MIRROR FOCUS

ಅಡಿಕೆ ಹಳದಿ ಎಲೆರೋಗ | ಲೋಕಸಭೆಯಲ್ಲಿ ಗಮನ ಸೆಳೆದ ಸಂಸದ ಬ್ರಿಜೇಶ್‌ ಚೌಟ |

Share

ದಕ್ಷಿಣ ಕನ್ನಡ ಹಾಗೂ ಅಡಿಕೆ ಬೆಳೆಯುವ ಪ್ರದೇಶದ ಅಡಿಕೆ ಬೆಳೆಗಾರರು ಅನುಭವಿಸುತ್ತಿರುವ ಸಮಸ್ಯೆಗಳ ಬಗ್ಗೆ ಸಂಸದ ಬ್ರಿಜೇಶ್‌ ಚೌಟ ಲೋಕಸಭೆಯಲ್ಲಿ ಗಮನ ಸೆಳೆದರು.ಮುಖ್ಯವಾಗಿ ಅಡಿಕೆ ಹಳದಿ ಎಲೆರೋಗದ ಬಗ್ಗೆ ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಮನವಿ ಮಾಡಿದರು.

Advertisement

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  1.74 ಲಕ್ಷ ಹೆಕ್ಟೇರ್ ಕೃಷಿ ಭೂಮಿಯಿದ್ದು, 84,157 ಹೆಕ್ಟೇರ್ ಭೂಮಿಯಲ್ಲಿ ಅಡಿಕೆ ಬೆಳೆಯಲಾಗಿದೆ. ಆದರೆ ಫೈಟೋಪ್ಲಾಸ್ಮಾದಿಂದ ಉಂಟಾಗಿರುವ ಹಳದಿ ಎಲೆ ರೋಗದಿಂದಾಗಿ ಭಾರೀ ಪ್ರಮಾಣದ ಬೆಳೆ ನಾಶವಾಗಿದ್ದು, ರೈತರು ದೊಡ್ಡ ಪ್ರಮಾಣದಲ್ಲಿ ನಷ್ಟ ಅನುಭವಿಸಿದ್ದಾರೆ. 16,000 ಹೆಕ್ಟೇರ್ ಕೃಷಿ ಪ್ರದೇಶದ ಅಡಿಕೆ ನಾಶವಾಗಿದೆ ಎಂದು ಕ್ಯಾಂಪ್ಕೋ ಸಂಸ್ಥೆ ವರದಿ ಮಾಡಿದ್ದು, ಅದರಲ್ಲಿ 6000 ಕೃಷಿಕರು ಹಳದಿ ಎಲೆ ಕಂಟಕದ ಬಗ್ಗೆ ಸಮಸ್ಯೆ ತೋಡಿಕೊಂಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಹಳದಿ ಎಲೆ ರೋಗ ಸಮಸ್ಯೆ ಬಗ್ಗೆ ಒಂದೇ ಹಂತದಲ್ಲಿ ಪರಿಹಾರ ನೀಡುವ ಮೂಲಕ ಬಿಕ್ಕಟ್ಟನ್ನು ಬಗೆಹರಿಸಲು ಮುಂದಾಗಬೇಕು ಎಂದು ಕೇಂದ್ರ ಸರಕಾರಕ್ಕೆ ಮನವಿ ಮಾಡಿದ್ದಾರೆ. ಈ ರೋಗ ತಡೆಗೆ ಸಂಬಂಧಿಸಿ ಸಂಶೋಧನಾ ಸಂಸ್ಥೆ ಸ್ಥಾಪಿಸಲು ಹಣಕಾಸು ನೆರವನ್ನು ನೀಡಬೇಕು ಎಂದು ಲೋಕಸಭೆಗೆ ಮನವಿ ಮಾಡಿ ರೈತರ ಈ ಸಮಸ್ಯೆಗೆ ತುರ್ತು ಕ್ರಮ ಕೈಗೊಳ್ಳುವಂತೆ ಮನವಿ ಬ್ರಿಜೇಶ್‌ ಚೌಟ ಮಾಡಿದರು.

During a session in the Lok Sabha, Dakshina Kannada MP Brijesh Chowta highlighted the challenges being experienced by Arecanut growers in Dakshina Kannada and other Arecanut-growing regions. He called for urgent action to be taken, particularly in addressing the issue of Arecanut yellow leaf disease.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 06-04-2025 | ಕೆಲವು ಕಡೆ ಸಾಮಾನ್ಯ ಮಳೆ ನಿರೀಕ್ಷೆ | ಎ.7 ರಿಂದ ಮಳೆಯ ಪ್ರಮಾಣ ಕಡಿಮೆ |

ರಾಜ್ಯದಲ್ಲಿ ಈಗಿನಂತೆ ಎಪ್ರಿಲ್ 7 ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿದ್ದು, ಎಪ್ರಿಲ್ 9…

10 hours ago

ಒಂದೆಡೆ ಮಳೆ-ಇನ್ನೊಂದೆಡೆ ಹೀಟ್‌ವೇವ್‌ | ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಏಪ್ರಿಲ್ 7 ರಿಂದ 9 ರವರೆಗೆ ಪೂರ್ವ ಭಾರತದಲ್ಲಿ ಗುಡುಗು ಮತ್ತು ಮಿಂಚಿನೊಂದಿಗೆ…

17 hours ago

ಮ್ಯಾನ್ಮಾರ್‌ನ ಭೂಕಂಪ | ಭಾರತೀಯ ಸೇನಾ ಆಸ್ಪತ್ರೆಯಲ್ಲಿ 700 ಕ್ಕೂ ಅಧಿಕ ರೋಗಿಗಳಿಗೆ ಚಿಕಿತ್ಸೆ

ಮ್ಯಾನ್ಮಾರ್‌ ಭೂಕಂಪದ ಬಳಿಕ ವಿವಿಧ ರೀತಿಯಲ್ಲಿ ಭಾರತವು ನೆರವು ನೀಡುತ್ತಿದೆ. ಇದುವರೆಗೆ ಭಾರತೀಯ ಸೇನಾ…

18 hours ago

ಮಾನವ-ಆನೆ ಸಂಘರ್ಷ ತಡೆಗೆ ಕ್ರಮ | 200 ಕೋ. ರೂ. ವೆಚ್ಚದ ರೈಲ್ವೆ ಬ್ಯಾರಿಕೇಡ್ ಕಾಮಗಾರಿ

ರಾಜ್ಯದಲ್ಲಿ 6395 ಆನೆಗಳಿದ್ದು, ಕೊಡಗು, ಚಿಕ್ಕಮಗಳೂರು, ಹಾಸನ ಜಿಲ್ಲೆಯಲ್ಲಿ ಕಾಫಿ ತೋಟಗಳಲ್ಲಿ ನೂರಾರು…

19 hours ago

ಬೃಹಸ್ಪತಿ ಅಂದರೆ ಜ್ಞಾನವಂತ

ಬದುಕಿನ ದೀವಿಗೆ ಜ್ಞಾನ. ಅದು ಜ್ಞಾನ ದೀವಿಗೆ. ಜ್ಞಾನಕ್ಕೆ ಮುಪ್ಪಿಲ್ಲ, ಸಾವಿಲ್ಲ. ಅದು…

20 hours ago

ಪಶು ಸಖಿಯರ ಮಾಸಿಕ ಗೌರವಧನ ಹೆಚ್ಚಳ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ

ರಾಜ್ಯದಲ್ಲಿ 1 ಕೋಟಿ ಲೀಟರ್ ಹಾಲು ಉತ್ಪಾದನೆಯಾಗುತ್ತಿದ್ದು, ಬೇಸಿಗೆಯಲ್ಲಿ 89 ಲಕ್ಷ ಲೀಟರ್‌ಗೆ…

21 hours ago