ರಾಜ್ಯದಲ್ಲಿ ಅಡಿಕೆ ಬೆಳೆಗಾರರಿಗೆ ಬೆಳೆ ಪರಿಹಾರ ಸಹಾಯಧನ ಮತ್ತು ಮೈಲುತುತ್ತ ಸಹಾಯಧನ ನೀಡುವಂತೆ ರಾಜ್ಯ ಸರ್ಕಾರವನ್ನು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಒತ್ತಾಯಿಸಿದ್ದಾರೆ.…..ಮುಂದೆ ಓದಿ….
ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು, ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರಸಕ್ತ ವರ್ಷದಲ್ಲಿ ಅತಿವೃಷ್ಟಿ ಕಾರಣದಿಂದ ಪ್ರಾಕೃತಿಕ ಭೂ ವಿಕೋಪಗಳು ಜರುಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಈ ಬಾರಿಯ ಅತಿವೃಷ್ಟಿಯ ಪ್ರಭಾವ ಜಿಲ್ಲೆಯ ಬಹುತೇಕ ಎಲ್ಲಾ ವಿಧದ ಬೆಳೆಯ ಮೇಲು ಉಂಟಾಗಿದೆ. ವಾಡಿಕೆಗಿಂತ ಅಧಿಕ ಮಳೆಯಿಂದಾಗಿ ಜಿಲ್ಲೆಯ ರೈತ ವರ್ಗದ ಜೀವನಾಡಿಯಾದ ಅಡಿಕೆ ಬೆಳೆ ಮತ್ತು ಕಾಳುಮೆಣಸಿಗೆ ಕೊಳೆ ರೋಗವು ತಗುಲಿದ ಪರಿಣಾಮ ತೀವ್ರ ನಷ್ಟ ಉಂಟಾಗಿದೆ. ಎಲೆಚುಕ್ಕೆ ರೋಗ ಭಾದೆಯಿಂದ ಅಧಿಕ ಪ್ರಮಾಣದಲ್ಲಿ ಅಡಿಕೆ ಮರಗಳು ಈಗಾಗಲೇ ನಶಿಸುತ್ತಿದ್ದು, ಕೊಳೆ ರೋಗವು ರೈತರ ಜೀವನದ ಮೇಲೆ ಮತ್ತೊಂದು ಬರೆ ಎಳೆದಂತಾಗಿದೆ.
ಹೀಗಾಗಿ ಈ ಪ್ರದೇಶದಲ್ಲಿ ಹೋಬಳಿವಾರು ಅಡಿಕೆ ಬೆಳೆ ಸಮೀಕ್ಷೆ ನಡೆಸಲು ಆದೇಶಿಸಿ, ಬೆಳೆಗಳ ಸ್ಥಿತಿಗತಿಯ ಬಗ್ಗೆ ವಸ್ತುನಿಷ್ಠ ವರದಿ ಪಡೆದು, ಅಡಿಕೆ ಮತ್ತು ಕಾಳುಮೆಣಸು ಬೆಳೆಗೆ ಬೆಳೆ ಪರಿಹಾರ ಸಹಾಯಧನ ಮತ್ತು ಔಷಧಿ ಸಿಂಪಡನೆಗೆ ಅಗತ್ಯವಿರುವ ಮೈಲುತುತ್ತ ಸಹಾಯಧನ ನೀಡಬೇಕೆಂದು ಅವರು ಪತದ ಮೂಲಕ ಒತ್ತಾಯಿಸಿದ್ದಾರೆ.
Member of Parliament Vishweshwar Hegade Kageri has requested the state government to provide crop compensation subsidy and mailututa subsidy to Arecanut farmers in the state.
ಅಡಿಕೆ ತೋಟಗಳಲ್ಲಿ ಹೂಗೊಂಚಲುಗಳು ಅರಳಿದರೂ ಕಾಯಿ ಕಟ್ಟದಿರುವುದಕ್ಕೆ ರೈತರು ಬಳಸುವ ಬೇವಿನ ಎಣ್ಣೆಯೇ…
ಕಳಪೆ ಗುಣಮಟ್ಟದ ಅಡಿಕೆ ಸಾಗಣೆ ಪ್ರಕರಣ ಪತ್ತೆಯಾಗಿದ್ದು, ಆಹಾರ ಸುರಕ್ಷತೆ ಮತ್ತು ಮಾನದಂಡಗಳ…
ಕಾಸರಗೋಡು CPCRI ತನ್ನ 110ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಜನರೇಷನ್ Z ಗಾಗಿ…
ಮಹಿಳಾ ಉದ್ಯಮಶೀಲತೆ, ತೆಂಗು ಮೌಲ್ಯವರ್ಧನೆ ಹಾಗೂ ರೈತರ ಆದಾಯ ವೃದ್ಧಿಯಲ್ಲಿ ತೆಂಗು ಅಭಿವೃದ್ಧಿ…
ತೆಂಗಿನಕಾಯಿ ಬೆಲೆ ಇಳಿಕೆ ಆತಂಕ ಹೆಚ್ಚಾಗಿದೆ. ಉತ್ಪಾದನೆ ಏರಿಕೆ ನಡುವೆಯೇ ರಫ್ತು ಮತ್ತು…
ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾನ್ ಅವರು…