Advertisement
MIRROR FOCUS

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

Share

ಕೋಲಾರದಲ್ಲಿ ಸಾರ್ವಜನಿಕರ ಆರೋಗ್ಯದ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ ಎಂಬ ಸ್ಪಷ್ಟ ಸಂದೇಶ ನೀಡಿರುವ ಜಿಲ್ಲಾಡಳಿತ, ಮುಳಬಾಗಿಲಿನ ಪ್ರತಿಷ್ಠಿತ ಹೋಟೆಲ್ ಮೇಲೆ ಕಠಿಣ ಕ್ರಮ ಕೈಗೊಂಡಿದೆ. ಆಹಾರ ಸುರಕ್ಷತಾ ನಿಯಮಗಳನ್ನು ನಿರಂತರವಾಗಿ ಉಲ್ಲಂಘಿಸಿದ್ದ ಹಿನ್ನೆಲೆಯಲ್ಲಿ ದಾಳಿ ನಡೆಸಿ ಭಾರಿ ದಂಡ ವಿಧಿಸಲಾಗಿದೆ.

ಜಿಲ್ಲಾಧಿಕಾರಿ ಡಾ. ಎಂ ಆರ್‌ ರವಿ ಅವರ ಆದೇಶದ ಮೇರೆಗೆ, ಮುಳಬಾಗಿಲು ತಾಲ್ಲೂಕು ದಂಡಾಧಿಕಾರಿಗಳು, ಆಹಾರ ಸುರಕ್ಷತಾ ಅಧಿಕಾರಿಗಳು, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಗ್ರಾಮಾಂತರ ಪೊಲೀಸ್ ತಂಡ ಜಂಟಿಯಾಗಿ ದಾಳಿ ನಡೆಸಿದರು.

ಈ ವೇಳೆ ಹೋಟೆಲ್‌ನಿಂದ ಸುಮಾರು 30 ಲೀಟರ್ ಅವಧಿ ಮೀರಿದ ತುಪ್ಪವನ್ನು ವಶಪಡಿಸಿಕೊಳ್ಳಲಾಗಿದೆ. ಈ ಘಟನೆ ಆಹಾರ ಸುರಕ್ಷತಾ ನಿಯಮಗಳ ಗಂಭೀರ ಉಲ್ಲಂಘನೆಯಾಗಿ ಪರಿಗಣಿಸಿ, ಹೋಟೆಲ್‌ಗೆ ₹99,999 ದಂಡ ವಿಧಿಸಲಾಗಿದೆ. ಈ ಮೊತ್ತವನ್ನು ಸರ್ಕಾರಿ ಖಜಾನೆಗೆ ಜಮೆ ಮಾಡಲಾಗಿದೆ.

ಇದಲ್ಲದೆ, ಮುಂದಿನ ದಿನಗಳಲ್ಲಿ ಯಾವುದೇ ರೀತಿಯ ನಿಯಮ ಉಲ್ಲಂಘನೆ ನಡೆಯದಂತೆ ನೋಡಿಕೊಳ್ಳುವುದಾಗಿ ಹೋಟೆಲ್ ವ್ಯವಸ್ಥಾಪಕರಿಂದ ಲಿಖಿತ ಮುಚ್ಚಳಿಕೆಯನ್ನು ಅಧಿಕಾರಿಗಳು ಪಡೆದಿದ್ದಾರೆ. ಆಹಾರ ಸುರಕ್ಷತಾ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಪಾಲಿಸಲು ಸೂಚನೆ ನೀಡಲಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Authorities in Kolar conducted a raid on a hotel in Mulabagilu and seized 30 liters of expired ghee. A fine of ₹99,999 was imposed for violating food safety norms.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

11 hours ago

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

15 hours ago

ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ

ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…

17 hours ago

ಪಿಒಪಿ ಗಣಪತಿಗೆ ಬ್ರೇಕ್..? ಕರಾವಳಿಯ 90–95% ಪರಿಸರ ಸ್ನೇಹಿ ಮಾದರಿ ರಾಜ್ಯಕ್ಕೆ ಪಾಠ

ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…

19 hours ago

ಪಶ್ಚಿಮ ಘಟ್ಟ ಸಂರಕ್ಷಣೆ ಹೆಸರಿನಲ್ಲಿ ಕೃಷಿಕರಿಗೆ ನಿರ್ಬಂಧ ಬೇಡ – ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕರಿಸಲು ಆಗ್ರಹ

ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…

19 hours ago

ಮುಂಗಾರು ಬೇಗನೆ ವಿದಾಯ ಹೇಳುತ್ತಿದೆಯೇ..? ಸೆಪ್ಟೆಂಬರ್‌ನಲ್ಲಿ ಮಳೆ ಕಡಿಮೆಯಾಗುವ ಮುನ್ಸೂಚನೆ..?

ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…

1 day ago