Advertisement
MIRROR FOCUS

ಅಡಿಕೆ ಬೆಳೆಗಾರರಿಗೆ ಬೆಳೆ ಪರಿಹಾರ | ರಾಜ್ಯ ಸರ್ಕಾರವನ್ನು ಒತ್ತಾಯಿಸಿದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ

Share

ರಾಜ್ಯದಲ್ಲಿ ಅಡಿಕೆ ಬೆಳೆಗಾರರಿಗೆ ಬೆಳೆ ಪರಿಹಾರ ಸಹಾಯಧನ ಮತ್ತು ಮೈಲುತುತ್ತ ಸಹಾಯಧನ ನೀಡುವಂತೆ ರಾಜ್ಯ ಸರ್ಕಾರವನ್ನು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಒತ್ತಾಯಿಸಿದ್ದಾರೆ.…..ಮುಂದೆ ಓದಿ….

ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು, ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರಸಕ್ತ ವರ್ಷದಲ್ಲಿ ಅತಿವೃಷ್ಟಿ ಕಾರಣದಿಂದ ಪ್ರಾಕೃತಿಕ ಭೂ ವಿಕೋಪಗಳು ಜರುಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಈ ಬಾರಿಯ ಅತಿವೃಷ್ಟಿಯ ಪ್ರಭಾವ ಜಿಲ್ಲೆಯ ಬಹುತೇಕ ಎಲ್ಲಾ ವಿಧದ ಬೆಳೆಯ ಮೇಲು ಉಂಟಾಗಿದೆ. ವಾಡಿಕೆಗಿಂತ ಅಧಿಕ ಮಳೆಯಿಂದಾಗಿ ಜಿಲ್ಲೆಯ ರೈತ ವರ್ಗದ ಜೀವನಾಡಿಯಾದ ಅಡಿಕೆ ಬೆಳೆ ಮತ್ತು ಕಾಳುಮೆಣಸಿಗೆ ಕೊಳೆ ರೋಗವು ತಗುಲಿದ ಪರಿಣಾಮ ತೀವ್ರ ನಷ್ಟ ಉಂಟಾಗಿದೆ. ಎಲೆಚುಕ್ಕೆ ರೋಗ ಭಾದೆಯಿಂದ ಅಧಿಕ ಪ್ರಮಾಣದಲ್ಲಿ ಅಡಿಕೆ ಮರಗಳು ಈಗಾಗಲೇ ನಶಿಸುತ್ತಿದ್ದು, ಕೊಳೆ ರೋಗವು ರೈತರ ಜೀವನದ ಮೇಲೆ ಮತ್ತೊಂದು ಬರೆ ಎಳೆದಂತಾಗಿದೆ.

ಹೀಗಾಗಿ ಈ ಪ್ರದೇಶದಲ್ಲಿ ಹೋಬಳಿವಾರು ಅಡಿಕೆ ಬೆಳೆ ಸಮೀಕ್ಷೆ ನಡೆಸಲು ಆದೇಶಿಸಿ, ಬೆಳೆಗಳ ಸ್ಥಿತಿಗತಿಯ ಬಗ್ಗೆ ವಸ್ತುನಿಷ್ಠ ವರದಿ ಪಡೆದು, ಅಡಿಕೆ ಮತ್ತು ಕಾಳುಮೆಣಸು ಬೆಳೆಗೆ ಬೆಳೆ ಪರಿಹಾರ ಸಹಾಯಧನ ಮತ್ತು ಔಷಧಿ ಸಿಂಪಡನೆಗೆ ಅಗತ್ಯವಿರುವ ಮೈಲುತುತ್ತ ಸಹಾಯಧನ ನೀಡಬೇಕೆಂದು ಅವರು ಪತದ ಮೂಲಕ ಒತ್ತಾಯಿಸಿದ್ದಾರೆ.

ನಿಮ್ಮ ಅಭಿಪ್ರಾಯಗಳನ್ನು ಇಲ್ಲಿ ದಾಖಲಿಸಿ…

Member of Parliament Vishweshwar Hegade Kageri has requested the state government to provide crop compensation subsidy and mailututa subsidy to Arecanut farmers in the state.

  • D D
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

“ಕಾಕ್ರೋಚ್‌ ಜನತಾ ಪಾರ್ಟಿ” ಸದ್ದು | 60 ಲಕ್ಷ ಫಾಲೋವರ್ಸ್‌ ದಾಟಿದ ರಾಜಕೀಯ ಚಳವಳಿ..!

ಕಾಕ್ರೋಚ್‌ ಜನತಾ ಪಾರ್ಟಿ ಎಂಬ ವ್ಯಂಗ್ಯಾತ್ಮಕ ಸಾಮಾಜಿಕ ಜಾಲತಾಣ ಚಳವಳಿ 60 ಲಕ್ಷಕ್ಕೂ…

12 hours ago

ಹವಾಮಾನ ವರದಿ | 20.05.2026 | ಮೇ 26 ಬಳಿಕ ಕರ್ನಾಟಕಕ್ಕೆ ಮುಂಗಾರು ಎಂಟ್ರಿ ಸಾಧ್ಯತೆ| ಕರಾವಳಿಯಲ್ಲಿ ಮಳೆ ಕುಂಠಿತ, ಉತ್ತರ ಭಾರತಕ್ಕೆ ಮಳೆ ಸೂಚನೆ

ಕರ್ನಾಟಕದಲ್ಲಿ ಮುಂಗಾರು ಪೂರ್ವ ಚಟುವಟಿಕೆಗಳು ನಿಧಾನಗೊಂಡಿರುವ ನಡುವೆ, 21.05.2026ರ ಬೆಳಿಗ್ಗೆ 8 ಗಂಟೆವರೆಗಿನ…

19 hours ago

ಉತ್ತರ ಭಾರತ ಉರಿಯುತ್ತಿದೆ – ಮೇ 25ರವರೆಗೆ ತೀವ್ರ ಬಿಸಿಗಾಳಿ ಎಚ್ಚರಿಕೆ

ಉತ್ತರ ಭಾರತದಲ್ಲಿ ಮೇ 25ರವರೆಗೆ ತೀವ್ರ ಬಿಸಿಗಾಳಿ ಮುಂದುವರಿಯುವ ಸಾಧ್ಯತೆ ಇದೆ. ಹಗಲು…

1 day ago

ರಾಸಾಯನಿಕ ಗೊಬ್ಬರ ಕೊರತೆ ಭೀತಿ‌ ; ಸಾವಯವ ಕೃಷಿಯತ್ತ ಗಮನಹರಿಸಲು ರೈತರಿಗೆ ಕೇಂದ್ರ ಸಚಿವರ ಕರೆ

ಜಾಗತಿಕ ಅಸ್ಥಿರತೆಯಿಂದ ರಸಗೊಬ್ಬರ ಲಭ್ಯತೆ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು…

1 day ago

ಮೋಹಿತ್‌ ನಗರ್‌ ಅಡಿಕೆ ಗಿಡ ಏಕೆ ರೈತರ ಫೇವರಿಟ್‌..? ಹೆಚ್ಚು ಇಳುವರಿ, ವೇಗದ ಬೆಳವಣಿಗೆ ಇದರ ವಿಶೇಷತೆ..!

ಮೋಹಿತ್‌ನಗರ ಅಡಿಕೆ ತಳಿ ಹೆಚ್ಚು ಇಳುವರಿ, ವೇಗವಾದ ಬೆಳವಣಿಗೆ ಹಾಗೂ ಸಮಾನ ಗುಣಮಟ್ಟದ…

1 day ago

ಹವಾಮಾನ ವರದಿ | 19-05-2026 | ಕರಾವಳಿಯಲ್ಲಿ ಮಳೆ ಕ್ಷೀಣಿಸುವ ಲಕ್ಷಣ – ಮೇ 27ರ ಸುಮಾರಿಗೆ ರಾಜ್ಯಕ್ಕೆ ಮುಂಗಾರು ಪ್ರವೇಶ ಸಾಧ್ಯತೆ

ರಾಜ್ಯದಲ್ಲಿ ಮೇ 20ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಮೇ 27ರ ಸುಮಾರಿಗೆ…

2 days ago