ಸುದ್ದಿಗಳು

#Adichunchanagiri |ಅಮೆರಿಕಾದಲ್ಲಿ ತಲೆ ಎತ್ತಲಿದೆ 80 ಕೋಟಿ ರೂ. ವೆಚ್ಚದ ಕಾಲಭೈರವೇಶ್ವರ ದೇಗುಲ : ಕಾಮಗಾರಿ ಪರಿಶೀಲನೆಗೆ ಹೋದ ನಿರ್ಮಾಲಾನಂದ ಶ್ರೀ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ನಮ್ಮ ಕನ್ನಡ ನೆಲೆದ ಸಂಸ್ಕೃತಿ, ಆಚಾರ ವಿಚಾರ, ಧಾರ್ಮಿಕ ಆಚರಣೆ ಎಲ್ಲದಕ್ಕೂ ಅದರದ್ದೇ ಆದ ವಿಶೇಷತೆಯಿದೆ. ನಮ್ಮ ಕನ್ನಡ ನಾಡಿನ ಕಲೆ, ಧಾರ್ಮಿಕ ವಿಚಾರಗಳು ಕೇವಲ ನಮ್ಮಲ್ಲಿ ಮಾತ್ರ ಆಚರಣೆ ಮಾಡದೆ, ಹೊರ ದೇಶದಲ್ಲೂ ಪಸರಿಸಿದೆ. ಇದಕ್ಕಾಗಿ ನಮ್ಮ ರಾಜ್ಯದ ಅದೆಷ್ಟೋ ಮಠಗಳು, ಸ್ವಾಮೀಜಿಗಳು ಮಹಾನ್ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಈಗ ನಮ್ಮ ರಾಜ್ಯದ ಹೆಮ್ಮೆಯ ಆದಿ ಚುಂಚನಗಿರಿ ಮಠ ತನ್ನ ಕಾರ್ಯವನ್ನು ದೂರದ ಅಮೇರಿಕಾದಲ್ಲೂ ಕೈಗೊಂಡಿದೆ.

Advertisement
Advertisement

ಅಮೆರಿಕದ ನ್ಯೂ ಜೆರ್ಸಿಯ ಫ್ರ್ಯಾಂಕ್ಲಿನ್ ಟೌನ್ಶಿಪ್ ನಲ್ಲಿ ಶ್ರೀ ಆದಿ ಚುಂಚನಗಿರಿ ಮಠದ ವತಿಯಿಂದ 80 ಕೋಟಿ ರೂ. ವೆಚ್ಚದಲ್ಲಿ ಶ್ರೀ ಕಾಲಭೈರವೇಶ್ವರ ದೇಗುಲ ನಿರ್ಮಾಣವಾಗುತ್ತಿದ್ದು, ಮಠಾಧಿಪತಿಗಳಾದ ಶ್ರೀ ನಿರ್ಮಲಾನಂದ ಸ್ವಾಮೀಜಿಗಳು #NirmalanandaSwamiji ಕಾಮಗಾರಿ ಪರಿಶೀಲನೆ ಮಾಡಿದರು.

ಶ್ರೀಗಳು ದೇಗುಲ ಕಾಮಗಾರಿ ಪರಿಶೀಲನೆಗಾಗಿ ಅಮೆರಿಕ ಪ್ರವಾಸ ಕೈಗೊಂಡಿದ್ದಾರೆ. ಆದಿ ಚುಂಚನಗಿರಿ ಮಹಾಸಂಸ್ಥಾನ ಈ ಟೌನ್ಶಿಪ್ ನಲ್ಲಿ 20 ಎಕರೆ ಜಮೀನು ಖರೀದಿಸಿದೆ. ಇಲ್ಲಿ ನಿರ್ಮಾಣ ಆಗುತ್ತಿರುವ 5000 ಚದರ ಮೀಟರ್ ಕಟ್ಟಡದಲ್ಲಿ ಯೋಗ, ಧ್ಯಾನ ಹಾಗೂ ಇತರೆ ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆ ಉದ್ದೇಶ ಹೊಂದಿದೆ.

ಮೊದಲ ಹಂತದಲ್ಲಿ ದೇವಾಲಯ, ಅರ್ಚಕರ ನಿವಾಸ ನಿರ್ಮಾಣವಾಗಲಿದೆ. ಡಾ. ಅಮರನಾಥಗೌಡ, ಡಾ. ಬಾಬು ಕಿಲಾರ ಅವರ ಮುಂದಾಳತ್ವದಲ್ಲಿ ಈ ಕಾಮಗಾರಿಗಳು ಆರಂಭವಾಗಿವೆ. ಸುಮಾರು 10 ಮಿಲಿಯನ್ ಡಾಲರ್ (80 ಕೋಟಿ ರೂ.) ಮೊತ್ತದ ಯೋಜನೆ ಇದಾಗಿದೆ. ಕಿಲಾರ ಅವರು ದೇವಾಲಯದ ವಿನ್ಯಾಸ, ಪರಿಸರ ಇಲಾಖೆ ಅನುಮತಿ ಮತ್ತು ನಿರ್ಮಾಣದ ಜವಾಬ್ದಾರಿ ವಹಿಸಿಕೊಂಡಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಆತ್ಮನಿರ್ಭರ ಯೋಜನೆಯಿಂದ ಸ್ವಾವಲಂಬಿ ಬದುಕು | ಸಾವಯವ ಕೃಷಿಯಲ್ಲಿ ಕಬ್ಬು ಬೆಳೆದು ಯಶಸ್ವಿ

ಆತ್ಮನಿರ್ಭರ ಯೋಜನೆಯಡಿ ಸ್ವಾವಲಂಬಿ ಬದುಕಿನ ಕನಸು ಕಂಡಿದ್ದ ಬಿ. ನಂದೀಶ್ ತಮ್ಮ ಜಮೀನಿನಲ್ಲಿ…

11 hours ago

ಹೊಸರುಚಿ | ನೆಕ್ಕರೆ ಮಾವಿನ ಕಾಯಿ ಪಲ್ಯ

ನೆಕ್ಕರೆ ಮಾವಿನ ಕಾಯಿ ಪಲ್ಯ ಮಾಡುವ ವಿಧಾನ..

14 hours ago

ಜೂನ್ ಮೂರನೇ ವಾರ ಗುರು ಆದಿತ್ಯ ರಾಜಯೋಗ, ಈ 5 ರಾಶಿಗೆ ಅದೃಷ್ಟವೋ ಅದೃಷ್ಟ.!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

15 hours ago

ಮುಂದುವರಿದ ಮಳೆಯಬ್ಬರ | 4 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ |

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.  ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ…

24 hours ago

ವಿದೇಶದಿಂದ ಹಳ್ಳಿಗೆ ಬಂದು ಕೃಷಿ ಸಾಧನೆ ಮಾಡಿದ ಯುವಕ

ಕೃಷಿಯನ್ನು ನಂಬಿ ಕೆಲಸ ಮಾಡಿದರೆ ಯಶಸ್ಸು ಕಾಣಬಹುದು ಎಂಬುದನ್ನು ರೈತ  ಯೋಗೇಶ್ ತೋರಿಸಿಕೊಟ್ಟಿದ್ದಾರೆ.…

1 day ago