Advertisement
MIRROR FOCUS

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

Share

ಕೋಲಾರದಲ್ಲಿ ಸಾರ್ವಜನಿಕರ ಆರೋಗ್ಯದ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ ಎಂಬ ಸ್ಪಷ್ಟ ಸಂದೇಶ ನೀಡಿರುವ ಜಿಲ್ಲಾಡಳಿತ, ಮುಳಬಾಗಿಲಿನ ಪ್ರತಿಷ್ಠಿತ ಹೋಟೆಲ್ ಮೇಲೆ ಕಠಿಣ ಕ್ರಮ ಕೈಗೊಂಡಿದೆ. ಆಹಾರ ಸುರಕ್ಷತಾ ನಿಯಮಗಳನ್ನು ನಿರಂತರವಾಗಿ ಉಲ್ಲಂಘಿಸಿದ್ದ ಹಿನ್ನೆಲೆಯಲ್ಲಿ ದಾಳಿ ನಡೆಸಿ ಭಾರಿ ದಂಡ ವಿಧಿಸಲಾಗಿದೆ.

ಜಿಲ್ಲಾಧಿಕಾರಿ ಡಾ. ಎಂ ಆರ್‌ ರವಿ ಅವರ ಆದೇಶದ ಮೇರೆಗೆ, ಮುಳಬಾಗಿಲು ತಾಲ್ಲೂಕು ದಂಡಾಧಿಕಾರಿಗಳು, ಆಹಾರ ಸುರಕ್ಷತಾ ಅಧಿಕಾರಿಗಳು, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಗ್ರಾಮಾಂತರ ಪೊಲೀಸ್ ತಂಡ ಜಂಟಿಯಾಗಿ ದಾಳಿ ನಡೆಸಿದರು.

ಈ ವೇಳೆ ಹೋಟೆಲ್‌ನಿಂದ ಸುಮಾರು 30 ಲೀಟರ್ ಅವಧಿ ಮೀರಿದ ತುಪ್ಪವನ್ನು ವಶಪಡಿಸಿಕೊಳ್ಳಲಾಗಿದೆ. ಈ ಘಟನೆ ಆಹಾರ ಸುರಕ್ಷತಾ ನಿಯಮಗಳ ಗಂಭೀರ ಉಲ್ಲಂಘನೆಯಾಗಿ ಪರಿಗಣಿಸಿ, ಹೋಟೆಲ್‌ಗೆ ₹99,999 ದಂಡ ವಿಧಿಸಲಾಗಿದೆ. ಈ ಮೊತ್ತವನ್ನು ಸರ್ಕಾರಿ ಖಜಾನೆಗೆ ಜಮೆ ಮಾಡಲಾಗಿದೆ.

ಇದಲ್ಲದೆ, ಮುಂದಿನ ದಿನಗಳಲ್ಲಿ ಯಾವುದೇ ರೀತಿಯ ನಿಯಮ ಉಲ್ಲಂಘನೆ ನಡೆಯದಂತೆ ನೋಡಿಕೊಳ್ಳುವುದಾಗಿ ಹೋಟೆಲ್ ವ್ಯವಸ್ಥಾಪಕರಿಂದ ಲಿಖಿತ ಮುಚ್ಚಳಿಕೆಯನ್ನು ಅಧಿಕಾರಿಗಳು ಪಡೆದಿದ್ದಾರೆ. ಆಹಾರ ಸುರಕ್ಷತಾ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಪಾಲಿಸಲು ಸೂಚನೆ ನೀಡಲಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Authorities in Kolar conducted a raid on a hotel in Mulabagilu and seized 30 liters of expired ghee. A fine of ₹99,999 was imposed for violating food safety norms.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಹವಾಮಾನ ವರದಿ | 13-05-2026| ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಗುಡುಗು ಸಹಿತ ಮಳೆ| ಮೇ 20-25ರೊಳಗೆ ಮುಂಗಾರು ಪ್ರವೇಶ ಸಾಧ್ಯತೆ!

ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…

4 hours ago

ಹವಾಮಾನ ವರದಿ | 12-05-2026 | ಮೇ 20ರ ಸುಮಾರಿಗೆ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ..! |

ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…

1 day ago

ರೋಸ್ಟೆಡ್‌ ಅಡಿಕೆ- ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ | “ರೋಸ್ಟೆಡ್‌ ಅಡಿಕೆ” ವರ್ಗೀಕರಣಕ್ಕೆ ಮುದ್ರೆ, ಜಪ್ತಿ ಸರಕುಗಳಿಗೆ ಮಾರ್ಗಸೂಚಿ

‘ರೋಸ್ಟೆಡ್‌ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ಅಲಹಾಬಾದ್‌ ಹೈಕೋರ್ಟ್‌ ಆದೇಶಕ್ಕೆ ತಾತ್ಕಾಲಿಕ…

1 day ago

ಹವಾಮಾನ ವರದಿ| 10-05-2026 | ರಾಜ್ಯದಲ್ಲಿ ಮಳೆ ಕ್ಷೀಣಿಸುವ ಸೂಚನೆ | ಮೇ 15ರಿಂದ ಮುಂಗಾರು ಮಾರುತ ಚಟುವಟಿಕೆ ಚುರುಕು ಸಾಧ್ಯತೆ

ಕರ್ನಾಟಕದಲ್ಲಿ ಮುಂದಿನ 24 ಗಂಟೆಗಳ ಅವಧಿಯಲ್ಲಿ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ…

3 days ago

ಅಭಿವೃದ್ಧಿ ಹೆಸರಿನಲ್ಲಿ ಮರಗಳನ್ನು ಕಡಿಯುವುದಿಲ್ಲ

ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ…

5 days ago