Advertisement
ಸುದ್ದಿಗಳು

ಬೆಂಬಲ ಬೆಲೆ ಯೋಜನೆಯಡಿ ಉಂಡೆ ಕೊಬ್ಬರಿ ಖರೀದಿ ಕೇಂದ್ರ ಆರಂಭ

Share

ರಾಜ್ಯ ಸಹಕಾರ ಮಾರಾಟ ಮಹಾ ಮಂಡಳಿಯಿಂದ ಎಫ್.ಎ.ಕ್ಯೂ ಗುಣಮಟ್ಟದ ಉಂಡೆ ಕೊಬ್ಬರಿಯನ್ನು 2023ನೇ ಸಾಲಿಗೆ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಕೇಂದ್ರ ಸರ್ಕಾರ ಘೋಷಿಸಿರುವ ಬೆಂಬಲ ಬೆಲೆ ದರ ಪ್ರತಿ ಕ್ವಿಂಟಾಲ್‍ಗೆ 11,750 ರೂ.ಗಳಂತೆ ಖರೀದಿಗೆ ಜಿಲ್ಲೆಯಲ್ಲಿ ಕೇಂದ್ರಗಳನ್ನು ತೆರೆಯಲಾಗಿದೆ.

ಖರೀದಿಗೆ ಅಗತ್ಯವಿರುವ ದಾಖಲೆಗಳ ವಿವರ: ಉಂಡೆ ಕೊಬ್ಬರಿ ಖರೀದಿ ಕೇಂದ್ರಗಳಲ್ಲಿ ರೈತರು ತಮ್ಮ ಹೆಸರನ್ನು 2023ರ ಮಾರ್ಚ್ 12ರೊಳಗೆ ನೋಂದಾಯಿಸಿ ನೋಂದಣಿ ಚೀಟಿ ಪಡೆಯಬೇಕು. 2022-23ನೇ ಸಾಲಿನ ಪಹಣಿ ಪತ್ರ, ರೈತರು ತಮ್ಮ ಹೆಸರನ್ನು ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಾಯಿಸಿರಬೇಕು, ರೈತರ ಬಳಿ ಫ್ರೂಟ್ಸ್ ಐಡಿ ಇಲ್ಲದೇ ಇದ್ದಲ್ಲಿ ಅಥವಾ ಪ್ರೂಟ್ಸ್‍ನಲ್ಲಿ ಯಾವುದಾದರು ಮಾಹಿತಿ ಲಭ್ಯವಿಲ್ಲದಿದ್ದಲ್ಲಿ, ತಪ್ಪಿದ್ದಲ್ಲಿ ರೈತರು ಕೃಷಿ ಇಲಾಖೆಯನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದು. ಆಧಾರ್ ಕಾರ್ಡ್, ಬ್ಯಾಂಕ್ ಖಾತೆ (ಆಧಾರ್ ಕಾರ್ಡ್‍ನೊಂದಿಗೆ ಜೋಡಣೆಗೊಂಡ) ಪುಸ್ತಕದ ನಕಲು ಪ್ರತಿ. ಎಫ್.ಎ.ಕ್ಯೂ ಗುಣಮಟ್ಟದ ಉಂಡೆ ಕೊಬ್ಬರಿ ಉತ್ಪನ್ನವನ್ನು ಕೇಂದ್ರಕ್ಕೆ ಮಾರಲು ತರುವುದು. ಪ್ರತಿ ಎಕರೆಗೆ 6 ಕ್ವಿಂಟಾಲ್ ಗರಿಷ್ಠ ಪ್ರಮಾಣ ಹಾಗೂ ನಿಗಧಿತ ಅವಧಿಯೊಳಗೆ ನೋಂದಣಿಗೊಂಡ ಪ್ರತಿ ರೈತರಿಂದ ಗರಿಷ್ಠ 20ಕ್ವಿಂಟಾಲ್ ಮಾತ್ರ ಖರೀದಿಸಲಾಗುವುದು. ಉಂಡೆ ಕೊಬ್ಬರಿ ಉತ್ಪನ್ನವನ್ನು 2023ರ ಜುಲೈ27ರ ವರೆಗೆ ಬೆಳಿಗ್ಗೆ 8ರಿಂದ ಸಂಜೆ 6 ಗಂಟೆಯವರೆಗೆ ಸರ್ಕಾರಿ ರಜೆ ದಿನಗಳನ್ನು ಹೊರತುಪಡಿಸಿ ಉಳಿದ ದಿನಗಳಲ್ಲಿ ಖರೀದಿಸಲಾಗುವುದು.

ತಾಲೂಕು, ಖರೀದಿ ಕೇಂದ್ರ ಹಾಗೂ ಸ್ಥಳ, ಖರೀದಿ ಕೇಂದ್ರದಲ್ಲಿ ಕಾರ್ಯನಿರ್ವಹಿಸುವವರ ಹೆಸರು ಹಾಗೂ ಅವರ ಮೊಬೈಲ್ ಸಂಖ್ಯೆಯ ವಿವರಗಳು ಕ್ರಮವಾಗಿ ಇಂತಿವೆ:

ಮಂಗಳೂರು ತಾಲೂಕಿನ ಮಂಗಳೂರಿನ ಪದು ಶಕ್ತಿನಗರ ಕೇಂದ್ರದ ವಿರೇಂದ್ರ ಎಸ್-9663758820, ಮೂಡಬಿದ್ರೆ ತಾಲೂಕಿನ ಮೂಡಬಿದ್ರೆಯ ಅಲಂಗಾರು ಕೇಂದ್ರದ ಚೇತನ್ ನಾಯಕ್ ಎಂ.ಎಸ್-9739392423, ಬಂಟ್ವಾಳ ತಾಲೂಕಿನ ಕಳ್ಳಿಗೆಯಲ್ಲಿರುವ ಟಿ.ಎ.ಪಿ.ಸಿ.ಎಂ.ಎಸ್. ಆವರಣ ಕೇಂದ್ರದ ವಿರೇಂದ್ರ ಎಸ್. – 9663758820, ಬೆಳ್ತಂಗಡಿ ತಾಲೂಕಿನ ಎ.ಪಿ.ಎಂ.ಸಿ ಕೇಂದ್ರ, ಪುತ್ತೂರು ತಾಲೂಕಿನ ಎ.ಪಿ.ಎಂ.ಸಿ ಕೇಂದ್ರ ಹಾಗೂ ಸುಳ್ಯ ತಾಲೂಕಿನ ಎ.ಪಿ.ಎಂ.ಸಿ ಕೇಂದ್ರದ ಸಂಪತ್ – 9449864424, ಮಂಗಳೂರು ತಾಲೂಕಿನ ಬೈಕಂಪಾಡಿ ಮಾರುಕಟ್ಟೆ ಪ್ರಾಂಗಣ ಕೇಂದ್ರದ ಚೇತನ್ ನಾಯಕ್ ಎಂ.ಎಸ್. – 9739392423 ಅವರನ್ನು ಸಂಪರ್ಕಿಸಬಹುದು.
ದ ಕ ಜಿಲ್ಲೆಯ ರೈತರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಹಾಗೂ ಯಾವುದೇ ಸಂದರ್ಭದಲ್ಲೂ ರೈತರು ಮಧ್ಯವರ್ತಿಗಳ ಮೊರೆ ಹೋಗದಂತೆ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿಯ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

6 hours ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

13 hours ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

16 hours ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

1 day ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

1 day ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

1 day ago