Advertisement
ಸುದ್ದಿಗಳು

#Adichunchanagiri |ಅಮೆರಿಕಾದಲ್ಲಿ ತಲೆ ಎತ್ತಲಿದೆ 80 ಕೋಟಿ ರೂ. ವೆಚ್ಚದ ಕಾಲಭೈರವೇಶ್ವರ ದೇಗುಲ : ಕಾಮಗಾರಿ ಪರಿಶೀಲನೆಗೆ ಹೋದ ನಿರ್ಮಾಲಾನಂದ ಶ್ರೀ

Share

ನಮ್ಮ ಕನ್ನಡ ನೆಲೆದ ಸಂಸ್ಕೃತಿ, ಆಚಾರ ವಿಚಾರ, ಧಾರ್ಮಿಕ ಆಚರಣೆ ಎಲ್ಲದಕ್ಕೂ ಅದರದ್ದೇ ಆದ ವಿಶೇಷತೆಯಿದೆ. ನಮ್ಮ ಕನ್ನಡ ನಾಡಿನ ಕಲೆ, ಧಾರ್ಮಿಕ ವಿಚಾರಗಳು ಕೇವಲ ನಮ್ಮಲ್ಲಿ ಮಾತ್ರ ಆಚರಣೆ ಮಾಡದೆ, ಹೊರ ದೇಶದಲ್ಲೂ ಪಸರಿಸಿದೆ. ಇದಕ್ಕಾಗಿ ನಮ್ಮ ರಾಜ್ಯದ ಅದೆಷ್ಟೋ ಮಠಗಳು, ಸ್ವಾಮೀಜಿಗಳು ಮಹಾನ್ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಈಗ ನಮ್ಮ ರಾಜ್ಯದ ಹೆಮ್ಮೆಯ ಆದಿ ಚುಂಚನಗಿರಿ ಮಠ ತನ್ನ ಕಾರ್ಯವನ್ನು ದೂರದ ಅಮೇರಿಕಾದಲ್ಲೂ ಕೈಗೊಂಡಿದೆ.

ಅಮೆರಿಕದ ನ್ಯೂ ಜೆರ್ಸಿಯ ಫ್ರ್ಯಾಂಕ್ಲಿನ್ ಟೌನ್ಶಿಪ್ ನಲ್ಲಿ ಶ್ರೀ ಆದಿ ಚುಂಚನಗಿರಿ ಮಠದ ವತಿಯಿಂದ 80 ಕೋಟಿ ರೂ. ವೆಚ್ಚದಲ್ಲಿ ಶ್ರೀ ಕಾಲಭೈರವೇಶ್ವರ ದೇಗುಲ ನಿರ್ಮಾಣವಾಗುತ್ತಿದ್ದು, ಮಠಾಧಿಪತಿಗಳಾದ ಶ್ರೀ ನಿರ್ಮಲಾನಂದ ಸ್ವಾಮೀಜಿಗಳು #NirmalanandaSwamiji ಕಾಮಗಾರಿ ಪರಿಶೀಲನೆ ಮಾಡಿದರು.

ಶ್ರೀಗಳು ದೇಗುಲ ಕಾಮಗಾರಿ ಪರಿಶೀಲನೆಗಾಗಿ ಅಮೆರಿಕ ಪ್ರವಾಸ ಕೈಗೊಂಡಿದ್ದಾರೆ. ಆದಿ ಚುಂಚನಗಿರಿ ಮಹಾಸಂಸ್ಥಾನ ಈ ಟೌನ್ಶಿಪ್ ನಲ್ಲಿ 20 ಎಕರೆ ಜಮೀನು ಖರೀದಿಸಿದೆ. ಇಲ್ಲಿ ನಿರ್ಮಾಣ ಆಗುತ್ತಿರುವ 5000 ಚದರ ಮೀಟರ್ ಕಟ್ಟಡದಲ್ಲಿ ಯೋಗ, ಧ್ಯಾನ ಹಾಗೂ ಇತರೆ ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆ ಉದ್ದೇಶ ಹೊಂದಿದೆ.

ಮೊದಲ ಹಂತದಲ್ಲಿ ದೇವಾಲಯ, ಅರ್ಚಕರ ನಿವಾಸ ನಿರ್ಮಾಣವಾಗಲಿದೆ. ಡಾ. ಅಮರನಾಥಗೌಡ, ಡಾ. ಬಾಬು ಕಿಲಾರ ಅವರ ಮುಂದಾಳತ್ವದಲ್ಲಿ ಈ ಕಾಮಗಾರಿಗಳು ಆರಂಭವಾಗಿವೆ. ಸುಮಾರು 10 ಮಿಲಿಯನ್ ಡಾಲರ್ (80 ಕೋಟಿ ರೂ.) ಮೊತ್ತದ ಯೋಜನೆ ಇದಾಗಿದೆ. ಕಿಲಾರ ಅವರು ದೇವಾಲಯದ ವಿನ್ಯಾಸ, ಪರಿಸರ ಇಲಾಖೆ ಅನುಮತಿ ಮತ್ತು ನಿರ್ಮಾಣದ ಜವಾಬ್ದಾರಿ ವಹಿಸಿಕೊಂಡಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ

ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…

5 hours ago

25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು

ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…

13 hours ago

“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ

‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್‌ನಲ್ಲಿ…

15 hours ago

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

20 hours ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

22 hours ago

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

1 day ago