ಅಡಿಕೆ ಬೆಳೆಗಾರರಿಗೆ ಬೆಳೆ ಪರಿಹಾರ | ರಾಜ್ಯ ಸರ್ಕಾರವನ್ನು ಒತ್ತಾಯಿಸಿದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ

August 24, 2024
9:39 PM

ರಾಜ್ಯದಲ್ಲಿ ಅಡಿಕೆ ಬೆಳೆಗಾರರಿಗೆ ಬೆಳೆ ಪರಿಹಾರ ಸಹಾಯಧನ ಮತ್ತು ಮೈಲುತುತ್ತ ಸಹಾಯಧನ ನೀಡುವಂತೆ ರಾಜ್ಯ ಸರ್ಕಾರವನ್ನು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಒತ್ತಾಯಿಸಿದ್ದಾರೆ.…..ಮುಂದೆ ಓದಿ….

ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು, ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರಸಕ್ತ ವರ್ಷದಲ್ಲಿ ಅತಿವೃಷ್ಟಿ ಕಾರಣದಿಂದ ಪ್ರಾಕೃತಿಕ ಭೂ ವಿಕೋಪಗಳು ಜರುಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಈ ಬಾರಿಯ ಅತಿವೃಷ್ಟಿಯ ಪ್ರಭಾವ ಜಿಲ್ಲೆಯ ಬಹುತೇಕ ಎಲ್ಲಾ ವಿಧದ ಬೆಳೆಯ ಮೇಲು ಉಂಟಾಗಿದೆ. ವಾಡಿಕೆಗಿಂತ ಅಧಿಕ ಮಳೆಯಿಂದಾಗಿ ಜಿಲ್ಲೆಯ ರೈತ ವರ್ಗದ ಜೀವನಾಡಿಯಾದ ಅಡಿಕೆ ಬೆಳೆ ಮತ್ತು ಕಾಳುಮೆಣಸಿಗೆ ಕೊಳೆ ರೋಗವು ತಗುಲಿದ ಪರಿಣಾಮ ತೀವ್ರ ನಷ್ಟ ಉಂಟಾಗಿದೆ. ಎಲೆಚುಕ್ಕೆ ರೋಗ ಭಾದೆಯಿಂದ ಅಧಿಕ ಪ್ರಮಾಣದಲ್ಲಿ ಅಡಿಕೆ ಮರಗಳು ಈಗಾಗಲೇ ನಶಿಸುತ್ತಿದ್ದು, ಕೊಳೆ ರೋಗವು ರೈತರ ಜೀವನದ ಮೇಲೆ ಮತ್ತೊಂದು ಬರೆ ಎಳೆದಂತಾಗಿದೆ.

ಹೀಗಾಗಿ ಈ ಪ್ರದೇಶದಲ್ಲಿ ಹೋಬಳಿವಾರು ಅಡಿಕೆ ಬೆಳೆ ಸಮೀಕ್ಷೆ ನಡೆಸಲು ಆದೇಶಿಸಿ, ಬೆಳೆಗಳ ಸ್ಥಿತಿಗತಿಯ ಬಗ್ಗೆ ವಸ್ತುನಿಷ್ಠ ವರದಿ ಪಡೆದು, ಅಡಿಕೆ ಮತ್ತು ಕಾಳುಮೆಣಸು ಬೆಳೆಗೆ ಬೆಳೆ ಪರಿಹಾರ ಸಹಾಯಧನ ಮತ್ತು ಔಷಧಿ ಸಿಂಪಡನೆಗೆ ಅಗತ್ಯವಿರುವ ಮೈಲುತುತ್ತ ಸಹಾಯಧನ ನೀಡಬೇಕೆಂದು ಅವರು ಪತದ ಮೂಲಕ ಒತ್ತಾಯಿಸಿದ್ದಾರೆ.

ನಿಮ್ಮ ಅಭಿಪ್ರಾಯಗಳನ್ನು ಇಲ್ಲಿ ದಾಖಲಿಸಿ…

Member of Parliament Vishweshwar Hegade Kageri has requested the state government to provide crop compensation subsidy and mailututa subsidy to Arecanut farmers in the state.

  • D D
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ
August 12, 2026
8:24 PM
by: ದ ರೂರಲ್ ಮಿರರ್.ಕಾಂ
ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ
August 12, 2026
8:03 PM
by: ದ ರೂರಲ್ ಮಿರರ್.ಕಾಂ
ತಂಬಾಕು ನಿಷೇಧ ಜಾರಿ: ಅಡಿಕೆ ಬೆಳೆಗಾರರ ಹಿತ ಕಾಪಾಡಲು ಸ್ಪಷ್ಟ ಚೌಕಟ್ಟು ರೂಪಿಸಿ – ಕ್ಯಾಂಪ್ಕೊ
August 12, 2026
7:50 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 12-08-2026 | ಕರ್ನಾಟಕದಲ್ಲಿ ಮುಂದುವರಿಯಲಿದೆ ಬಿಡುವಿನ ಮಳೆ
August 12, 2026
7:19 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror