Advertisement
ಸುದ್ದಿಗಳು

ಉತ್ತರ ಪ್ರದೇಶದ ಮಾಜಿ ಸಿಎಂ ಸಮಾಜವಾದಿ ಪಕ್ಷದ ಸ್ಥಾಪಕ ಮುಲಾಯಂ ಸಿಂಗ್ ಯಾದವ್ ವಿಧಿವಶ

Share

ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ, ಸಮಾಜವಾದಿ ಪಕ್ಷದ ಸ್ಥಾಪಕ ಮುಲಾಯಂ ಸಿಂಗ್ ಯಾದವ್(82) ಸೋಮವಾರ ವಿಧಿವಶರಾದರು. ಅವರು ಹಲವು ಸಮಯಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು.

ವಯೋಸಹಜ ಸಮಸ್ಯೆಯಿಂದ ಬಳಲುತ್ತಿದ್ದ ಮುಲಾಯಂ ಸಿಂಗ್‌ ಯಾದವ್‌ ಅವರು ಕೆಲವು ದಿನಗಳಿಂದ ಗುರುಗ್ರಾಮದಲ್ಲಿರುವ ಮೇದಾಂತ ಆಸ್ಪತ್ರೆಯಲ್ಲಿ  ಚಿಕಿತ್ಸೆ ಪಡೆಯುತ್ತಿದ್ದರು. ಹಲವು ದಿನಗಳಿಂದ ಜೀವರಕ್ಷಕ ಔಷಧಿಗಳನ್ನು ನೀಡಿ ಚಿಕಿತ್ಸೆ ನೀಡಲಾಗುತ್ತಿತ್ತು. ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ಸಂಜೀವ್ ಗುಪ್ತ ನೇತೃತ್ವದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.

ಮುಲಾಯಂ ಸಿಂಗ್ ಯಾದವ್ ಆಗ್ರಾ ವಿಶ್ವವಿದ್ಯಾಲಯದಿಂದ ಪೊಲಿಟಿಕಲ್ ಸೈನ್ಸ್‌ನಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದರು. 15ನೇ ವಯಸ್ಸಿನಲ್ಲಿಯೇ ರಾಜಕೀಯದ ಸಂಪರ್ಕ ಪಡೆದ ಅವರು, ರಾಮ್ ಮನೋಹರ್ ಲೋಹಿಯಾ ಪ್ರಭಾವಕ್ಕೆ ಒಳಗಾದರು.1939, ನವೆಂಬರ್ 22ರಂದು ಜನಿಸಿದ ಮುಲಾಯಂ ಸಿಂಗ್ ಯಾದವ್ 1967 ರಲ್ಲಿ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದರು.1974 ರಲ್ಲಿ ಮರು ಆಯ್ಕೆಯಾದರು. ತುರ್ತು ಪರಿಸ್ಥಿತಿ ಘೋಷಣೆ ಮಾಡಿದಾಗ ಬಂಧನಕ್ಕೊಳಗಾದರು. 1977ರಲ್ಲಿ ಬಿಡುಗಡೆಗೊಂಡ ಬಳಿಕ ಮತ್ತೆ ಚುನಾವಣೆಗೆ ಸ್ಪರ್ಧಿಸಿ ಗೆಲುವು ಕಂಡರು. 1989-91, 1993-95 ಮತ್ತು 2003-07ರ ತನಕ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಣೆ ಮಾಡಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

19 hours ago

ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ

ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…

19 hours ago

ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!

ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…

1 day ago

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

2 days ago

ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ

ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…

2 days ago

ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ

ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…

2 days ago