Advertisement
ಸುದ್ದಿಗಳು

ಮುಳಿಯ ಗಾನರಥ | 8ನೇ ಆಡಿಷನ್‌ ರೌಂಡ್‌ ಅ.22ಕ್ಕೆ- ಪುತ್ತೂರಿನಲ್ಲಿ |

Share

ನಾಡಿನ ಹೆಸರಾಂತ ಮುಳಿಯ ಜ್ಯುವೆಲ್ಸ್‌ ಸಂಸ್ಥೆ ತನ್ನ ಜನಪ್ರಿಯ ಕಾರ್ಯಕ್ರಮವಾದ ಕರೋಕೆ ಹಾಡುಗಳ ಗಾಯನ ಸ್ಪರ್ಧೆ ‘ಮುಳಿಯ ಗಾನರಥ’ದ ಎಂಟನೇ ಆಡಿಷನ್‌ ರೌಂಡ್‌ ಅನ್ನು ಅಕ್ಟೋಬರ್ 22 ರಂದು ಸಂಜೆ 3:30 ಗಂಟೆಗೆ ಕೋರ್ಟ್ ರಸ್ತೆಯಲ್ಲಿರುವ ಮುಳಿಯ ಜುವೆಲ್ಸ್ ನಲ್ಲಿ ಈ ಕಾರ್ಯಕ್ರಮ ನಡೆಯಲಿದೆ.

ಸ್ಪರ್ಧೆಯಲ್ಲಿ 4 ಭಾಷೆಯ ಹಾಡುಗಳಿಗೆ ಅವಕಾಶವಿದೆ. ಕನ್ನಡ, ಹಿಂದಿ, ತುಳು ಹಾಗೂ ಮಲಯಾಳಂ ಭಾಷೆಯ ಹಾಡುಗಳನ್ನು ಹಾಡಬಹುದು. 12ರಿಂದ 21 ವರ್ಷದ ಎಳೆಯರ ವಿಭಾಗ ಮತ್ತು 21 ವರ್ಷಕ್ಕೆ ಮೇಲ್ಪಟ್ಟ ಸಾರ್ವಜನಿಕರ ವಿಭಾಗ- ಎಂಬ ಎರಡು ವಿಭಾಗಗಳಲ್ಲಿ ಸ್ಪರ್ಧೆ ನಡೆಯುತ್ತದೆ.

ಆಡಿಷನ್ ನೋಂದಾವಣೆಗಾಗಿ ಬೆಳಗ್ಗೆ 9:30ರಿಂದ ಸಂಜೆ 6:30 ಒಳಗಾಗಿ ಈ ಸಂಖ್ಯೆಗೆ ಕರೆ ಮಾಡುವಂತೆ ಪ್ರಕಟಣೆ ಕೋರಿದೆ. ಕರೆ ಮಾಡಬೇಕಾದ ಸಂಖ್ಯೆ: 9743175916. ಈ ಕಾರ್ಯಕ್ರಮ ಮುಳಿಯ ಜ್ಯುವೆಲ್ಸ್‌ನ ಫೇಸ್‌ಬುಕ್ ಪುಟದಲ್ಲಿ ಲೈವ್‌ ಆಗಿ ಪ್ರಸಾರವಾಗುತ್ತದೆ.

ಸ್ಪರ್ಧೆಯ ನಿಬಂಧನೆಗಳು ಹೀಗಿವೆ:

ಮುಳಿಯ ಗಾನರಥ ಇದೊಂದು ಪುತ್ತೂರು ತಾಲೂಕಿನ ಉದಯೋನ್ಮುಖ ಗಾಯಕ– ಗಾಯಕಿಯವರಿಗೆ ವೇದಿಕೆ ಸೃಷ್ಟಿ ಮಾಡುವ ಅಪೂರ್ವ ಕಾರ್ಯಕ್ರಮವಾಗಿದೆ. ಇದರ ನಿಬಂಧನೆಗಳು ಹೀಗಿವೆ.

1. ವಯೋಮಿತಿ ಆಧಾರಕ್ಕಾಗಿ ಆಧಾರ್ ಕಾರ್ಡ್ ಜೆರಾಕ್ಸ್ ಪ್ರತಿ ಕಡ್ಡಾಯ.

2. ಪ್ರೇಕ್ಷಕರಿಗೆ ಕಾರ್ಯಕ್ರಮ ವೀಕ್ಷಿಸಲು ಆನ್‌ಲೈನ್‌ನಲ್ಲಿ ವ್ಯವಸ್ಥೆ ಮಾಡಲಾಗುವುದು.

3. ಕರೋಕೆ ಗಾಯನದಲ್ಲಿ ಹಾಡುವಾಗ ಎಲ್ಲಿಯೂ ಕರೋಕೆ ತಪ್ಪದಂತೆ ಹಾಡಬೇಕು.

4. ಕರೋಕೆ ಗಾಯನ ಹಾಡುವವರು ಕರೋಕೆ ಇರುವ ಶೃತಿಯಲ್ಲಿ ಹಾಡಬೇಕು.

5. ಕರೋಕೆ ಗಾಯನದಲ್ಲಿ ತಾಳಬದ್ಧವಾಗಿ ಹಾಡಬೇಕು, ಸಾಹಿತ್ಯ ತಪ್ಪಾಗಿ ಇರಬಾರದು.

6. ಗೀತೆಯನ್ನು ಅಚ್ಚುಕಟ್ಟಾಗಿ ಪ್ರಸ್ತುತಪಡಿಸಬೇಕು.

7. ಚಿಕ್ಕಮಕ್ಕಳೊಂದಿಗೆ ಪೋಷಕರು ಹಾಜರಿರತಕ್ಕದ್ದು.

8. ವಯೋಮಿತಿ 12 ವಯಸ್ಸಿನಿಂದ 21ರವರೆಗೆ ಹಾಗೂ ಮೇಲ್ಪಟ್ಟ ವಯಸ್ಸಿನವರನ್ನು ಸಾರ್ವಜನಿಕ ವಿಭಾಗವೆಂದು 2 ವಿಭಾಗ ಮಾಡಲಾಗುವುದು.

9. ಆಡಿಷನ್‌ನಲ್ಲಿ 50 ಸ್ಪರ್ಧಿಗಳು ಮೇಲ್ಪಟ್ಟು ಇದ್ದಲ್ಲಿ ಹಾಡಿನ ಪಲ್ಲವಿ ಮತ್ತು ಪ್ರಥಮ ಚರಣ ಮಾತ್ರ ಹಾಡಲು ಅವಕಾಶ ನೀಡಲಾಗುವುದು.

10. ಕರೋಕೆ ಹಾಡುವ ಸ್ಫರ್ಧಿಗಳು ಕನ್ನಡ, ಹಿಂದಿ, ತುಳು ಹಾಗೂ ಮಲಯಾಳಂ ಭಾಷೆಗಳ ಹಾಡುಗಳನ್ನು ಹಾಡಲು ಅವಕಾಶ ಇರುತ್ತದೆ.

11. ಆಡಿಷನ್‌ನಲ್ಲಿ ಭಾಗವಹಿಸಿದ ಪ್ರತೀಯೊಬ್ಬ ಸ್ಪರ್ಧಿಗೂ ಪ್ರಮಾಣ ಪತ್ರ ನೀಡಿ ಪುರಸ್ಕರಿಸಲಾಗುವುದು.

12. ಆಡಿಷನ್ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸ್ಪರ್ಧಿಗಳಲ್ಲಿ ಆಯ್ಕೆಯಾದವರಿಗೆ ಸೆಮಿ ಫಿನಾಲೆ ಸುತ್ತಿನಲ್ಲಿ ಸ್ಪರ್ಧಿಸಲು ಅವಕಾಶ.

13. ಗ್ರ್ಯಾಂಡ್ ಫಿನಾಲೆಯ ವಿಜೇತರನ್ನು ಪುತ್ತೂರು ಮುಳಿಯ ಗಾನ ಕೋಗಿಲೆ ಎಂಬ ಬಿರುದು ನೀಡಿ ಪುರಸ್ಕರಿಸಲಾಗುವುದು.

14. ನುರಿತ ಹಿನ್ನಲೆ ಸಂಗೀತ ತೀರ್ಪುಗಾರರು ಹಾಗೂ ಸಂಸ್ಥೆಯ ತೀರ್ಮಾನವೇ ಅಂತಿಮ.

ಹೆಚ್ಚಿನ ಮಾಹಿತಿಗಾಗಿ ಕಾರ್ಯಕ್ರಮದ ಸಂಯೋಜಕರಾದ ಪ್ರವೀಣ್ ಮತ್ತು ಆನಂದ್ ಕುಲಾಲ್ ಅವರನ್ನು 9743175916 ಮತ್ತು 9844602916 ಸಂಖ್ಯೆಗಳಲ್ಲಿ ಸಂಪರ್ಕಿಸಬಹುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

“ಮೇ 26ಕ್ಕೇ ಮುಂಗಾರು ಎಂಟ್ರಿ!” ಕರ್ನಾಟಕದಲ್ಲಿ ಭಾರೀ ಮಳೆ ಅಲರ್ಟ್‌, ಮೀನುಗಾರರಿಗೆ ಎಚ್ಚರಿಕೆ

ನೈರುತ್ಯ ಮುಂಗಾರು ಮೇ 26ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು IMD…

11 hours ago

ಕರ್ನಾಟಕಕ್ಕೆ ಭಾರೀ ಮಳೆ ಅಲರ್ಟ್‌ | ಬೆಂಗಳೂರಿನಲ್ಲಿ ಮಳೆ ಸಂಕಷ್ಟ, ಜಿಲ್ಲೆಗಳಲ್ಲಿ ಬೆಳೆಗಳು ಕೊಚ್ಚಿ ಹೋದವು…!

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿದ್ದು, ಬೆಂಗಳೂರಿನಲ್ಲಿ ಜಲಾವೃತ ಪರಿಸ್ಥಿತಿ…

13 hours ago

ಅಡಿಕೆ ಮಾರುಕಟ್ಟೆ ಏಕೆ ನಿಂತಿತು..? ಸವಾಲು ಮತ್ತು ರೈತರ ಭವಿಷ್ಯದ ಪ್ರಶ್ನೆಗಳು ಏನು…?

ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.…

24 hours ago

ಗೋಮಯದಿಂದ ಗ್ರೀನ್‌ ಎನರ್ಜಿ | ದೆಹಲಿಯಲ್ಲಿ 300 ಟನ್ ಜೈವಿಕ ಅನಿಲ ಘಟಕ – ಯಮುನಾ ಮಾಲಿನ್ಯ ತಡೆಗೆ ಮೆಗಾ ಪ್ಲಾನ್‌

ದೆಹಲಿಯ ಗಾಜಿಪುರದಲ್ಲಿ ದಿನಕ್ಕೆ 300 ಟನ್ ಸಾಮರ್ಥ್ಯದ ಜೈವಿಕ ಅನಿಲ ಘಟಕ ಸ್ಥಾಪನೆಗೆ…

1 day ago

ಇಂಡೋ ಫಾಲಿ, ಬರ್ಮಾ ಗೋಟಾ ಹಾವಳಿ : ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಗೆ ನಿಜವಾಗಿಯೂ ಎಷ್ಟು ಹೊಡೆತ?

ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…

2 days ago