ʼಸಂಸದರ ನಡೆ ಗ್ರಾಮದ ಕಡೆʼ ಕಾರ್ಯಕ್ರಮದಡಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಹಲವೆಡೆ ಸಾರ್ವಜನಿಕರೊಂದಿಗೆ ಸಂವಾದ ನಡೆಸಿದ್ದಾರೆ.
ಸುಳ್ಯ ತಾಲೂಕಿನ ಬಾಳುಗೋಡು, ಮಧ್ಯಾಹ್ನ ಕಲ್ಮಕಾರು ಹಾಗೂ ಕೊಲ್ಲಮೊಗ್ರುವಿನಲ್ಲಿ ಕ್ಯಾ. ಚೌಟ ಅವರು ಸಾರ್ವಜನಿಕರೊಂದಿಗೆ ಸಂವಾದ ನಡೆಸಿ ಆ ಬಳಿಕ ಸ್ಥಳೀಯರ ಕುಂದು-ಕೊರತೆ ಆಲಿಸಿದ್ದಾರೆ. ಈ ವೇಳೆ ಅನೇಕ ಸ್ಥಳೀಯ ನಾಗರಿಕರು ತಮ್ಮ ಊರಿನ ಸಮಸ್ಯೆಗಳನ್ನು ಸಂಸದರ ಗಮನಕ್ಕೆ ತಂದಿದ್ದಾರೆ. ಸಂಸದರು ಕೂಡ ಎಲ್ಲರ ಕುಂದು-ಕೊರತೆಗಳನ್ನು ಆಲಿಸಿ ಸೂಕ್ತ ರೀತಿಯಲ್ಲಿ ಸ್ಪಂದಿಸುವ ಭರವಸೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಪ್ರಕ್ರಿಯಿಸಿರುವ ಸಂಸದರು, ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಪ್ರತಿಯೊಂದು ಭಾಗದ ಜನರನ್ನು ತಲುಪುವುದು; ಆ ಮೂಲಕ ಅವರ ಹಾಗೂ ಅಲ್ಲಿನ ಸಮಸ್ಯೆಗಳ ಬಗ್ಗೆ ತಿಳಿದುಕೊಂಡು ಸೂಕ್ತ ರೀತಿಯಲ್ಲಿ ಸ್ಪಂದಿಸಬೇಕೆಂಬ ಆಶಯ ನನ್ನದು. ಜನರ ಸಮಸ್ಯೆಗಳು- ಸವಾಲುಗಳಿಗೆ ಖುದ್ದು ಆಲಿಸಿ ಅದಕ್ಕೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು ಎಂದು ಹೇಳಿದ್ದಾರೆ.
ಕಾರ್ಯಕ್ರಮದಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಬಿಜೆಪಿ ಸುಳ್ಯ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ, ಬಿಜೆಪಿ ಮುಖಂಡರಾದ ವೆಂಕಟ್ ದಂಬಕೋಡಿ, ಕಿಶೋರ್ ಶಿರಾಡಿ, ವಿನಯ್ ಮುಳುಗಾಡು, ವಿನಯ್ ಕಂದಡ್ಕ, ಪ್ರದೀಪ್ ರೈ ಮನವಳಿಕೆ, ಕೇಶವ ಭಟ್ ಮುಳಿಯ, ಶ್ರೀಕಾಂತ್ ಮಾವಿನಕಟ್ಟೆ, ಸೋಮಶೇಖರ್ ಕಟ್ಟೆಮನೆ, ಚಂದ್ರಹಾಸ ಶಿವಾಲ , ಎಟಿ ಕುಸುಮಾಧರ್, ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಕಾರ್ಯಕರ್ತರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…