Advertisement
MIRROR FOCUS

ಅಡಿಕೆಗೆ ಎಲೆಚುಕ್ಕಿ-ಹಳದಿ ಎಲೆರೋಗ | ಸಂಕಷ್ಟದಲ್ಲಿರುವ ಅಡಿಕೆ ಕೃಷಿಕರ ನೆರವಿಗೆ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಮನವಿ |

Share

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಮುಖ ವಾಣಿಜ್ಯ ಬೆಳೆಯಾಗಿರುವ ಅಡಿಕೆಗೆ ಎಲೆಚುಕ್ಕಿ ಹಾಗೂ ಹಳದಿ ಎಲೆರೋಗ ಬಾಧಿಸಿದೆ.  ಈ ಬಗ್ಗೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಕೇಂದ್ರ ಕೃಷಿ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರನ್ನು ಭೇಟಿಯಾಗಿ ತಕ್ಷಣವೇ ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

ಅಧಿವೇಶದ ಹಿನ್ನಲೆ ನವದೆಹಲಿಯಲ್ಲಿರುವ ಕ್ಯಾ. ಬ್ರಿಜೇಶ್ ಚೌಟ ಅವರು, ದಕ್ಷಿಣ ಕನ್ನಡದಲ್ಲಿ ಅಡಿಗೆ ಬೆಳೆಗಾರರನ್ನು ತೀವ್ರವಾಗಿ ಬಾಧಿಸಿರುವ ಅಡಿಕೆ ಎಲೆಚುಕ್ಕಿ ಹಾಗೂ ಹಳದಿ ಎಲೆರೋಗದ ಗಂಭೀರತೆಯನ್ನು ಕೃಷಿ ಸಚಿವರಿಗೆ ಮನವರಿಕೆ ಮಾಡಿದ್ದಾರೆ. ಸಂಸದರು ಇತ್ತೀಚೆಗಷ್ಟೇ ಎಲೆಚುಕ್ಕಿ ಹಾಗೂ ಹಳದಿ ಎಲೆರೋಗದಿಂದ ಸಂಕಷ್ಟದಲ್ಲಿರುವ ಅಡಿಕೆ ಕೃಷಿಕರ ನೆರವಿಗೆ ಧಾವಿಸುವಂತೆ ಕೋರಿ ಕೃಷಿ ಸಚಿವರು ಹಾಗೂ ವಾಣಿಜ್ಯ ಸಚಿವರಿಗೆ ಪತ್ರ ಬರೆದಿದ್ದರು. ಇದೀಗ ಕ್ಯಾ. ಚೌಟ ಅವರು ಖುದ್ದು ಕೃಷಿ ಸಚಿವರನ್ನು ಭೇಟಿ ಮಾಡಿ ದಕ್ಷಿಣ ಕನ್ನಡದಲ್ಲಿರುವ ಅಡಿಕೆ ಕೃಷಿಕರನ್ನು ಎಲೆಚುಕ್ಕಿ ಹಾಗೂ ಹಳದಿ ಎಳೆ ರೋಗದಿಂದ ಪಾರು ಮಾಡುವುದಕ್ಕೆ ಶಾಶ್ವತ ಕ್ರಮ ತೆಗೆದುಕೊಳ್ಳುವಂತೆ ಕೋರಿದ್ದಾರೆ.

ಅತಿವೃಷ್ಟಿ, ಪ್ರತಿಕೂಲ ಹವಾಗುಣ ಮುಂತಾದ ಕಾರಣಗಳಿಂದಾಗಿ ಅಡಿಕೆ ಬೆಳೆಗೆ ನಿರಂತರವಾಗಿ ರೋಗಬಾಧೆ ಕಾಣಿಸಿಕೊಂಡು ಇಳುವರಿ ಗಣನೀಯವಾಗಿ ಕಡಿಮೆಯಾಗುತ್ತಿದೆ. ಇದರಿಂದ ಅಡಿಕೆ ಕೃಷಿಕರ ಆದಾಯ ಕುಸಿದು ಆರ್ಥಿಕವಾದ ಸವಾಲುಗಳು ಎದುರಾಗುತ್ತಿರುವ ಬಗ್ಗೆ ಐಸಿಎಆರ್‌ ವರದಿ ಈಗಾಗಲೇ ಎಚ್ಚರಿಸಿದೆ.

ಕ್ಯಾಂಪ್ಕೊ ಮಾಹಿತಿ ಪ್ರಕಾರ, ದ.ಕ.ದಲ್ಲಿ ಸುಮಾರು 24 ಹೆಕ್ಟೇರ್‌ ಅಡಿಕೆ ಬೆಳೆ ಹಾನಿಗೀಡಾಗಿದೆ. ಅಲ್ಲದೆ, ಇತ್ತೀಚೆಗೆ ಅಂತಾರಾಷ್ಟ್ರೀಯ ಕ್ಯಾನ್ಸರ್‌ ಸಂಶೋಧನೆಗೆ ಸಂಬಂಧಿಸಿದ ಐಎಆರ್‌ಸಿ ಸಂಸ್ಥೆ ಕೂಡ ಅಡಿಕೆಯನ್ನು ಕ್ಯಾನ್ಸರ್‌ಕಾರಕ ಎಂದಿರುವುದು ಎಂದು ಗುರುತಿಸಿರುವುದು ಕೂಡ ಬೆಳೆಗಾರರ ದೃಷ್ಟಿಯಿಂದ ಆತಂಕಕಾರಿ ಬೆಳವಣಿಗೆಯಾಗಿದೆ. ಹೀಗಾಗಿ, ಸಂಕಷ್ಟದಲ್ಲಿರುವ ಜಿಲ್ಲೆಯ ಅಡಿಕೆ ಬೆಳೆಗಾರರ ರಕ್ಷಣೆಗೆ ಕೇಂದ್ರ ಸರ್ಕಾರ ಕೂಡಲೇ ಸ್ಪಂದಿಸುವಂತೆ ಕ್ಯಾ. ಚೌಟ ಮನವಿ ಮಾಡಿದ್ದಾರೆ.

ಕಾಫಿಯನ್ನು ಪರ್ಯಾಯ ಬೆಳೆಯಾಗಿ ಪ್ರೋತ್ಸಾಹಿಸಿ : ದಕ್ಷಿಣ ಕನ್ನಡದ ಹವಾಗುಣವು ಕಾಫಿ ಬೆಳೆಗೆ ಪೂರಕವಾಗಿದ್ದು, ಇಲ್ಲಿ ಕಾಫಿ ಕೃಷಿಗೆ ವಿಪುಲ ಅವಕಾಶಗಳಿವೆ. ಇತ್ತೀಚೆಗೆ ಜಿಲ್ಲೆಗೆ ಭೇಟಿ ನೀಡಿದ್ದ ಕೇಂದ್ರ ಕಾಫಿ ಸಂಶೋಧನಾ ಸಂಸ್ಥೆ ಕೂಡ ಇದನ್ನು ಮಲೆನಾಡಿನಂತೆ ದ.ಕ.ದಲ್ಲಿಯ ಕಾಫಿ ಬೆಳೆಯನ್ನು ವಾಣಿಜ್ಯವಾಗಿ ಬೆಳೆಯುವುದಕ್ಕೆ ಇರುವ ಸಾಮರ್ಥ್ಯದ ಬಗ್ಗೆ ಹೇಳಿದೆ. ಆದರೆ, ಚಿಕ್ಕಮಗಳೂರು, ಕೊಡಗು ಭಾಗದಲ್ಲಿ ಕಾಫಿ ಬೆಳೆಗೆ ಸಿಗುವ ಪ್ರೋತ್ಸಾಹ, ತಾಂತ್ರಿಕ ನೆರವು ಅಥವಾ ಕಾಫಿ ಬೆಂಬಲಿತ ಸಂಸ್ಥೆಗಳಿಂದ ಸಿಗುತ್ತಿಲ್ಲ. ಹೀಗಾಗಿ, ಕಾಫಿ ಬೋರ್ಡ್‌ ಮೂಲಕ ದಕ್ಷಿಣ ಕನ್ನಡ ಭಾಗದಲ್ಲಿಯೂ ಕಾಫಿ ಬೆಳೆಗಾರರನ್ನು ಉತ್ತೇಜಿಸುವುದಕ್ಕೆ ಸೂಕ್ತ ತಾಂತ್ರಿಕ ಮಾರ್ಗದರ್ಶನ, ಸಬ್ಸಿಡಿ, ಗುಣಮಟ್ಟದ ಸಸಿ ಒದಗಿಸುವುದಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಕೃಷಿ ಸಚಿವರನ್ನು ಒತ್ತಾಯಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?

ನಾಗಾಲ್ಯಾಂಡ್‌ನಲ್ಲಿ ರಬ್ಬರ್‌ ಕೃಷಿ ಸುಮಾರು 29,794 ಹೆಕ್ಟೇರ್‌ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ಸೂಕ್ತ…

2 hours ago

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

5 hours ago

ಹವಾಮಾನ ವರದಿ | 05-09-2026 | ಕರಾವಳಿಯಲ್ಲಿ ತೇವಾಂಶ ಇಳಿಕೆ, ಬಳಿಕ ಒಣಹವೆ?

ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…

11 hours ago

ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?

ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…

17 hours ago

ಗೂಗಲ್‌ ಮತ್ತು AIಯ ಕಾಲದಲ್ಲೂ ಗುರು ಏಕೆ ಬೇಕು..?

ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…

17 hours ago

ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?

ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…

1 day ago