Advertisement
MIRROR FOCUS

ರೈತರಿಗೆ ಬೆಳೆ ವಿಮೆ ಶೀಘ್ರ ಪಾವತಿಗೆ ಸಂಸದ ಕ್ಯಾ.ಚೌಟ ಒತ್ತಾಯ | ಇಲಾಖಾಧಿಕಾರಿಗಳೊಂದಿಗೆ ತುರ್ತು ಸಭೆ

Share

ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯಡಿ ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ಲಕ್ಷಾಂತರ ಮಂದಿ ಅರ್ಹ ರೈತರಿಗೆ ಈ ಬಾರಿ ವಿಮಾ ಹಣ ಪಾವತಿ ವಿಳಂಬವಾಗಿದೆ. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಸಂಬಂಧಪಟ್ಟ ಇಲಾಖಾಧಿಕಾರಿಗಳ ಸಭೆ ನಡೆಸಿ, ತತಕ್ಷಣವೇ ಬೆಳೆ ವಿಮಾ ಮೊತ್ತ ಬಿಡುಗಡೆಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

ವಿಮಾ ಕಂಪೆನಿಗಳು ಅರ್ಹ ರೈತರಿಗೆ ಆರ್‌ಡಬ್ಲ್ಯುಬಿಸಿಐಎಸ್‌ ಯೋಜನೆಯಡಿ ವಿಮಾ ಮೊತ್ತ ಪಾವತಿಸುವುದಕ್ಕೆ ಸಾಕಷ್ಟು ವಿಳಂಬವಾಗಿರುವುದನ್ನು ಗಂಭೀರವಾಗಿ ಪರಿಗಣಿಸಿದ ಸಂಸದ ಕ್ಯಾ. ಚೌಟ ಅವರು ಕಳೆದ ವಾರ ತೋಟಗಾರಿಕ ಇಲಾಖೆ, ಕೃಷಿ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ವಿಳಂಬಕ್ಕೆ ಕಾರಣಗಳನ್ನು ಪರಾಮರ್ಶಿಸಿದ್ದರು. ಆ ಮೂಲಕ ತುರ್ತಾಗಿ ವಿಮಾ ಮೊತ್ತ ಬಿಡುಗಡೆಗೊಳಿಸುವುದಕ್ಕೆ ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೂ ಸೂಚಿಸಿದ್ದಾರೆ.  ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರವು ಜಾರಿಗೊಳಿಸಿರುವ ಈ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯಡಿ ಸಾಮಾನ್ಯವಾಗಿ ನವೆಂಬರ್‌ ತಿಂಗಳಲ್ಲಿ ವಿಮಾ ಕಂಪೆನಿಗಳು ಅರ್ಹ ರೈತರ ಖಾತೆಗಳಿಗೆ ವಿಮಾ ಮೊತ್ತವನ್ನು ಜಮೆ ಮಾಡುತ್ತವೆ. ಆದರೆ, ಮಳೆ ಜಾಸ್ತಿಯಾಗಿರುವ ಕಾರಣ ಹವಾಮಾನ ಆಧಾರಿತ ಬೆಳೆ ನಾಶದ ವರದಿ ಸಲ್ಲಿಕೆಯ ಪ್ರಕ್ರಿಯೆಯಲ್ಲಿ ವ್ಯತ್ಯಾಸವಾಗಿದೆ ಎಂಬುವುದಾಗಿ ಇಲಾಖಾಧಿಕಾರಿಗಳು ಹೇಳಿದ್ದಾರೆ. ಆದರೆ, ನವೆಂಬರ್‌ ಮುಗಿದು ಡಿಸೆಂಬರ್‌ ತಿಂಗಳು ಆರಂಭಗೊಂಡಿದ್ದರೂ ಇನ್ನೂ ವಿಮಾ ಕಂಪೆನಿಗಳಿಂದ ರೈತರ ಖಾತೆಗಳಿಗೆ ಹಣ ಜಮೆ ಆಗದೆ ಇರುವುದರಿಂದ ಫಲಾನುಭವಿಗಳಿಗೆ ತೀವ್ರ ಆರ್ಥಿಕ ತೊಂದರೆಗೊಳಗಾಗಿದ್ದಾರೆ. ಹೀಗಾಗಿ ಅದಷ್ಟು ರೈತರಿಗೆ ಅನುಕೂಲವಾಗುವಂತೆ  ವಿಮಾ ಮೊತ್ತ ಬಿಡುಗಡೆ ಮಾಡಲು ಫಾಲೋ ಆಪ್ ಮಾಡಬೇಕು ಎಂದು ಸಭೆಯಲ್ಲಿ ಕ್ಯಾ. ಚೌಟ ನಿರ್ದೇಶಿಸಿದ್ದಾರೆ.  ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

4 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

4 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

4 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

5 days ago