Advertisement
ಸುದ್ದಿಗಳು

ಮುಳಿಯ ಕೃಷಿಗೋಷ್ಟಿ | ಕೃಷಿಕರೇ ಕೃಷಿ ಮಾರುಕಟ್ಟೆ ಸೃಷ್ಟಿಸಿಕೊಳ್ಳುವುದು ಹೇಗೆ..?

Share

ಕೃಷಿಯಷ್ಟೇ ಅಲ್ಲ ಕೃಷಿ ವಸ್ತುಗಳ ಮಾರುಕಟ್ಟೆ ಹಾಗೂ ಕೃಷಿ ಬೆಳವಣಿಗೆಯ  ಬಗ್ಗೆ ಪುತ್ತೂರಿನ ಮುಳಿಯ ಗೋಲ್ಡ್‌ ಮತ್ತು ಡೈಮಂಡ್‌  ಇದರ ಸುಲೋಚನಾ ಟವರ್ಸ್‌ನ ಅಪರಂಜಿ ರೂಫ್‌ ಗಾರ್ಡನ್‌ನಲ್ಲಿ ಭಾನುವಾರ ಸಂವಾದ ಕಾರ್ಯಕ್ರಮ ನಡೆಯಿತು.

ಮುಳಿಯ ನೂತನ ನವೀಕೃತ ವಿಸ್ತೃತ ಆಭರಣ ಮಳಿಗೆಯ ಅನಾವರಣ ಪ್ರಯುಕ್ತ ಕೃಷಿ ಬೆಳವಣಿಗೆಗೆ ಸಂವಾದ ವೇದಿಕೆಯನ್ನು ಸೃಷ್ಟಿಸಲಾಗಿತ್ತು. ಕಾರ್ಯಕ್ರಮ  ಉದ್ಘಾಟಿಸಿದ ಮುಳಿಯ ಗೋಲ್ಡ್‌ ಮತ್ತು ಡೈಮಂಡ್‌ ಆಡಳಿತ ಮಂಡಳಿಯ ಕೃಷ್ಣ ನಾರಾಯಣ ಮುಳಿಯ ಅವರು ಕೃಷಿ ಬೆಳವಣಿಗೆಗೆ ವೈಚಾರಿಕವಾದ ಚಿಂತನೆಗಳು ಅಗತ್ಯ ಇದೆ. ಕೃಷಿಯ ಮಾರುಕಟ್ಟೆಯ ದೃಷ್ಟಿಯನ್ನು ಕೂಡಾ ಸರಿಯಾಗಿ ಗಮನಿಸಿಕೊಂಡು ಕೃಷಿ ಮಾಡಿದಾಗ ಯಶಸ್ಸು ಸಾಧ್ಯ ಎಂದರು.

ಕೃಷಿಯ ಜೊತೆಗೆ ಕೃಷಿ ವಸ್ತುಗಳ ಮಾರುಕಟ್ಟೆ ಹೇಗೆ , ಕೃಷಿಕನೇ ಕಡಿಮೆ ವೆಚ್ಚದಲ್ಲಿ ಹೇಗೆ ಮಾರುಕಟ್ಟೆ ಮಾಡಬಹುದು ಎನ್ನುವುದು ಕೂಡಾ ಮುಖ್ಯ ಈ ದೃಷ್ಟಿಯಿಂದ ಸೀತಾಂಗೋಳಿ ಬಳಿಯ ಕಾವೇರಿಕಾನದ ಕೃಷಿಕ ಕೃಷ್ಣಪ್ರಸಾದ್‌ ಅವರು ಮಾತನಾಡಿ, ಕೃಷಿ ಮಾರುಕಟ್ಟೆ , ದರ ನಿಗದಿ ಎಲ್ಲವೂ ಕೃಷಿಕನಿಗೆ ಸಾಧ್ಯ ಇದೆ. ಆದರೆ ತಾಳ್ಮೆ ಹಾಗೂ ಧೈರ್ಯ ಅಗತ್ಯ ಎಂದರು.

ಕೃಷಿ ಅಭಿವೃಧ್ಧಿಗೆ ರೈತರಿಗೆ ಕೈಗೆಟಕುವ ದರದಲ್ಲಿ ಯಂತ್ರಗಳನ್ನು ತಾವೇ ಆವಿಷ್ಕಾರ ಮಾಡಿರುವ ಭಾಸ್ಕರ ಗೌಡ ಚಾರ್ವಾಕ, ಅನಿವಾರ್ಯತೆಗಳೇ ಕೃಷಿಯಲ್ಲಿ ಹೊಸ ಆವಿಷ್ಕಾರಗಳಿಗೆ ಕಾರಣವಾಗುತ್ತದೆ.  ನಮಗೆ ಮರ ಏರಲು ಕಷ್ಟವಾದಾಗ ಸರಳವಾದ ಯಂತ್ರದ ಆವಿಷ್ಕಾರ ಸಾಧ್ಯವಾಯಿತು ಎಂದರು.

ಕೃಷಿಕರ ನಿರೀಕ್ಷೆಗಳ  ಬಗ್ಗೆ ಮಾತನಾಡಿದ ಕೃಷಿಕ ಡಾ.ವೇಣುಗೋಪಾಲ ಕಳೆಯತ್ತೋಡಿ,ಕೃಷಿ ಎನ್ನುವುದು ಸೋಲಿನ ಕೆಲಸವಲ್ಲ. ಕೃಷಿಯಲ್ಲಿ ಯಶಸ್ವಿಯಾದ ಬದುಕು ಇದೆ. ಕೃಷಿ ಬದುಕು ಸುಂದರವಾಗಿ ರೂಪಿಸಿಕೊಳ್ಳಲು ಯೋಜನೆಗಳನ್ನು ಕೂಡಾ ಹಾಕಿಕೊಳ್ಳಬೇಕು ಎಂದರು.

ಅಡಿಕೆಯ ಜೊತೆಗೆ ಉಪಬೆಳೆಯಾಗಿ ತರಕಾರಿ ಕೃಷಿಯನ್ನು ಮಾಡುತ್ತಿರುವ  ಎಂಟೆಕ್‌ ಪದವೀಧರ ಕೃಷಿಕ ಸುಬ್ರಹ್ಮಣ್ಯ ಪ್ರಸಾದ್‌ ಚಣಿಲ, ತರಕಾರಿ ಕೃಷಿಯಲ್ಲಿ ಸಮಯ ಹಾಗೂ ತೊಡಗಿಸಿಕೊಳ್ಳುವಿಕೆ ಅತೀ ಮುಖ್ಯ. ಮಾರುಕಟ್ಟೆ ಬಗ್ಗೆ ಸದ್ಯ ಯೋಚಿಸಬೇಕಾದ ಅಗತ್ಯ ಇಲ್ಲ. ತರಕಾರಿ ಸದಾ ಬೇಡಿಕೆ ಇರುವ ವಸ್ತು. ಹೀಗಾಗಿ ಈ ಕೃಷಿ ದೀರ್ಘಕಾಲಿಕ ಮತ್ತು ನಿರಂತರವಾಗಿರಬೇಕು ಎಂದರು.

ಕೃಷಿ- ಪರಿಸರ ಸಂಬಂಧಿತ ಸುದ್ದಿಗಳಿಗಾಗಿ “ದ ರೂರಲ್‌ ಮಿರರ್.ಕಾಂ” ವ್ಯಾಟ್ಸಪ್‌ ಚಾನೆಲ್‌ ಫಾಲೋ ಮಾಡಿ | ಫಾಲೋ ಮಾಡಲು ಇಲ್ಲಿ ಕ್ಲಿಕ್‌ ಮಾಡಿರಿ..

ಕೃಷಿಕನೂ ಮಾಧ್ಯಮದ ಮೂಲಕ ಹೇಗೆ ನೀಡಬಹುದು ಹಾಗೂ ಕೃಷಿಯಲ್ಲಿ ಡಿಜಿಟಲ್‌ ಮಾಧ್ಯಮದ ಪಾತ್ರದ ಬಗ್ಗೆ ಯೂಟ್ಯೂಬರ್ ರಾಧಾಕೃಷ್ಣ ಆನೆಗುಂಡಿ ಮಾತನಾಡಿ, ಕೃಷಿಕನೂ ಇಂದು ಡಿಜಿಟಲ್‌  ಮಾಧ್ಯಮದ ಮೂಲಕ ಅನುಭವದ ಮಾಹಿತಿಗಳನ್ನು ಹಂಚಿಕೊಳ್ಳುವ ಮೂಲಕ ಮುಂದಿನ ತಲೆಮಾರಿಗೆ ದಾಖಲೆಗಳನ್ನು ಇಡಬಹುದು ಎಂದು ಹೇಳಿದರು.

ಸಮಾರೋಪ ಕಾರ್ಯಕ್ರಮದಲ್ಲಿ ಮಾತನಾಡಿದ  ಮುಳಿಯ ಗೋಲ್ಡ್‌ ಮತ್ತು ಡೈಮಂಡ್‌ ಆಡಳಿತ ಮಂಡಳಿಯ ಕೇಶವ ಪ್ರಸಾದ್‌ ಮುಳಿಯ, ಕೃಷಿ ಕೂಡಾ ಉದ್ಯಮದ ರೂಪ ಪಡೆಯಬೇಕು. ಸಾತ್ವಿಕ ಲಾಭ ಇಲ್ಲದೇ ಹೋದರೆ ಯಾವ ಕೆಲಸವೂ ಹೆಚ್ಚು ಸಮಯ ಉಳಿಯಲು ಸಾಧ್ಯವಿಲ್ಲ. ಹೀಗಾಗಿ ಕೃಷಿ ಕೂಡಾ ಉದ್ಯಮವಾದರೆ ಮಾತ್ರವೇ ಕೃಷಿ ನಿರಂತರವಾಗಿ ಸುದೃಢವಾಗಿ ಮುಂದೆ ಸಾಗಬಹುದು ಎಂದು ಹೇಳಿದರು.

ಕೃಷಿ ಸಂವಾದವನ್ನು ಪತ್ರಕರ್ತ, ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷ ಮಹೇಶ್‌ ಪುಚ್ಚಪ್ಪಾಡಿ ಹಾಗೂ ಮುಳಿಯ ಮಾರ್ಕೆಂಟಿಗ್‌ ವಿಭಾಗದ ಸಲಹೆಗಾರ ವೇಣು ಶರ್ಮ ನಡೆಸಿದರು.

ಕೃಷಿ- ಪರಿಸರ ಸಂಬಂಧಿತ ಸುದ್ದಿಗಳಿಗಾಗಿ “ದ ರೂರಲ್‌ ಮಿರರ್.ಕಾಂ” ವ್ಯಾಟ್ಸಪ್‌ ಚಾನೆಲ್‌ ಫಾಲೋ ಮಾಡಿ | ಫಾಲೋ ಮಾಡಲು ಇಲ್ಲಿ ಕ್ಲಿಕ್‌ ಮಾಡಿರಿ..

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..

ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…

7 hours ago

ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ

ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…

8 hours ago

ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ

ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…

9 hours ago

ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?

ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…

15 hours ago

‘ಅರ್ಧ ಎಕರೆ ಸಾಕು… ಹಳ್ಳಿಯಲ್ಲೇ ಜೀವನ ಮಾಡಬಹುದು’ ಈ ಮಾತಿನ ಹಿಂದೆ ಇರುವ ದೊಡ್ಡ ಪ್ರಶ್ನೆ ಏನು..?

“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…

21 hours ago

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

1 day ago