ಅಡಿಕೆ ಕ್ಯಾನ್ಸರ್‌ಕಾರಕ ಅಲ್ಲ – WHOಗೆ ಅಧಿಕೃತ ಮನವಿ ಮಾಡಿದ ಉತ್ತರ ಕನ್ನಡ ಸಂಸದ

February 19, 2026
7:00 AM
ಅಡಿಕೆಯನ್ನು Group-1 ಕ್ಯಾನ್ಸರ್ ಕಾರಕ ಪಟ್ಟಿಯಿಂದ ಮರುಪರಿಶೀಲನೆ ಮಾಡಲು WHO ಮತ್ತು IARCಗೆ ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅಧಿಕೃತವಾಗಿ ಪತ್ರ ಬರೆದಿದ್ದಾರೆ.

ಅಡಿಕೆ ಕ್ಯಾನ್ಸರ್‌ಕಾರಕವಲ್ಲ, ಹೀಗಾಗಿ ಅಡಿಕೆಯನ್ನು  Group-1 ಕ್ಯಾನ್ಸರ್ ಕಾರಕ ಪಟ್ಟಿಯಲ್ಲಿ ಸೇರಿಸಿರುವ ನಿರ್ಧಾರವನ್ನು ಮರುಪರಿಶೀಲಿಸಲು ವಿಶ್ವ ಆರೋಗ್ಯ ಸಂಸ್ಥೆ (WHO) ಮತ್ತು International Agency for Research on Cancer (IARC) ಗೆ ಉತ್ತರ ಕನ್ನಡ ಲೋಕಸಭಾ ಸದಸ್ಯರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಅಧಿಕೃತವಾಗಿ ಮನವಿ ಮಾಡಿದ್ದಾರೆ.

WHO South-East Asia Regional Office ಗೆ ಬರೆದಿರುವ ಪತ್ರದಲ್ಲಿ, ಅಡಿಕೆಯನ್ನು Group-1 carcinogen ಪಟ್ಟಿಯಲ್ಲಿ ಸೇರಿಸಿರುವ ವರ್ಗೀಕರಣವನ್ನು ವೈಜ್ಞಾನಿಕ ಆಧಾರದ ಮೇಲೆ ಮರುಪರಿಶೀಲನೆ ಮಾಡಬೇಕೆಂದು ಒತ್ತಾಯಿಸಿದ್ದಾರೆ.

ಅಡಿಕೆ ಭಾರತ ಸೇರಿದಂತೆ ದಕ್ಷಿಣ ಮತ್ತು ದಕ್ಷಿಣ-ಪೂರ್ವ ಏಷ್ಯಾದ ದೇಶಗಳಲ್ಲಿ ವ್ಯಾಪಕವಾಗಿ ಬೆಳೆದಿದ್ದು, ಲಕ್ಷಾಂತರ ಸಣ್ಣ ಮತ್ತು ಅಂಚಿನ ರೈತರ ಜೀವನಾಧಾರವಾಗಿದೆ ಎಂದು ತಿಳಿಸಿದ್ದಾರೆ. ಅಡಿಕೆ ಗ್ರಾಮೀಣ ಆರ್ಥಿಕತೆ ಮತ್ತು ಸಾಮಾಜಿಕ-ಸಾಂಸ್ಕೃತಿಕ ಜೀವನದ ಪ್ರಮುಖ ಭಾಗವಾಗಿದ್ದು, ಕ್ಯಾನ್ಸರ್ ಕಾರಕ ವರ್ಗೀಕರಣವು ಸಾರ್ವಜನಿಕ ಆರೋಗ್ಯ, ಆರ್ಥಿಕತೆ ಮತ್ತು ವ್ಯಾಪಾರ ಕ್ಷೇತ್ರಗಳಲ್ಲಿ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಉಲ್ಲೇಖಿಸಿದ್ದಾರೆ.

ಇತ್ತೀಚಿನ ವೈಜ್ಞಾನಿಕ ಅಧ್ಯಯನಗಳು ಮತ್ತು ಸಂಶೋಧನಾ ವರದಿಗಳು, ಅಡಿಕೆಯನ್ನು ಅದರ ನೈಸರ್ಗಿಕ ರೂಪದಲ್ಲಿ ಸೇವಿಸಿದಾಗ ಕ್ಯಾನ್ಸರ್ ಕಾರಕ ಎಂದು ಸ್ಪಷ್ಟವಾಗಿ ದೃಢಪಡಿಸಲು ಸಾಕಷ್ಟು ಸಾಕ್ಷ್ಯಗಳಿಲ್ಲ ಎಂದು ಸೂಚಿಸುತ್ತಿವೆ ಎಂದು ಅವರು ತಿಳಿಸಿದ್ದಾರೆ. ಭಾರತ ಸರ್ಕಾರವು ICAR, ICMR ಸೇರಿದಂತೆ ಪ್ರಮುಖ ಸಂಶೋಧನಾ ಸಂಸ್ಥೆಗಳ ಮೂಲಕ ಅಡಿಕೆಯ ಸುರಕ್ಷತೆ ಕುರಿತು ಸಮಗ್ರ ಸಂಶೋಧನೆ ಪ್ರಾರಂಭಿಸಿದ್ದು, ಅಂತಿಮ ವೈಜ್ಞಾನಿಕ ಫಲಿತಾಂಶಗಳು ಲಭ್ಯವಾಗುವವರೆಗೆ ತೀರ್ಮಾನಾತ್ಮಕ ನಿರ್ಧಾರ ತೆಗೆದುಕೊಳ್ಳುವುದು ಸೂಕ್ತವಲ್ಲ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಅಡಿಕೆಯ carcinogenic classification ಅನ್ನು ಮರುಪರಿಶೀಲಿಸಿ Group-2 ವಿಭಾಗಕ್ಕೆ ವರ್ಗೀಕರಿಸುವ ಸಾಧ್ಯತೆಯನ್ನು ಪರಿಗಣಿಸಬೇಕು ಎಂದು ಅವರು WHO ಮತ್ತು IARCಗೆ ಮನವಿ ಮಾಡಿದ್ದಾರೆ. ಜೊತೆಗೆ ಭಾರತ ಸೇರಿದಂತೆ ಅಡಿಕೆ ಉತ್ಪಾದಿಸುವ ದೇಶಗಳ ತಜ್ಞರನ್ನು ಮೌಲ್ಯಮಾಪನ ಪ್ರಕ್ರಿಯೆಯಲ್ಲಿ ಸೇರಿಸಿ ಸಮಗ್ರ ವೈಜ್ಞಾನಿಕ ಅಧ್ಯಯನ ನಡೆಸಬೇಕೆಂದು ಒತ್ತಾಯಿಸಿದ್ದಾರೆ.

Uttara Kannada MP Vishweshwar Hegde Kageri has written to WHO and IARC requesting reconsideration of arecanut’s classification as a Group-1 carcinogen. He highlighted its importance to farmers and rural economy and stressed the need for scientific re-evaluation based on ongoing research in India.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೀಟನಾಶಕವೇ ರೈತರ ಜೀವಕ್ಕೆ ಕಂಟಕ…? ರಾಜಸ್ಥಾನದಲ್ಲಿ 2 ವರ್ಷದಲ್ಲಿ 535 ರೈತರ ಸಾವು – ಬೆಚ್ಚಿಬೀಳಿಸಿದ ವರದಿ..!
June 7, 2026
9:17 PM
by: ದ ರೂರಲ್ ಮಿರರ್.ಕಾಂ
ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ವಿವಾದ – ಮುಸ್ಲಿಂ ಕುಟುಂಬದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆರೋಪ, ನಿಜಾಂಶವೇನು?
June 7, 2026
7:32 PM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 07.06.2026 | ಜೂನ್ 8ರಿಂದ ರಾಜ್ಯದಲ್ಲಿ ಮುಂಗಾರು ಚುರುಕು| ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ, ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ
June 7, 2026
1:56 PM
by: ಸಾಯಿಶೇಖರ್ ಕರಿಕಳ
“ಜಾಕ್‌ಫ್ರೂಟ್‌ ಹಬ್ಬ”ಕ್ಕೆ ಜನಸಾಗರ – 50 ಕ್ಕೂ ಹೆಚ್ಚು ಹಲಸಿನ ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ
June 6, 2026
11:05 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror