Advertisement
MIRROR FOCUS

ಅಡಿಕೆ ಹಳದಿ ಎಲೆರೋಗ | ಲೋಕಸಭೆಯಲ್ಲಿ ಗಮನ ಸೆಳೆದ ಸಂಸದ ಬ್ರಿಜೇಶ್‌ ಚೌಟ |

Share

ದಕ್ಷಿಣ ಕನ್ನಡ ಹಾಗೂ ಅಡಿಕೆ ಬೆಳೆಯುವ ಪ್ರದೇಶದ ಅಡಿಕೆ ಬೆಳೆಗಾರರು ಅನುಭವಿಸುತ್ತಿರುವ ಸಮಸ್ಯೆಗಳ ಬಗ್ಗೆ ಸಂಸದ ಬ್ರಿಜೇಶ್‌ ಚೌಟ ಲೋಕಸಭೆಯಲ್ಲಿ ಗಮನ ಸೆಳೆದರು.ಮುಖ್ಯವಾಗಿ ಅಡಿಕೆ ಹಳದಿ ಎಲೆರೋಗದ ಬಗ್ಗೆ ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಮನವಿ ಮಾಡಿದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  1.74 ಲಕ್ಷ ಹೆಕ್ಟೇರ್ ಕೃಷಿ ಭೂಮಿಯಿದ್ದು, 84,157 ಹೆಕ್ಟೇರ್ ಭೂಮಿಯಲ್ಲಿ ಅಡಿಕೆ ಬೆಳೆಯಲಾಗಿದೆ. ಆದರೆ ಫೈಟೋಪ್ಲಾಸ್ಮಾದಿಂದ ಉಂಟಾಗಿರುವ ಹಳದಿ ಎಲೆ ರೋಗದಿಂದಾಗಿ ಭಾರೀ ಪ್ರಮಾಣದ ಬೆಳೆ ನಾಶವಾಗಿದ್ದು, ರೈತರು ದೊಡ್ಡ ಪ್ರಮಾಣದಲ್ಲಿ ನಷ್ಟ ಅನುಭವಿಸಿದ್ದಾರೆ. 16,000 ಹೆಕ್ಟೇರ್ ಕೃಷಿ ಪ್ರದೇಶದ ಅಡಿಕೆ ನಾಶವಾಗಿದೆ ಎಂದು ಕ್ಯಾಂಪ್ಕೋ ಸಂಸ್ಥೆ ವರದಿ ಮಾಡಿದ್ದು, ಅದರಲ್ಲಿ 6000 ಕೃಷಿಕರು ಹಳದಿ ಎಲೆ ಕಂಟಕದ ಬಗ್ಗೆ ಸಮಸ್ಯೆ ತೋಡಿಕೊಂಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಹಳದಿ ಎಲೆ ರೋಗ ಸಮಸ್ಯೆ ಬಗ್ಗೆ ಒಂದೇ ಹಂತದಲ್ಲಿ ಪರಿಹಾರ ನೀಡುವ ಮೂಲಕ ಬಿಕ್ಕಟ್ಟನ್ನು ಬಗೆಹರಿಸಲು ಮುಂದಾಗಬೇಕು ಎಂದು ಕೇಂದ್ರ ಸರಕಾರಕ್ಕೆ ಮನವಿ ಮಾಡಿದ್ದಾರೆ. ಈ ರೋಗ ತಡೆಗೆ ಸಂಬಂಧಿಸಿ ಸಂಶೋಧನಾ ಸಂಸ್ಥೆ ಸ್ಥಾಪಿಸಲು ಹಣಕಾಸು ನೆರವನ್ನು ನೀಡಬೇಕು ಎಂದು ಲೋಕಸಭೆಗೆ ಮನವಿ ಮಾಡಿ ರೈತರ ಈ ಸಮಸ್ಯೆಗೆ ತುರ್ತು ಕ್ರಮ ಕೈಗೊಳ್ಳುವಂತೆ ಮನವಿ ಬ್ರಿಜೇಶ್‌ ಚೌಟ ಮಾಡಿದರು.

During a session in the Lok Sabha, Dakshina Kannada MP Brijesh Chowta highlighted the challenges being experienced by Arecanut growers in Dakshina Kannada and other Arecanut-growing regions. He called for urgent action to be taken, particularly in addressing the issue of Arecanut yellow leaf disease.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಂಗಳೂರಿನಲ್ಲಿ ರಾಷ್ಟ್ರೀಯ ಕಿರಿಯರ ಚೆಸ್ ಚಾಂಪಿಯನ್‌ಶಿಪ್‌ಗೆ ತೆರೆ – ಮಣಿ ಸರ್ಬರ್‌ತೋ ಚಾಂಪಿಯನ್

ಮಂಗಳೂರಿನಲ್ಲಿ ನಡೆದ ರಾಷ್ಟ್ರೀಯ 11 ವರ್ಷದೊಳಗಿನ ಮುಕ್ತ ಹಾಗೂ ಬಾಲಕಿಯರ ಚೆಸ್ ಚಾಂಪಿಯನ್‌ಶಿಪ್–2026ಕ್ಕೆ…

6 hours ago

ಮ್ಯಾನ್ಮಾರ್‌ನಿಂದ ರೈಲಿನಲ್ಲಿ ಸಾಗಿಸುತ್ತಿದ್ದ 10 ಟನ್ ಅಡಿಕೆ ವಶ

ಮ್ಯಾನ್ಮಾರ್‌ನಿಂದ ಕಳ್ಳಸಾಗಣೆ ಮಾಡಲಾಗಿದ್ದ ಸುಮಾರು 10 ಟನ್ ವಿದೇಶಿ ಅಡಿಕೆಯನ್ನು ಅಸ್ಸಾಂನ ರಂಗಿಯಾ…

6 hours ago

ಹವಾಮಾನ ವರದಿ | 08-08-2026 | ಕರಾವಳಿಯಲ್ಲಿ ಮಳೆ ಇಳಿಕೆ – ರಾಜ್ಯದಲ್ಲಿ ಹೇಗೆ..?

ಆಗಸ್ಟ್‌ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಸಾಧ್ಯತೆ ಇದ್ದು,…

15 hours ago

ಸಿರಿಧಾನ್ಯಗಳಿಗೆ ಬೇಡಿಕೆ ಹೆಚ್ಚಿದೆ… ಆದರೆ ರೈತರಿಗೆ ಲಾಭ ಹೆಚ್ಚಿದೆಯೇ?

ಸಿರಿಧಾನ್ಯಗಳ ಬೇಡಿಕೆ ಹೆಚ್ಚಿದರೂ, ರೈತರಿಗೆ ಅದರ ಸಂಪೂರ್ಣ ಆರ್ಥಿಕ ಲಾಭ ಇನ್ನೂ ತಲುಪಿಲ್ಲ…

19 hours ago

ಚಂಡಮಾರುತದ ಗಾಳಿಗೂ ಬಗ್ಗಿ ಉಳಿಯುವ ಅಡಿಕೆ ತಳಿ..! ಮೊಹಿತ್‌ನಗರ ತಳಿಗೆ ಹಲವು ರಾಜ್ಯಗಳಲ್ಲಿ ಬೇಡಿಕೆ

ಚಂಡಮಾರುತದ ಗಾಳಿಗೆ ಮುರಿಯದೆ ಬಾಗಿಕೊಂಡು ಉಳಿಯುವ ಮೊಹಿತ್‌ನಗರ ಅಡಿಕೆ ತಳಿಗೆ ಒಡಿಶಾ ಸೇರಿದಂತೆ…

20 hours ago

ದಕ್ಷಿಣ ಕನ್ನಡದಲ್ಲಿ ಮಳೆ | 4 ತಾಲೂಕುಗಳ ಶಾಲಾ-ಕಾಲೇಜುಗಳಿಗೆ ಇಂದು ರಜೆ – ಕಾಸರಗೋಡಿನಲ್ಲೂ ಶಾಲೆಗಳಿಗೆ ರಜೆ

ಭಾರೀ ಮಳೆಯ ಹಿನ್ನೆಲೆಯಲ್ಲಿ ಪುತ್ತೂರು, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕುಗಳ ಶಾಲಾ-ಕಾಲೇಜುಗಳಿಗೆ…

20 hours ago