Advertisement
MIRROR FOCUS

ಅಡಿಕೆಗೆ ಎಲೆಚುಕ್ಕಿ-ಹಳದಿ ಎಲೆರೋಗ | ಸಂಕಷ್ಟದಲ್ಲಿರುವ ಅಡಿಕೆ ಕೃಷಿಕರ ನೆರವಿಗೆ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಮನವಿ |

Share

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಮುಖ ವಾಣಿಜ್ಯ ಬೆಳೆಯಾಗಿರುವ ಅಡಿಕೆಗೆ ಎಲೆಚುಕ್ಕಿ ಹಾಗೂ ಹಳದಿ ಎಲೆರೋಗ ಬಾಧಿಸಿದೆ.  ಈ ಬಗ್ಗೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಕೇಂದ್ರ ಕೃಷಿ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರನ್ನು ಭೇಟಿಯಾಗಿ ತಕ್ಷಣವೇ ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

ಅಧಿವೇಶದ ಹಿನ್ನಲೆ ನವದೆಹಲಿಯಲ್ಲಿರುವ ಕ್ಯಾ. ಬ್ರಿಜೇಶ್ ಚೌಟ ಅವರು, ದಕ್ಷಿಣ ಕನ್ನಡದಲ್ಲಿ ಅಡಿಗೆ ಬೆಳೆಗಾರರನ್ನು ತೀವ್ರವಾಗಿ ಬಾಧಿಸಿರುವ ಅಡಿಕೆ ಎಲೆಚುಕ್ಕಿ ಹಾಗೂ ಹಳದಿ ಎಲೆರೋಗದ ಗಂಭೀರತೆಯನ್ನು ಕೃಷಿ ಸಚಿವರಿಗೆ ಮನವರಿಕೆ ಮಾಡಿದ್ದಾರೆ. ಸಂಸದರು ಇತ್ತೀಚೆಗಷ್ಟೇ ಎಲೆಚುಕ್ಕಿ ಹಾಗೂ ಹಳದಿ ಎಲೆರೋಗದಿಂದ ಸಂಕಷ್ಟದಲ್ಲಿರುವ ಅಡಿಕೆ ಕೃಷಿಕರ ನೆರವಿಗೆ ಧಾವಿಸುವಂತೆ ಕೋರಿ ಕೃಷಿ ಸಚಿವರು ಹಾಗೂ ವಾಣಿಜ್ಯ ಸಚಿವರಿಗೆ ಪತ್ರ ಬರೆದಿದ್ದರು. ಇದೀಗ ಕ್ಯಾ. ಚೌಟ ಅವರು ಖುದ್ದು ಕೃಷಿ ಸಚಿವರನ್ನು ಭೇಟಿ ಮಾಡಿ ದಕ್ಷಿಣ ಕನ್ನಡದಲ್ಲಿರುವ ಅಡಿಕೆ ಕೃಷಿಕರನ್ನು ಎಲೆಚುಕ್ಕಿ ಹಾಗೂ ಹಳದಿ ಎಳೆ ರೋಗದಿಂದ ಪಾರು ಮಾಡುವುದಕ್ಕೆ ಶಾಶ್ವತ ಕ್ರಮ ತೆಗೆದುಕೊಳ್ಳುವಂತೆ ಕೋರಿದ್ದಾರೆ.

ಅತಿವೃಷ್ಟಿ, ಪ್ರತಿಕೂಲ ಹವಾಗುಣ ಮುಂತಾದ ಕಾರಣಗಳಿಂದಾಗಿ ಅಡಿಕೆ ಬೆಳೆಗೆ ನಿರಂತರವಾಗಿ ರೋಗಬಾಧೆ ಕಾಣಿಸಿಕೊಂಡು ಇಳುವರಿ ಗಣನೀಯವಾಗಿ ಕಡಿಮೆಯಾಗುತ್ತಿದೆ. ಇದರಿಂದ ಅಡಿಕೆ ಕೃಷಿಕರ ಆದಾಯ ಕುಸಿದು ಆರ್ಥಿಕವಾದ ಸವಾಲುಗಳು ಎದುರಾಗುತ್ತಿರುವ ಬಗ್ಗೆ ಐಸಿಎಆರ್‌ ವರದಿ ಈಗಾಗಲೇ ಎಚ್ಚರಿಸಿದೆ.

ಕ್ಯಾಂಪ್ಕೊ ಮಾಹಿತಿ ಪ್ರಕಾರ, ದ.ಕ.ದಲ್ಲಿ ಸುಮಾರು 24 ಹೆಕ್ಟೇರ್‌ ಅಡಿಕೆ ಬೆಳೆ ಹಾನಿಗೀಡಾಗಿದೆ. ಅಲ್ಲದೆ, ಇತ್ತೀಚೆಗೆ ಅಂತಾರಾಷ್ಟ್ರೀಯ ಕ್ಯಾನ್ಸರ್‌ ಸಂಶೋಧನೆಗೆ ಸಂಬಂಧಿಸಿದ ಐಎಆರ್‌ಸಿ ಸಂಸ್ಥೆ ಕೂಡ ಅಡಿಕೆಯನ್ನು ಕ್ಯಾನ್ಸರ್‌ಕಾರಕ ಎಂದಿರುವುದು ಎಂದು ಗುರುತಿಸಿರುವುದು ಕೂಡ ಬೆಳೆಗಾರರ ದೃಷ್ಟಿಯಿಂದ ಆತಂಕಕಾರಿ ಬೆಳವಣಿಗೆಯಾಗಿದೆ. ಹೀಗಾಗಿ, ಸಂಕಷ್ಟದಲ್ಲಿರುವ ಜಿಲ್ಲೆಯ ಅಡಿಕೆ ಬೆಳೆಗಾರರ ರಕ್ಷಣೆಗೆ ಕೇಂದ್ರ ಸರ್ಕಾರ ಕೂಡಲೇ ಸ್ಪಂದಿಸುವಂತೆ ಕ್ಯಾ. ಚೌಟ ಮನವಿ ಮಾಡಿದ್ದಾರೆ.

ಕಾಫಿಯನ್ನು ಪರ್ಯಾಯ ಬೆಳೆಯಾಗಿ ಪ್ರೋತ್ಸಾಹಿಸಿ : ದಕ್ಷಿಣ ಕನ್ನಡದ ಹವಾಗುಣವು ಕಾಫಿ ಬೆಳೆಗೆ ಪೂರಕವಾಗಿದ್ದು, ಇಲ್ಲಿ ಕಾಫಿ ಕೃಷಿಗೆ ವಿಪುಲ ಅವಕಾಶಗಳಿವೆ. ಇತ್ತೀಚೆಗೆ ಜಿಲ್ಲೆಗೆ ಭೇಟಿ ನೀಡಿದ್ದ ಕೇಂದ್ರ ಕಾಫಿ ಸಂಶೋಧನಾ ಸಂಸ್ಥೆ ಕೂಡ ಇದನ್ನು ಮಲೆನಾಡಿನಂತೆ ದ.ಕ.ದಲ್ಲಿಯ ಕಾಫಿ ಬೆಳೆಯನ್ನು ವಾಣಿಜ್ಯವಾಗಿ ಬೆಳೆಯುವುದಕ್ಕೆ ಇರುವ ಸಾಮರ್ಥ್ಯದ ಬಗ್ಗೆ ಹೇಳಿದೆ. ಆದರೆ, ಚಿಕ್ಕಮಗಳೂರು, ಕೊಡಗು ಭಾಗದಲ್ಲಿ ಕಾಫಿ ಬೆಳೆಗೆ ಸಿಗುವ ಪ್ರೋತ್ಸಾಹ, ತಾಂತ್ರಿಕ ನೆರವು ಅಥವಾ ಕಾಫಿ ಬೆಂಬಲಿತ ಸಂಸ್ಥೆಗಳಿಂದ ಸಿಗುತ್ತಿಲ್ಲ. ಹೀಗಾಗಿ, ಕಾಫಿ ಬೋರ್ಡ್‌ ಮೂಲಕ ದಕ್ಷಿಣ ಕನ್ನಡ ಭಾಗದಲ್ಲಿಯೂ ಕಾಫಿ ಬೆಳೆಗಾರರನ್ನು ಉತ್ತೇಜಿಸುವುದಕ್ಕೆ ಸೂಕ್ತ ತಾಂತ್ರಿಕ ಮಾರ್ಗದರ್ಶನ, ಸಬ್ಸಿಡಿ, ಗುಣಮಟ್ಟದ ಸಸಿ ಒದಗಿಸುವುದಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಕೃಷಿ ಸಚಿವರನ್ನು ಒತ್ತಾಯಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

9 hours ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

12 hours ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

13 hours ago

ಗ್ರಾಮೀಣ ಜಾಲಕ್ಕೆ ನೆಟ್ವರ್ಕ್ ಬೂಸ್ಟ್‌ – ಬಿಎಸ್ಎನ್ಎಲ್ ಸುಧಾರಣೆಗೆ ಕೇಂದ್ರದ ಆದ್ಯತೆ

ಗ್ರಾಮೀಣ ಪ್ರದೇಶಗಳಿಗೆ ಉತ್ತಮ ಸಂಪರ್ಕ ಒದಗಿಸಲು ಕೇಂದ್ರ ಸರ್ಕಾರ ಆದ್ಯತೆ ನೀಡುತ್ತಿದೆ.

13 hours ago

ಜಾಗತಿಕ ತಾಪಮಾನಕ್ಕೆ ಪರಿಹಾರ : ವೃಕ್ಷ ಸಂವರ್ಧನೆಗೆ ಒತ್ತು

ಜಾಗತಿಕ ತಾಪಮಾನ ನಿಯಂತ್ರಣಕ್ಕೆ ವೃಕ್ಷ ಸಂವರ್ಧನೆ ಮುಖ್ಯ ಎಂದು ಸಚಿವ ಈಶ್ವರ ಖಂಡ್ರೆ…

13 hours ago

ಕೃಷಿಗೆ ಹೊಸ ದಿಕ್ಕು – ICAR ಟಾಸ್ಕ್ ಫೋರ್ಸ್ ಘೋಷಣೆ – ರೈತರ ಆದಾಯ ಹೆಚ್ಚಳಕ್ಕೆ ಪ್ಲಾನ್

ICAR ಕೃಷಿ ಕ್ಷೇತ್ರವನ್ನು ಬಲಪಡಿಸಲು ಸ್ಪೆಷಲ್ ಟಾಸ್ಕ್ ಫೋರ್ಸ್ ರಚಿಸಿದೆ. ಹವಾಮಾನ ಸವಾಲುಗಳಿಗೆ…

21 hours ago