Advertisement
ಸುದ್ದಿಗಳು

#Adichunchanagiri |ಅಮೆರಿಕಾದಲ್ಲಿ ತಲೆ ಎತ್ತಲಿದೆ 80 ಕೋಟಿ ರೂ. ವೆಚ್ಚದ ಕಾಲಭೈರವೇಶ್ವರ ದೇಗುಲ : ಕಾಮಗಾರಿ ಪರಿಶೀಲನೆಗೆ ಹೋದ ನಿರ್ಮಾಲಾನಂದ ಶ್ರೀ

Share

ನಮ್ಮ ಕನ್ನಡ ನೆಲೆದ ಸಂಸ್ಕೃತಿ, ಆಚಾರ ವಿಚಾರ, ಧಾರ್ಮಿಕ ಆಚರಣೆ ಎಲ್ಲದಕ್ಕೂ ಅದರದ್ದೇ ಆದ ವಿಶೇಷತೆಯಿದೆ. ನಮ್ಮ ಕನ್ನಡ ನಾಡಿನ ಕಲೆ, ಧಾರ್ಮಿಕ ವಿಚಾರಗಳು ಕೇವಲ ನಮ್ಮಲ್ಲಿ ಮಾತ್ರ ಆಚರಣೆ ಮಾಡದೆ, ಹೊರ ದೇಶದಲ್ಲೂ ಪಸರಿಸಿದೆ. ಇದಕ್ಕಾಗಿ ನಮ್ಮ ರಾಜ್ಯದ ಅದೆಷ್ಟೋ ಮಠಗಳು, ಸ್ವಾಮೀಜಿಗಳು ಮಹಾನ್ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಈಗ ನಮ್ಮ ರಾಜ್ಯದ ಹೆಮ್ಮೆಯ ಆದಿ ಚುಂಚನಗಿರಿ ಮಠ ತನ್ನ ಕಾರ್ಯವನ್ನು ದೂರದ ಅಮೇರಿಕಾದಲ್ಲೂ ಕೈಗೊಂಡಿದೆ.

ಅಮೆರಿಕದ ನ್ಯೂ ಜೆರ್ಸಿಯ ಫ್ರ್ಯಾಂಕ್ಲಿನ್ ಟೌನ್ಶಿಪ್ ನಲ್ಲಿ ಶ್ರೀ ಆದಿ ಚುಂಚನಗಿರಿ ಮಠದ ವತಿಯಿಂದ 80 ಕೋಟಿ ರೂ. ವೆಚ್ಚದಲ್ಲಿ ಶ್ರೀ ಕಾಲಭೈರವೇಶ್ವರ ದೇಗುಲ ನಿರ್ಮಾಣವಾಗುತ್ತಿದ್ದು, ಮಠಾಧಿಪತಿಗಳಾದ ಶ್ರೀ ನಿರ್ಮಲಾನಂದ ಸ್ವಾಮೀಜಿಗಳು #NirmalanandaSwamiji ಕಾಮಗಾರಿ ಪರಿಶೀಲನೆ ಮಾಡಿದರು.

ಶ್ರೀಗಳು ದೇಗುಲ ಕಾಮಗಾರಿ ಪರಿಶೀಲನೆಗಾಗಿ ಅಮೆರಿಕ ಪ್ರವಾಸ ಕೈಗೊಂಡಿದ್ದಾರೆ. ಆದಿ ಚುಂಚನಗಿರಿ ಮಹಾಸಂಸ್ಥಾನ ಈ ಟೌನ್ಶಿಪ್ ನಲ್ಲಿ 20 ಎಕರೆ ಜಮೀನು ಖರೀದಿಸಿದೆ. ಇಲ್ಲಿ ನಿರ್ಮಾಣ ಆಗುತ್ತಿರುವ 5000 ಚದರ ಮೀಟರ್ ಕಟ್ಟಡದಲ್ಲಿ ಯೋಗ, ಧ್ಯಾನ ಹಾಗೂ ಇತರೆ ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆ ಉದ್ದೇಶ ಹೊಂದಿದೆ.

ಮೊದಲ ಹಂತದಲ್ಲಿ ದೇವಾಲಯ, ಅರ್ಚಕರ ನಿವಾಸ ನಿರ್ಮಾಣವಾಗಲಿದೆ. ಡಾ. ಅಮರನಾಥಗೌಡ, ಡಾ. ಬಾಬು ಕಿಲಾರ ಅವರ ಮುಂದಾಳತ್ವದಲ್ಲಿ ಈ ಕಾಮಗಾರಿಗಳು ಆರಂಭವಾಗಿವೆ. ಸುಮಾರು 10 ಮಿಲಿಯನ್ ಡಾಲರ್ (80 ಕೋಟಿ ರೂ.) ಮೊತ್ತದ ಯೋಜನೆ ಇದಾಗಿದೆ. ಕಿಲಾರ ಅವರು ದೇವಾಲಯದ ವಿನ್ಯಾಸ, ಪರಿಸರ ಇಲಾಖೆ ಅನುಮತಿ ಮತ್ತು ನಿರ್ಮಾಣದ ಜವಾಬ್ದಾರಿ ವಹಿಸಿಕೊಂಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ

2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…

52 minutes ago

ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ

ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…

2 hours ago

ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ

ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…

3 hours ago

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

12 hours ago

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…

14 hours ago

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

21 hours ago