Advertisement
ಸುದ್ದಿಗಳು

#Adichunchanagiri |ಅಮೆರಿಕಾದಲ್ಲಿ ತಲೆ ಎತ್ತಲಿದೆ 80 ಕೋಟಿ ರೂ. ವೆಚ್ಚದ ಕಾಲಭೈರವೇಶ್ವರ ದೇಗುಲ : ಕಾಮಗಾರಿ ಪರಿಶೀಲನೆಗೆ ಹೋದ ನಿರ್ಮಾಲಾನಂದ ಶ್ರೀ

Share

ನಮ್ಮ ಕನ್ನಡ ನೆಲೆದ ಸಂಸ್ಕೃತಿ, ಆಚಾರ ವಿಚಾರ, ಧಾರ್ಮಿಕ ಆಚರಣೆ ಎಲ್ಲದಕ್ಕೂ ಅದರದ್ದೇ ಆದ ವಿಶೇಷತೆಯಿದೆ. ನಮ್ಮ ಕನ್ನಡ ನಾಡಿನ ಕಲೆ, ಧಾರ್ಮಿಕ ವಿಚಾರಗಳು ಕೇವಲ ನಮ್ಮಲ್ಲಿ ಮಾತ್ರ ಆಚರಣೆ ಮಾಡದೆ, ಹೊರ ದೇಶದಲ್ಲೂ ಪಸರಿಸಿದೆ. ಇದಕ್ಕಾಗಿ ನಮ್ಮ ರಾಜ್ಯದ ಅದೆಷ್ಟೋ ಮಠಗಳು, ಸ್ವಾಮೀಜಿಗಳು ಮಹಾನ್ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಈಗ ನಮ್ಮ ರಾಜ್ಯದ ಹೆಮ್ಮೆಯ ಆದಿ ಚುಂಚನಗಿರಿ ಮಠ ತನ್ನ ಕಾರ್ಯವನ್ನು ದೂರದ ಅಮೇರಿಕಾದಲ್ಲೂ ಕೈಗೊಂಡಿದೆ.

ಅಮೆರಿಕದ ನ್ಯೂ ಜೆರ್ಸಿಯ ಫ್ರ್ಯಾಂಕ್ಲಿನ್ ಟೌನ್ಶಿಪ್ ನಲ್ಲಿ ಶ್ರೀ ಆದಿ ಚುಂಚನಗಿರಿ ಮಠದ ವತಿಯಿಂದ 80 ಕೋಟಿ ರೂ. ವೆಚ್ಚದಲ್ಲಿ ಶ್ರೀ ಕಾಲಭೈರವೇಶ್ವರ ದೇಗುಲ ನಿರ್ಮಾಣವಾಗುತ್ತಿದ್ದು, ಮಠಾಧಿಪತಿಗಳಾದ ಶ್ರೀ ನಿರ್ಮಲಾನಂದ ಸ್ವಾಮೀಜಿಗಳು #NirmalanandaSwamiji ಕಾಮಗಾರಿ ಪರಿಶೀಲನೆ ಮಾಡಿದರು.

ಶ್ರೀಗಳು ದೇಗುಲ ಕಾಮಗಾರಿ ಪರಿಶೀಲನೆಗಾಗಿ ಅಮೆರಿಕ ಪ್ರವಾಸ ಕೈಗೊಂಡಿದ್ದಾರೆ. ಆದಿ ಚುಂಚನಗಿರಿ ಮಹಾಸಂಸ್ಥಾನ ಈ ಟೌನ್ಶಿಪ್ ನಲ್ಲಿ 20 ಎಕರೆ ಜಮೀನು ಖರೀದಿಸಿದೆ. ಇಲ್ಲಿ ನಿರ್ಮಾಣ ಆಗುತ್ತಿರುವ 5000 ಚದರ ಮೀಟರ್ ಕಟ್ಟಡದಲ್ಲಿ ಯೋಗ, ಧ್ಯಾನ ಹಾಗೂ ಇತರೆ ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆ ಉದ್ದೇಶ ಹೊಂದಿದೆ.

ಮೊದಲ ಹಂತದಲ್ಲಿ ದೇವಾಲಯ, ಅರ್ಚಕರ ನಿವಾಸ ನಿರ್ಮಾಣವಾಗಲಿದೆ. ಡಾ. ಅಮರನಾಥಗೌಡ, ಡಾ. ಬಾಬು ಕಿಲಾರ ಅವರ ಮುಂದಾಳತ್ವದಲ್ಲಿ ಈ ಕಾಮಗಾರಿಗಳು ಆರಂಭವಾಗಿವೆ. ಸುಮಾರು 10 ಮಿಲಿಯನ್ ಡಾಲರ್ (80 ಕೋಟಿ ರೂ.) ಮೊತ್ತದ ಯೋಜನೆ ಇದಾಗಿದೆ. ಕಿಲಾರ ಅವರು ದೇವಾಲಯದ ವಿನ್ಯಾಸ, ಪರಿಸರ ಇಲಾಖೆ ಅನುಮತಿ ಮತ್ತು ನಿರ್ಮಾಣದ ಜವಾಬ್ದಾರಿ ವಹಿಸಿಕೊಂಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

2 hours ago

ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…

2 hours ago

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…

11 hours ago

ಕೇಂದ್ರ ಸರ್ಕಾರದ ಸೌಲಭ್ಯಗಳಿಗೆ ‘ಕೇಂದ್ರ ರೈತ ಐಡಿ’ ಕಡ್ಡಾಯ – ಮಂಗಳೂರು ತಾಲೂಕಿನ 14,520 ರೈತರು ಇನ್ನೂ ನೋಂದಣಿ ಬಾಕಿ

ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…

12 hours ago

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಧಾರಣೆ ಏರಿಕೆ | ಮತ್ತೆ ಚೇತರಿಕೆಯ ಸಂಕೇತ ನೀಡಿದ ಅಡಿಕೆ ಧಾರಣೆ

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…

21 hours ago

ಒಂದು ದಿನದ ತೀವ್ರ ಬಿಸಿಲು 3,400 ಹೆಚ್ಚುವರಿ ಸಾವುಗಳಿಗೆ ಕಾರಣ…? ಭಾರತದ ಬಗ್ಗೆ ಬೆಚ್ಚಿಬೀಳಿಸುವ ಅಧ್ಯಯನ

ಭಾರತದಲ್ಲಿ ಕೇವಲ ಒಂದು ದಿನದ ತೀವ್ರ ಬಿಸಿಲು ಸುಮಾರು 3,400 ಹೆಚ್ಚುವರಿ ಸಾವುಗಳಿಗೆ…

1 day ago