ಮುಳಿಯ ಗಾನರಥ | ಕರೋಕೆ ಹಾಡುಗಳ ಗಾಯನ ಸ್ಪರ್ಧೆ | 7 ನೇ ಸುತ್ತಿನ ಆಡಿಷನ್ ಮಾ.12ರಂದು ಉಪ್ಪಿನಂಗಡಿಯಲ್ಲಿ |

March 9, 2022
8:20 PM

ಅಮೃತ ಮಹೋತ್ಸವ ಸಂಭ್ರಮದಲ್ಲಿರುವ ನಾಡಿನ ಹೆಸರಾಂತ ಚಿನ್ನಾಭರಣಗಳ ಮಳಿಗೆ ಮುಳಿಯ ಜ್ಯುವೆಲ್ಸ್ ಕಲೆ-ಸಂಸ್ಕೃತಿಗಳಿಗೆ ಬೆಂಬಲ ನೀಡುವ ಮತ್ತು ಗ್ರಾಮೀಣ ಪ್ರತಿಭೆಗಳಿಗೆ ಅವಕಾಶ ನೀಡುವ ಸಲುವಾಗಿ ಆಯೋಜಿಸುತ್ತಿರುವ “ಮುಳಿಯ ಗಾನರಥ” ಕರೋಕೆ ಹಾಡುಗಳ ಗಾಯನ ಸ್ಫರ್ಧೆಯ ಏಳನೇ ಆಡಿಷನ್ ರೌಂಡ್ ಮಾ.12ರಂದು ಉಪ್ಪಿನಂಗಡಿಯಲ್ಲಿ ನಡೆಯಲಿದೆ.

ಉಪಿನಂಗಡಿಯ ಬಸ್ ನಿಲ್ದಾಣದ ಆವರಣದಲ್ಲಿ ಸಂಜೆ 4.30ಕ್ಕೆ ಈ ಕಾರ್ಯಕ್ರಮ ನಡೆಯಲಿದೆ. 12ರಿಂದ 21 ವರ್ಷದೊಳಗಿನವರು ಮೊದಲ ವಿಭಾಗದಲ್ಲಿ ಹಾಗೂ 21 ವರ್ಷಕ್ಕೆ ಮೇಲ್ಪಟ್ಟವರು ಸಾರ್ವಜನಿಕರ ವಿಭಾಗದಲ್ಲಿ ಸ್ಪರ್ಧಿಸಬಹುದಾಗಿದೆ.

ಕನ್ನಡ, ಹಿಂದಿ ತುಳು ಹಾಗೂ ಮಲಯಾಳಂ ಸೇರಿದಂತೆ 4 ಭಾಷೆಗಳ ಹಾಡುಗಳಿಗೆ ಅವಕಾಶ ಕಲ್ಪಿಸಲಾಗಿದೆ.
ಆಡಿಷನ್ ನೋಂದಾವಣೆಗಾಗಿ 9743175916 ಗೆ ಕರೆ ಮಾಡಬಹುದಾಗಿದೆ. ಈ ಕಾರ್ಯಕ್ರಮವನ್ನು ಮುಳಿಯ ಜ್ಯುವೆಲ್ಸ್‍ನ ಫೇಸ್‍ಬುಕ್ ಮುಖಾಂತರವೂ ವೀಕ್ಷಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಸ್ಪರ್ಧೆಯ ನಿಬಂಧನೆಗಳು ಹೀಗಿವೆ:

ಮುಳಿಯ ಗಾನರಥ ಇದೊಂದು ಪುತ್ತೂರು ತಾಲೂಕಿನ ಉದಯೋನ್ಮುಖ ಗಾಯಕ – ಗಾಯಕಿಯವರಿಗೆ ವೇದಿಕೆ ಸೃಷ್ಟಿ ಮಾಡುವ ಅಪೂರ್ವ ಕಾರ್ಯಕ್ರಮವಾಗಿದೆ. ಇದರ ನಿವಂಧನೆಗಳು ಹೀಗಿವೆ.

1. ವಯೋಮಿತಿ ಆಧಾರಕ್ಕಾಗಿ ಆಧಾರ್ ಕಾರ್ಡ್ ಜೆರಾಕ್ಸ್ ಪ್ರತಿ ಕಡ್ಡಾಯ.

2. ಪ್ರೇಕ್ಷಕರಿಗೆ ಕಾರ್ಯಕ್ರಮ ವೀಕ್ಷಿಸಲು ಆನ್‍ಲೈನ್‍ನಲ್ಲಿ ವ್ಯವಸ್ಥೆ ಮಾಡಲಾಗುವುದು.

3. ಕರೋಕೆ ಗಾಯನದಲ್ಲಿ ಹಾಡುವಾಗ ಎಲ್ಲಿಯೂ ಕರೋಕೆ ತಪ್ಪದಂತೆ ಹಾಡಬೇಕು.

4. ಕರೋಕೆ ಗಾಯನ ಹಾಡುವವರು ಕರೋಕೆ ಇರುವ ಶೃತಿಯಲ್ಲಿ ಹಾಡಬೇಕು.

5. ಕರೋಕೆ ಗಾಯನದಲ್ಲಿ ತಾಳಬದ್ಧವಾಗಿ ಹಾಡಬೇಕು, ಸಾಹಿತ್ಯ ತಪ್ಪಾಗಿ ಇರಬಾರದು.

6. ಗೀತೆಯನ್ನು ಅಚ್ಚುಕಟ್ಟಾಗಿ ಪ್ರಸ್ತುತಪಡಿಸಬೇಕು.

7. ಚಿಕ್ಕಮಕ್ಕಳೊಂದಿಗೆ ಪೋಷಕರು ಹಾಜರಿರತಕ್ಕದ್ದು.

8. ವಯೋಮಿತಿ 12 ವಯಸ್ಸಿನಿಂದ 21ರವರೆಗೆ ಹಾಗೂ ಮೇಲ್ಪಟ್ಟ ವಯಸ್ಸಿನವರನ್ನು ಸಾರ್ವಜನಿಕ ವಿಭಾಗವೆಂದು 2 ವಿಭಾಗ ಮಾಡಲಾಗುವುದು.

9. ಆಡಿಷನ್‍ನಲ್ಲಿ 50 ಸ್ಪರ್ಧಿಗಳು ಮೇಲ್ಪಟ್ಟು ಇದ್ದಲ್ಲಿ ಹಾಡಿನ ಪಲ್ಲವಿ ಮತ್ತು ಪ್ರಥಮ ಚರಣ ಮಾತ್ರ ಹಾಡಲು ಅವಕಾಶ ನೀಡಲಾಗುವುದು.

10. ಕರೋಕೆ ಹಾಡುವ ಸ್ಫರ್ಧಿಗಳು ಕನ್ನಡ, ಹಿಂದಿ, ತುಳು ಹಾಗೂ ಮಲಯಾಳಂ ಭಾಷೆಗಳ ಹಾಡುಗಳನ್ನು ಹಾಡಲು ಅವಕಾಶ ಇರುತ್ತದೆ.

11. ಆಡಿಷನ್‍ನಲ್ಲಿ ಭಾಗವಹಿಸಿದ ಪ್ರತೀಯೊಬ್ಬ ಸ್ಪರ್ಧಿಗೂ ಪ್ರಮಾಣ ಪತ್ರ ನೀಡಿ ಪುರಸ್ಕರಿಸಲಾಗುವುದು.

12. ಆಡಿಷನ್ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸ್ಪರ್ಧಿಗಳಲ್ಲಿ ಆಯ್ಕೆಯಾದವರಿಗೆ ಸಮಿ ಫಿನಾಲೆ ಸುತ್ತಿನಲ್ಲಿ ಸ್ಪರ್ಧಿಸಲು ಅವಕಾಶ.

13. ಗ್ರ್ಯಾಂಡ್ ಫಿನಾಲೆಯ ವಿಜೇತರನ್ನು ಪುತ್ತೂರು ಮುಳಿಯ ಗಾನ ಕೋಗಿಲೆ ಎಂಬ ಬಿರುದು ನೀಡಿ ಪುರಸ್ಕರಿಸಲಾಗುವುದು.

14. ನುರಿತ ಹಿನ್ನಲೆ ಸಂಗೀತ ತೀರ್ಪುಗಾರರು ಹಾಗೂ ಸಂಸ್ಥೆಯ ತೀರ್ಮಾನವೇ ಅಂತಿಮ.

15. ಕೋವಿಡ್ ನಿಯಮವನ್ನು ಪಾಲಿಸುವಲ್ಲಿ ಎಲ್ಲರೂ ಸಹಕರಿಸತಕ್ಕದ್ದು.

ಹೆಚ್ಚಿನ ಮಾಹಿತಿಗಾಗಿ ಕಾರ್ಯಕ್ರಮದ ಸಂಯೋಜಕರಾದ ಪ್ರವೀಣ್ ಮತ್ತು ಆನಂದ್ ಕುಲಾಲ್ ಅವರನ್ನು 9743175916 ಮತ್ತು 9844602916 ಸಂಖ್ಯೆಗಳಲ್ಲಿ ಸಂಪರ್ಕಿಸಬಹುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 11-04-2026 | ದಕ್ಷಿಣದಲ್ಲಿ ಮಳೆ, ಉತ್ತರದಲ್ಲಿ ಬಿಸಿ… ಮುಂದೇನು?
April 11, 2026
1:52 PM
by: ಸಾಯಿಶೇಖರ್ ಕರಿಕಳ
ಜನನ-ಮರಣ ನೋಂದಣಿ 21 ದಿನಗಳೊಳಗೆ ಕಡ್ಡಾಯ ನೋಂದಣಿ – ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ
April 11, 2026
7:09 AM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 10-04-2026 | ಕರ್ನಾಟಕ ಹವಾಮಾನ ಅಪ್ಡೇಟ್‌- ಎಪ್ರಿಲ್ 15 ನಂತರ ಮಳೆ …! ಬಿಸಿಲಿನ ಬಿಸಿ ಮುಂದುವರಿಕೆ
April 10, 2026
3:11 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 09-04-2026 | ಕರ್ನಾಟಕದಲ್ಲಿ ಮಳೆ ಸಾಧ್ಯತೆ | ಕರಾವಳಿ–ಮಲೆನಾಡಿನಲ್ಲಿ ಗುಡುಗು ಮಳೆ ಎಚ್ಚರಿಕೆ..!
April 9, 2026
1:23 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror