ರಾಜ್ಯದಲ್ಲಿ ಅಡಿಕೆ ಬೆಳೆಗಾರರಿಗೆ ಬೆಳೆ ಪರಿಹಾರ ಸಹಾಯಧನ ಮತ್ತು ಮೈಲುತುತ್ತ ಸಹಾಯಧನ ನೀಡುವಂತೆ ರಾಜ್ಯ ಸರ್ಕಾರವನ್ನು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಒತ್ತಾಯಿಸಿದ್ದಾರೆ.…..ಮುಂದೆ ಓದಿ….
ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು, ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರಸಕ್ತ ವರ್ಷದಲ್ಲಿ ಅತಿವೃಷ್ಟಿ ಕಾರಣದಿಂದ ಪ್ರಾಕೃತಿಕ ಭೂ ವಿಕೋಪಗಳು ಜರುಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಈ ಬಾರಿಯ ಅತಿವೃಷ್ಟಿಯ ಪ್ರಭಾವ ಜಿಲ್ಲೆಯ ಬಹುತೇಕ ಎಲ್ಲಾ ವಿಧದ ಬೆಳೆಯ ಮೇಲು ಉಂಟಾಗಿದೆ. ವಾಡಿಕೆಗಿಂತ ಅಧಿಕ ಮಳೆಯಿಂದಾಗಿ ಜಿಲ್ಲೆಯ ರೈತ ವರ್ಗದ ಜೀವನಾಡಿಯಾದ ಅಡಿಕೆ ಬೆಳೆ ಮತ್ತು ಕಾಳುಮೆಣಸಿಗೆ ಕೊಳೆ ರೋಗವು ತಗುಲಿದ ಪರಿಣಾಮ ತೀವ್ರ ನಷ್ಟ ಉಂಟಾಗಿದೆ. ಎಲೆಚುಕ್ಕೆ ರೋಗ ಭಾದೆಯಿಂದ ಅಧಿಕ ಪ್ರಮಾಣದಲ್ಲಿ ಅಡಿಕೆ ಮರಗಳು ಈಗಾಗಲೇ ನಶಿಸುತ್ತಿದ್ದು, ಕೊಳೆ ರೋಗವು ರೈತರ ಜೀವನದ ಮೇಲೆ ಮತ್ತೊಂದು ಬರೆ ಎಳೆದಂತಾಗಿದೆ.
ಹೀಗಾಗಿ ಈ ಪ್ರದೇಶದಲ್ಲಿ ಹೋಬಳಿವಾರು ಅಡಿಕೆ ಬೆಳೆ ಸಮೀಕ್ಷೆ ನಡೆಸಲು ಆದೇಶಿಸಿ, ಬೆಳೆಗಳ ಸ್ಥಿತಿಗತಿಯ ಬಗ್ಗೆ ವಸ್ತುನಿಷ್ಠ ವರದಿ ಪಡೆದು, ಅಡಿಕೆ ಮತ್ತು ಕಾಳುಮೆಣಸು ಬೆಳೆಗೆ ಬೆಳೆ ಪರಿಹಾರ ಸಹಾಯಧನ ಮತ್ತು ಔಷಧಿ ಸಿಂಪಡನೆಗೆ ಅಗತ್ಯವಿರುವ ಮೈಲುತುತ್ತ ಸಹಾಯಧನ ನೀಡಬೇಕೆಂದು ಅವರು ಪತದ ಮೂಲಕ ಒತ್ತಾಯಿಸಿದ್ದಾರೆ.
Member of Parliament Vishweshwar Hegade Kageri has requested the state government to provide crop compensation subsidy and mailututa subsidy to Arecanut farmers in the state.
ಕಿಸಾನ್ ಸಮ್ಮಾನ್ ನಿಧಿಯಿಂದ 9 ಕೋಟಿ 50 ಲಕ್ಷ ರೈತರಿಗೆ 21 ಸಾವಿರ…
ತುಮಕೂರು ಜಿಲ್ಲೆಯಲ್ಲಿ 1351 ಹಾಲು ಉತ್ಪಾದಕರ ಸಹಕಾರ ಸಂಘಗಳು ಕಾರ್ಯನಿರ್ವಹಿಸುತ್ತಿದ್ದು, ಪ್ರತಿನಿತ್ಯ 9.40…
ಖಾಸಗಿ ಮೆಡಿಕಲ್ ಕಾಲೇಜುಗಳಲ್ಲಿನ ಜೈವಿಕ ತ್ಯಾಜ್ಯಗಳನ್ನು ನಗರಸಭೆ ಕಸ ಹಾಗೂ ಜನನಿಬಿಡ ಪ್ರದೇಶಗಳಲ್ಲಿ…
ರಾಜ್ಯದ ವಿವಿಧ ಅರಣ್ಯ ಮತ್ತು ವನ್ಯಜೀವಿ ತಾಣಗಳ ಸುತ್ತ 16 ಸಾವಿರದ 114…
ಚಿಕ್ಕಮಗಳೂರು ಜಿಲ್ಲೆಯ ಹೊರನಾಡಿನ ಪ್ರಸಿದ್ದ ಅನ್ನಪೂರ್ಣೇಶ್ವರಿ ದೇವಾಲಯದಲ್ಲಿ ವಸ್ತ್ರ ಸಂಹಿತೆ ಜಾರಿಗೆ ತರಲಾಗಿದೆ…
20.09.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…