Advertisement
MIRROR FOCUS

ಅಡಿಕೆ ಬೆಳೆಗಾರರಿಗೆ ಬೆಳೆ ಪರಿಹಾರ | ರಾಜ್ಯ ಸರ್ಕಾರವನ್ನು ಒತ್ತಾಯಿಸಿದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ

Share

ರಾಜ್ಯದಲ್ಲಿ ಅಡಿಕೆ ಬೆಳೆಗಾರರಿಗೆ ಬೆಳೆ ಪರಿಹಾರ ಸಹಾಯಧನ ಮತ್ತು ಮೈಲುತುತ್ತ ಸಹಾಯಧನ ನೀಡುವಂತೆ ರಾಜ್ಯ ಸರ್ಕಾರವನ್ನು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಒತ್ತಾಯಿಸಿದ್ದಾರೆ.…..ಮುಂದೆ ಓದಿ….

ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು, ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರಸಕ್ತ ವರ್ಷದಲ್ಲಿ ಅತಿವೃಷ್ಟಿ ಕಾರಣದಿಂದ ಪ್ರಾಕೃತಿಕ ಭೂ ವಿಕೋಪಗಳು ಜರುಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಈ ಬಾರಿಯ ಅತಿವೃಷ್ಟಿಯ ಪ್ರಭಾವ ಜಿಲ್ಲೆಯ ಬಹುತೇಕ ಎಲ್ಲಾ ವಿಧದ ಬೆಳೆಯ ಮೇಲು ಉಂಟಾಗಿದೆ. ವಾಡಿಕೆಗಿಂತ ಅಧಿಕ ಮಳೆಯಿಂದಾಗಿ ಜಿಲ್ಲೆಯ ರೈತ ವರ್ಗದ ಜೀವನಾಡಿಯಾದ ಅಡಿಕೆ ಬೆಳೆ ಮತ್ತು ಕಾಳುಮೆಣಸಿಗೆ ಕೊಳೆ ರೋಗವು ತಗುಲಿದ ಪರಿಣಾಮ ತೀವ್ರ ನಷ್ಟ ಉಂಟಾಗಿದೆ. ಎಲೆಚುಕ್ಕೆ ರೋಗ ಭಾದೆಯಿಂದ ಅಧಿಕ ಪ್ರಮಾಣದಲ್ಲಿ ಅಡಿಕೆ ಮರಗಳು ಈಗಾಗಲೇ ನಶಿಸುತ್ತಿದ್ದು, ಕೊಳೆ ರೋಗವು ರೈತರ ಜೀವನದ ಮೇಲೆ ಮತ್ತೊಂದು ಬರೆ ಎಳೆದಂತಾಗಿದೆ.

ಹೀಗಾಗಿ ಈ ಪ್ರದೇಶದಲ್ಲಿ ಹೋಬಳಿವಾರು ಅಡಿಕೆ ಬೆಳೆ ಸಮೀಕ್ಷೆ ನಡೆಸಲು ಆದೇಶಿಸಿ, ಬೆಳೆಗಳ ಸ್ಥಿತಿಗತಿಯ ಬಗ್ಗೆ ವಸ್ತುನಿಷ್ಠ ವರದಿ ಪಡೆದು, ಅಡಿಕೆ ಮತ್ತು ಕಾಳುಮೆಣಸು ಬೆಳೆಗೆ ಬೆಳೆ ಪರಿಹಾರ ಸಹಾಯಧನ ಮತ್ತು ಔಷಧಿ ಸಿಂಪಡನೆಗೆ ಅಗತ್ಯವಿರುವ ಮೈಲುತುತ್ತ ಸಹಾಯಧನ ನೀಡಬೇಕೆಂದು ಅವರು ಪತದ ಮೂಲಕ ಒತ್ತಾಯಿಸಿದ್ದಾರೆ.

ನಿಮ್ಮ ಅಭಿಪ್ರಾಯಗಳನ್ನು ಇಲ್ಲಿ ದಾಖಲಿಸಿ…

Member of Parliament Vishweshwar Hegade Kageri has requested the state government to provide crop compensation subsidy and mailututa subsidy to Arecanut farmers in the state.

  • D D
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

9 hours ago

ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ

ಗುಟ್ಕಾ ಮತ್ತು ಪಾನ್‌ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…

9 hours ago

ತಂಬಾಕು ನಿಷೇಧ ಜಾರಿ: ಅಡಿಕೆ ಬೆಳೆಗಾರರ ಹಿತ ಕಾಪಾಡಲು ಸ್ಪಷ್ಟ ಚೌಕಟ್ಟು ರೂಪಿಸಿ – ಕ್ಯಾಂಪ್ಕೊ

ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…

9 hours ago

ಹವಾಮಾನ ವರದಿ | 12-08-2026 | ಕರ್ನಾಟಕದಲ್ಲಿ ಮುಂದುವರಿಯಲಿದೆ ಬಿಡುವಿನ ಮಳೆ

ಕರಾವಳಿ ಹಾಗೂ ಮಲೆನಾಡಿನಲ್ಲಿ ಬಿಸಿಲು, ಮೋಡ ಮತ್ತು ಬಿಡುವಿನ ಸಾಮಾನ್ಯ ಮಳೆ ಮುಂದುವರಿಯುವ…

10 hours ago

ತೋಟಗಾರಿಕಾ ಬೆಳೆಗಾರರ ಪರ ಲೋಕಸಭೆಯಲ್ಲಿ ಧ್ವನಿ – ಹವಾಮಾನ ಆಧಾರಿತ ಬೆಳೆ ವಿಮೆ ಮರುಪರಿಷ್ಕರಣೆಗೆ ಕ್ಯಾ. ಚೌಟ ಒತ್ತಾಯ

ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…

22 hours ago

ಅಡಿಕೆ ಅಕ್ರಮ ಆಮದು ಕಡಿವಾಣ – ರೋಸ್ಟೆಡ್ ಅಡಿಕೆಗೆ ₹351 ಕನಿಷ್ಠ ದರ – ಕಸ್ಟಮ್ಸ್‌ ನಿಗಾ ಎಂದ ಕೇಂದ್ರ

ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್‌ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…

1 day ago