ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು ಕಾಡಾನೆಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಉಡುಪಿ-ಚಿಕ್ಕಮಗಳೂರು ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವ ಭೂಪೇಂದ್ರ ಯಾದವ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. ಜಿಲ್ಲೆಯ ಹಲವೆಡೆ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು ರೈತರ ಕಾರ್ಮಿಕರ ಜೀವ ಹಾನಿ ಜೊತೆಗೆ ಬೆಳೆಗಳನ್ನು ನಾಶಮಾಡುತ್ತಿವೆ. ಈ ಬಗ್ಗೆ ಸಚಿವರ ಗಮನಕ್ಕೆ ತರಲಾಗಿದ್ದು ಕಾಡಾನೆಗಳ ನಿಯಂತ್ರಣಕ್ಕೆ ಆನೆ ದೊಡ್ಡಿಗಳ ನಿರ್ಮಾಣ ಮಾಡಿ ಶಾಶ್ವತ ಪರಿಹಾರದ ಯೋಜನೆ ರೂಪಿಸುವಂತೆ ಮನವಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಈ ನಡುವೆ ಕಳೆದ 5 ದಿನಗಳ ಹಿಂದೆ ಜಿಲ್ಲೆಯ ಬಾಳೆಹೊನ್ನೂರು ಬಳಿ ಇಬ್ಬರನ್ನು ಬಲಿ ಪಡೆದ ಕಾಡಾನೆಗಳನ್ನು ಸೆರೆ ಹಿಡಿಯುವ ಕಾರ್ಯಾಚರಣೆ ಆರಂಭವಾಗಿದ್ದು ಬಿಳುಕೊಪ್ಪ ಅರಣ್ಯದಲ್ಲಿ 14 ವರ್ಷದ ಕಾಡಾನೆಯನ್ನು ಸೆರೆ ಹಿಡಿದು ಸಕ್ರೆಬೈಲು ಆನೆ ಶಿಬಿರಕ್ಕೆ ಸ್ಥಳಾಂತರಿಸಲಾಗಿದೆ. ಈ ಭಾಗದಲ್ಲಿ ಮತ್ತೊಂದು ಕಾಡಾನೆ ಸಂಚರಿಸುತ್ತಿದ್ದು ನಾಳೆಯಿಂದ ಕಾರ್ಯಾಚರಣೆ ಮುಂದುವರೆಯಲಿದೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.
ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…
ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…
ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ವ್ಯವಸ್ಥೆ ಮಾಡಿ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿಯಾಗಿದೆ. ಟ್ಯಾಂಕರ್,…
ಉತ್ತರ ಕರ್ನಾಟಕದ ಐದು ಜಿಲ್ಲೆಗಳಲ್ಲಿ ಏಪ್ರಿಲ್ 15ರಿಂದ 17ರವರೆಗೆ ಬಿಸಿಗಾಳಿ ತೀವ್ರವಾಗುವ ಸಾಧ್ಯತೆ…
ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸ್ವಯಂಚಾಲಿತ ಹವಾಮಾನ ಕೇಂದ್ರ ಆರಂಭವಾಗಿದೆ. ಇದು ರೈತರಿಗೆ ನಿಖರ…