Advertisement
ಸುದ್ದಿಗಳು

#Adichunchanagiri |ಅಮೆರಿಕಾದಲ್ಲಿ ತಲೆ ಎತ್ತಲಿದೆ 80 ಕೋಟಿ ರೂ. ವೆಚ್ಚದ ಕಾಲಭೈರವೇಶ್ವರ ದೇಗುಲ : ಕಾಮಗಾರಿ ಪರಿಶೀಲನೆಗೆ ಹೋದ ನಿರ್ಮಾಲಾನಂದ ಶ್ರೀ

Share

ನಮ್ಮ ಕನ್ನಡ ನೆಲೆದ ಸಂಸ್ಕೃತಿ, ಆಚಾರ ವಿಚಾರ, ಧಾರ್ಮಿಕ ಆಚರಣೆ ಎಲ್ಲದಕ್ಕೂ ಅದರದ್ದೇ ಆದ ವಿಶೇಷತೆಯಿದೆ. ನಮ್ಮ ಕನ್ನಡ ನಾಡಿನ ಕಲೆ, ಧಾರ್ಮಿಕ ವಿಚಾರಗಳು ಕೇವಲ ನಮ್ಮಲ್ಲಿ ಮಾತ್ರ ಆಚರಣೆ ಮಾಡದೆ, ಹೊರ ದೇಶದಲ್ಲೂ ಪಸರಿಸಿದೆ. ಇದಕ್ಕಾಗಿ ನಮ್ಮ ರಾಜ್ಯದ ಅದೆಷ್ಟೋ ಮಠಗಳು, ಸ್ವಾಮೀಜಿಗಳು ಮಹಾನ್ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಈಗ ನಮ್ಮ ರಾಜ್ಯದ ಹೆಮ್ಮೆಯ ಆದಿ ಚುಂಚನಗಿರಿ ಮಠ ತನ್ನ ಕಾರ್ಯವನ್ನು ದೂರದ ಅಮೇರಿಕಾದಲ್ಲೂ ಕೈಗೊಂಡಿದೆ.

ಅಮೆರಿಕದ ನ್ಯೂ ಜೆರ್ಸಿಯ ಫ್ರ್ಯಾಂಕ್ಲಿನ್ ಟೌನ್ಶಿಪ್ ನಲ್ಲಿ ಶ್ರೀ ಆದಿ ಚುಂಚನಗಿರಿ ಮಠದ ವತಿಯಿಂದ 80 ಕೋಟಿ ರೂ. ವೆಚ್ಚದಲ್ಲಿ ಶ್ರೀ ಕಾಲಭೈರವೇಶ್ವರ ದೇಗುಲ ನಿರ್ಮಾಣವಾಗುತ್ತಿದ್ದು, ಮಠಾಧಿಪತಿಗಳಾದ ಶ್ರೀ ನಿರ್ಮಲಾನಂದ ಸ್ವಾಮೀಜಿಗಳು #NirmalanandaSwamiji ಕಾಮಗಾರಿ ಪರಿಶೀಲನೆ ಮಾಡಿದರು.

ಶ್ರೀಗಳು ದೇಗುಲ ಕಾಮಗಾರಿ ಪರಿಶೀಲನೆಗಾಗಿ ಅಮೆರಿಕ ಪ್ರವಾಸ ಕೈಗೊಂಡಿದ್ದಾರೆ. ಆದಿ ಚುಂಚನಗಿರಿ ಮಹಾಸಂಸ್ಥಾನ ಈ ಟೌನ್ಶಿಪ್ ನಲ್ಲಿ 20 ಎಕರೆ ಜಮೀನು ಖರೀದಿಸಿದೆ. ಇಲ್ಲಿ ನಿರ್ಮಾಣ ಆಗುತ್ತಿರುವ 5000 ಚದರ ಮೀಟರ್ ಕಟ್ಟಡದಲ್ಲಿ ಯೋಗ, ಧ್ಯಾನ ಹಾಗೂ ಇತರೆ ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆ ಉದ್ದೇಶ ಹೊಂದಿದೆ.

ಮೊದಲ ಹಂತದಲ್ಲಿ ದೇವಾಲಯ, ಅರ್ಚಕರ ನಿವಾಸ ನಿರ್ಮಾಣವಾಗಲಿದೆ. ಡಾ. ಅಮರನಾಥಗೌಡ, ಡಾ. ಬಾಬು ಕಿಲಾರ ಅವರ ಮುಂದಾಳತ್ವದಲ್ಲಿ ಈ ಕಾಮಗಾರಿಗಳು ಆರಂಭವಾಗಿವೆ. ಸುಮಾರು 10 ಮಿಲಿಯನ್ ಡಾಲರ್ (80 ಕೋಟಿ ರೂ.) ಮೊತ್ತದ ಯೋಜನೆ ಇದಾಗಿದೆ. ಕಿಲಾರ ಅವರು ದೇವಾಲಯದ ವಿನ್ಯಾಸ, ಪರಿಸರ ಇಲಾಖೆ ಅನುಮತಿ ಮತ್ತು ನಿರ್ಮಾಣದ ಜವಾಬ್ದಾರಿ ವಹಿಸಿಕೊಂಡಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

2 days ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

2 days ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

2 days ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

2 days ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

2 days ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

2 days ago