#Adichunchanagiri |ಅಮೆರಿಕಾದಲ್ಲಿ ತಲೆ ಎತ್ತಲಿದೆ 80 ಕೋಟಿ ರೂ. ವೆಚ್ಚದ ಕಾಲಭೈರವೇಶ್ವರ ದೇಗುಲ : ಕಾಮಗಾರಿ ಪರಿಶೀಲನೆಗೆ ಹೋದ ನಿರ್ಮಾಲಾನಂದ ಶ್ರೀ

July 22, 2023
3:40 PM
ಅಮೆರಿಕದ ನ್ಯೂ ಜೆರ್ಸಿಯ ಫ್ರ್ಯಾಂಕ್ಲಿನ್ ಟೌನ್ಶಿಪ್ ನಲ್ಲಿ ಶ್ರೀ ಆದಿ ಚುಂಚನಗಿರಿ ಮಠದ ವತಿಯಿಂದ 80 ಕೋಟಿ ರೂ. ವೆಚ್ಚದಲ್ಲಿ ಶ್ರೀ ಕಾಲಭೈರವೇಶ್ವರ ದೇಗುಲ ನಿರ್ಮಾಣವಾಗುತ್ತಿದೆ.

ನಮ್ಮ ಕನ್ನಡ ನೆಲೆದ ಸಂಸ್ಕೃತಿ, ಆಚಾರ ವಿಚಾರ, ಧಾರ್ಮಿಕ ಆಚರಣೆ ಎಲ್ಲದಕ್ಕೂ ಅದರದ್ದೇ ಆದ ವಿಶೇಷತೆಯಿದೆ. ನಮ್ಮ ಕನ್ನಡ ನಾಡಿನ ಕಲೆ, ಧಾರ್ಮಿಕ ವಿಚಾರಗಳು ಕೇವಲ ನಮ್ಮಲ್ಲಿ ಮಾತ್ರ ಆಚರಣೆ ಮಾಡದೆ, ಹೊರ ದೇಶದಲ್ಲೂ ಪಸರಿಸಿದೆ. ಇದಕ್ಕಾಗಿ ನಮ್ಮ ರಾಜ್ಯದ ಅದೆಷ್ಟೋ ಮಠಗಳು, ಸ್ವಾಮೀಜಿಗಳು ಮಹಾನ್ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಈಗ ನಮ್ಮ ರಾಜ್ಯದ ಹೆಮ್ಮೆಯ ಆದಿ ಚುಂಚನಗಿರಿ ಮಠ ತನ್ನ ಕಾರ್ಯವನ್ನು ದೂರದ ಅಮೇರಿಕಾದಲ್ಲೂ ಕೈಗೊಂಡಿದೆ.

Advertisement

ಅಮೆರಿಕದ ನ್ಯೂ ಜೆರ್ಸಿಯ ಫ್ರ್ಯಾಂಕ್ಲಿನ್ ಟೌನ್ಶಿಪ್ ನಲ್ಲಿ ಶ್ರೀ ಆದಿ ಚುಂಚನಗಿರಿ ಮಠದ ವತಿಯಿಂದ 80 ಕೋಟಿ ರೂ. ವೆಚ್ಚದಲ್ಲಿ ಶ್ರೀ ಕಾಲಭೈರವೇಶ್ವರ ದೇಗುಲ ನಿರ್ಮಾಣವಾಗುತ್ತಿದ್ದು, ಮಠಾಧಿಪತಿಗಳಾದ ಶ್ರೀ ನಿರ್ಮಲಾನಂದ ಸ್ವಾಮೀಜಿಗಳು #NirmalanandaSwamiji ಕಾಮಗಾರಿ ಪರಿಶೀಲನೆ ಮಾಡಿದರು.

ಶ್ರೀಗಳು ದೇಗುಲ ಕಾಮಗಾರಿ ಪರಿಶೀಲನೆಗಾಗಿ ಅಮೆರಿಕ ಪ್ರವಾಸ ಕೈಗೊಂಡಿದ್ದಾರೆ. ಆದಿ ಚುಂಚನಗಿರಿ ಮಹಾಸಂಸ್ಥಾನ ಈ ಟೌನ್ಶಿಪ್ ನಲ್ಲಿ 20 ಎಕರೆ ಜಮೀನು ಖರೀದಿಸಿದೆ. ಇಲ್ಲಿ ನಿರ್ಮಾಣ ಆಗುತ್ತಿರುವ 5000 ಚದರ ಮೀಟರ್ ಕಟ್ಟಡದಲ್ಲಿ ಯೋಗ, ಧ್ಯಾನ ಹಾಗೂ ಇತರೆ ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆ ಉದ್ದೇಶ ಹೊಂದಿದೆ.

ಮೊದಲ ಹಂತದಲ್ಲಿ ದೇವಾಲಯ, ಅರ್ಚಕರ ನಿವಾಸ ನಿರ್ಮಾಣವಾಗಲಿದೆ. ಡಾ. ಅಮರನಾಥಗೌಡ, ಡಾ. ಬಾಬು ಕಿಲಾರ ಅವರ ಮುಂದಾಳತ್ವದಲ್ಲಿ ಈ ಕಾಮಗಾರಿಗಳು ಆರಂಭವಾಗಿವೆ. ಸುಮಾರು 10 ಮಿಲಿಯನ್ ಡಾಲರ್ (80 ಕೋಟಿ ರೂ.) ಮೊತ್ತದ ಯೋಜನೆ ಇದಾಗಿದೆ. ಕಿಲಾರ ಅವರು ದೇವಾಲಯದ ವಿನ್ಯಾಸ, ಪರಿಸರ ಇಲಾಖೆ ಅನುಮತಿ ಮತ್ತು ನಿರ್ಮಾಣದ ಜವಾಬ್ದಾರಿ ವಹಿಸಿಕೊಂಡಿದ್ದಾರೆ.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!
February 20, 2026
10:26 PM
by: ಅರುಣ್‌ ಕುಮಾರ್ ಕಾಂಚೋಡು
ಗೇರು ಹಣ್ಣಿನಿಂದ ಆದಾಯಕ್ಕೆ ಹೊಸ ದಾರಿ | ಮಾ.11 ರಂದು ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಉದ್ಯಮ–ವಿಜ್ಞಾನಿಗಳ ಸಂವಾದ
February 20, 2026
7:46 AM
by: ದ ರೂರಲ್ ಮಿರರ್.ಕಾಂ
ಪರರನ್ನು ಮೆಟ್ಟಿಲಾಗಿಸಿದ ಸಾಧನೆ ಶಾಶ್ವತವಲ್ಲ: ಆತ್ಮವಂಚನೆಯ ಅಂಧಕಾರದತ್ತ ಕರೆದೊಯ್ಯುವ ಮಾರ್ಗ
February 20, 2026
7:30 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಹಿರಿಯರ ಪರಿಶ್ರಮದ ಫಲ ಮಕ್ಕಳಿಗೆ ಪರವಾನಗಿ ಆಗಬಾರದು
February 20, 2026
7:20 AM
by: ಡಾ.ಚಂದ್ರಶೇಖರ ದಾಮ್ಲೆ

You cannot copy content of this page - Copyright -The Rural Mirror