮಿತ್ರ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ ಪ್ರಶಸ್ತಿ

ಮಳೆ ಮಾಹಿತಿ ಮೂಲಕ ಕೃಷಿಕರಿಗೆ ನೆರವಾಗುತ್ತಿರುವ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ…

13 hours ago

ಮಂಗಳೂರಿನಲ್ಲಿ ರಾಷ್ಟ್ರೀಯ ಚೆಸ್ ಚಾಂಪಿಯನ್ ಶಿಪ್‌ಗೆ ಚಾಲನೆ – 28 ರಾಜ್ಯ–ಕೇಂದ್ರಾಡಳಿತ ಪ್ರದೇಶಗಳಿಂದ 644 ಬಾಲಕಿ-ಬಾಲಕಿಯರು

ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್‌-11 ಚೆಸ್ ಚಾಂಪಿಯನ್ಶಿಪ್‌ಗೆ ಭವ್ಯ ಚಾಲನೆ ದೊರೆತಿದ್ದು, ದೇಶದ 28…

14 hours ago

ಹವಾಮಾನ ವರದಿ | 02-08-2026 | ಕರಾವಳಿಯಲ್ಲಿ ಮಳೆ ಇಳಿಮುಖ ..? ರಾಜ್ಯದಲ್ಲಿ ಮುಂಗಾರು ಸ್ಥಿತಿ ಏನು..?

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ತೀವ್ರತೆ ಇಳಿಮುಖವಾಗಲಿದ್ದು, ಆಗಸ್ಟ್‌ 3ರಿಂದ ತೋಟದ…

16 hours ago

ಭಾರೀ ಮಳೆಯ ಎಚ್ಚರಿಕೆ : 24 ಗಂಟೆ ಸನ್ನದ್ಧವಾಗಿರಲು ಡಿಸಿ ಸೂಚನೆ, ಭೂಕುಸಿತ ಪ್ರದೇಶಗಳ ಮೇಲೆ ಕಟ್ಟೆಚ್ಚರ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…

1 day ago