ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಎಫ್.ಎ.ಕ್ಯೂ. ಗುಣಮಟ್ಟದ ತೊಗರಿ ಖರೀದಿಸಲು ಕೂಡಲೇ ನೋಂದಣಿ ಮಾಡಿಸುವಂತೆ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ರೈತರಲ್ಲಿ ಮನವಿ ಮಾಡಿದ್ದಾರೆ. ಪ್ರತಿ ಕ್ವಿಂಟಾಲ್ ತೊಗರಿಗೆ ಕೇಂದ್ರ ಸರ್ಕಾರ 7550 ರೂಪಾಯಿ ದರ ನಿಗದಿ ಮಾಡಿದ್ದು ಇದಕ್ಕೆ ಕರ್ನಾಟಕ ರಾಜ್ಯ ಸರ್ಕಾರವು ಪ್ರತಿ ಕ್ವಿಂಟಾಲ್ಗೆ 450 ರೂಪಾಯಿ ಪ್ರೋತ್ಸಾಹ ಧನ ನೀಡುವುದಾಗಿ ಘೋಷಿಸಿದೆ. ಹೀಗಾಗಿ ಪ್ರತಿ ಕ್ವಿಂಟಾಲ್ಗೆ 8000 ರೂಪಾಯಿಗಳಂತೆ ಪ್ರತಿ ಎಕರೆಗೆ 4 ಕ್ವಿಂಟಾಲ್ನಂತೆ ಪ್ರತಿ ರೈತರಿಂದ ಗರಿಷ್ಠ 40 ಕ್ವಿಂಟಾಲ್ ತೊಗರಿ ಖರೀದಿಗೆ ನಿರ್ಧರಿಸಲಾಗಿದೆ. ಹಣವನ್ನು ಡಿ.ಬಿ.ಟಿ ಮೂಲಕ ರೈತರ ಬ್ಯಾಂಕ್ ಖಾತೆಗೆ ನೇರವಾಗಿ ಜಮಾ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.
ರಾಜ್ಯದ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಜುಲೈ 5ರಿಂದ 9ರವರೆಗೆ ಒಂದು ಅಥವಾ ಎರಡು…
ರಾಜ್ಯದಲ್ಲಿ ಮುಂಗಾರು ಚಟುವಟಿಕೆ ಮುಂದುವರಿದಿದ್ದು, ಜು. 4ರ ಬೆಳಿಗ್ಗೆ 8 ಗಂಟೆಯವರೆಗಿನ ಹವಾಮಾನ…
ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕಳೆದ ಕೆಲವು ದಿನಗಳಿಂದ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆ ಹಾಗೂ ಭಾರತೀಯ ಹವಾಮಾನ ಇಲಾಖೆಯ…
ರಾಜ್ಯದ ಬಹುತೇಕ ಭಾಗಗಳಲ್ಲಿ ಮುಂದಿನ ಕೆಲವು ದಿನಗಳು ಬಿಟ್ಟು ಬಿಟ್ಟು ಸಾಧಾರಣ ಮಳೆ…
ಜೀವನೋಪಾಯದ ಒತ್ತಡದಿಂದ ಗ್ರಾಮಸಭೆಗೆ 55.5% ಗ್ರಾಮೀಣರು ಹಾಜರಾಗುತ್ತಿಲ್ಲ ಎಂದು ರಾಷ್ಟ್ರೀಯ ಅಧ್ಯಯನ ತಿಳಿಸಿದೆ.…