ರಾಜ್ಯದಲ್ಲಿ ಅಡಿಕೆ ಬೆಳೆಗಾರರಿಗೆ ಬೆಳೆ ಪರಿಹಾರ ಸಹಾಯಧನ ಮತ್ತು ಮೈಲುತುತ್ತ ಸಹಾಯಧನ ನೀಡುವಂತೆ ರಾಜ್ಯ ಸರ್ಕಾರವನ್ನು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಒತ್ತಾಯಿಸಿದ್ದಾರೆ.…..ಮುಂದೆ ಓದಿ….
ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು, ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರಸಕ್ತ ವರ್ಷದಲ್ಲಿ ಅತಿವೃಷ್ಟಿ ಕಾರಣದಿಂದ ಪ್ರಾಕೃತಿಕ ಭೂ ವಿಕೋಪಗಳು ಜರುಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಈ ಬಾರಿಯ ಅತಿವೃಷ್ಟಿಯ ಪ್ರಭಾವ ಜಿಲ್ಲೆಯ ಬಹುತೇಕ ಎಲ್ಲಾ ವಿಧದ ಬೆಳೆಯ ಮೇಲು ಉಂಟಾಗಿದೆ. ವಾಡಿಕೆಗಿಂತ ಅಧಿಕ ಮಳೆಯಿಂದಾಗಿ ಜಿಲ್ಲೆಯ ರೈತ ವರ್ಗದ ಜೀವನಾಡಿಯಾದ ಅಡಿಕೆ ಬೆಳೆ ಮತ್ತು ಕಾಳುಮೆಣಸಿಗೆ ಕೊಳೆ ರೋಗವು ತಗುಲಿದ ಪರಿಣಾಮ ತೀವ್ರ ನಷ್ಟ ಉಂಟಾಗಿದೆ. ಎಲೆಚುಕ್ಕೆ ರೋಗ ಭಾದೆಯಿಂದ ಅಧಿಕ ಪ್ರಮಾಣದಲ್ಲಿ ಅಡಿಕೆ ಮರಗಳು ಈಗಾಗಲೇ ನಶಿಸುತ್ತಿದ್ದು, ಕೊಳೆ ರೋಗವು ರೈತರ ಜೀವನದ ಮೇಲೆ ಮತ್ತೊಂದು ಬರೆ ಎಳೆದಂತಾಗಿದೆ.
ಹೀಗಾಗಿ ಈ ಪ್ರದೇಶದಲ್ಲಿ ಹೋಬಳಿವಾರು ಅಡಿಕೆ ಬೆಳೆ ಸಮೀಕ್ಷೆ ನಡೆಸಲು ಆದೇಶಿಸಿ, ಬೆಳೆಗಳ ಸ್ಥಿತಿಗತಿಯ ಬಗ್ಗೆ ವಸ್ತುನಿಷ್ಠ ವರದಿ ಪಡೆದು, ಅಡಿಕೆ ಮತ್ತು ಕಾಳುಮೆಣಸು ಬೆಳೆಗೆ ಬೆಳೆ ಪರಿಹಾರ ಸಹಾಯಧನ ಮತ್ತು ಔಷಧಿ ಸಿಂಪಡನೆಗೆ ಅಗತ್ಯವಿರುವ ಮೈಲುತುತ್ತ ಸಹಾಯಧನ ನೀಡಬೇಕೆಂದು ಅವರು ಪತದ ಮೂಲಕ ಒತ್ತಾಯಿಸಿದ್ದಾರೆ.
Member of Parliament Vishweshwar Hegade Kageri has requested the state government to provide crop compensation subsidy and mailututa subsidy to Arecanut farmers in the state.
ಆಮದು ಕಾರಣದಿಂದ ಮಿಜೋರಾಂ ಅಡಿಕೆ ಬೆಳೆಗಾರರು ಸ್ಪರ್ಧಾತ್ಮಕ ಬೆಲೆಯಲ್ಲಿ ತಮ್ಮ ಉತ್ಪನ್ನಗಳನ್ನು ಮಾರಾಟ…
ಇಂದು ಯಾವುದೇ ಪ್ರಮುಖ ಕ್ಷೇತ್ರಗಳನ್ನು ಗಮನಿಸಿ, ಅಲ್ಲೊಂದು ವಿವಾದ ಇಲ್ಲದೇ ಇರುವುದೇ ಇಲ್ಲ.…
ಈ ವಾರ ದೆಹಲಿ, ರಾಜಸ್ಥಾನ , ಗುಜರಾತ್, ಮಧ್ಯಪ್ರದೇಶ , ಮಹಾರಾಷ್ಟ್ರ ಮತ್ತು…
ಗುಜ್ಜೆ ಕಡಲೆ ಗಸಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ: ಗುಜ್ಜೆ 1…
ಸ್ಥಳೀಯ ಉತ್ಪನ್ನ ಉತ್ತೇಜನ, ಪರಿಸರ ಸಂರಕ್ಷಣೆ ಸೇರಿದಂತೆ ಉತ್ತಮ ಯೋಗಕ್ಷೇಮಕ್ಕೆ 9 ಸಂಕಲ್ಪಗಳನ್ನು …
ಭಾರತೀಯ ರಿಸರ್ವ್ ಬ್ಯಾಂಕ್ ನ ಹಣಕಾಸು ನೀತಿ ಸಮಿತಿ ಹಲವು ಮಹತ್ವದ ನಿರ್ಧಾರಗಳನ್ನು…